AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Traffic Advisory: ಬೆಂಗಳೂರಿನ ಈ ರಸ್ತೆಯಲ್ಲಿ ಒಂದು ತಿಂಗಳು ವಾಹನ ಸಂಚಾರ ಬಂದ್​

ಬೃಹತ್​ ಬೆಂಗಳೂರು ಮಹಾನಗರ ವ್ಯಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು 110 ಹಳ್ಳಿಗಳಿಗೆ ಕುಡಿಯುವ ನೀರು ತಲುಪಿಸಲು ಬಿಡಬ್ಲ್ಯೂಎಸ್‌ಎಸ್​ಬಿ ವತಿಯಿಂದ 1900 ಎಂ.ಎಂ ಡಯಾ ಪೈಪ್ ಲೈನ್‌ಗಳನ್ನು ಅಳವಡಿಸುವ ಕಾಮಗಾರಿ ನಡೆಯುತ್ತಿದೆ. ಹೀಗಾಗಿ ಬೆಂಗಳೂರಿನ ಈ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

Traffic Advisory: ಬೆಂಗಳೂರಿನ ಈ ರಸ್ತೆಯಲ್ಲಿ ಒಂದು ತಿಂಗಳು ವಾಹನ ಸಂಚಾರ ಬಂದ್​
ಬೆಂಗಳೂರು ಟ್ರಾಫಿಕ್​
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Sep 27, 2024 | 8:45 AM

Share

ಬೆಂಗಳೂರು ಸೆಪ್ಟೆಂಬರ್​ 27: ಬೃಹತ್​ ಬೆಂಗಳೂರು ಮಹಾನಗರ ವ್ಯಪ್ತಿಯ (BBMP) 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಕಾವೇರಿ ಐದನೇ ಹಂತದ ಯೋಜನೆಯ ಕಾಮಗಾರಿ ನಡೆಯುತ್ತಿದೆ. ಕಾಮಗಾರಿ ಅಂತಿಮ ಹಂತ ತಲುಪಿದ್ದು, ಇತ್ತೀಚಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar)​ ಪರಿಶೀಲನೆ ನಡೆಸಿದ್ದರು.

110 ಹಳ್ಳಿಗಳಿಗೆ ಕುಡಿಯುವ ನೀರು ತಲುಪಿಸಲು ಉತ್ತರಹಳ್ಳಿ ರಸ್ತೆಯಲ್ಲಿ ಬಿಡಬ್ಲ್ಯೂಎಸ್‌ಎಸ್​ಬಿ ವತಿಯಿಂದ 1900 ಎಂ.ಎಂ ಡಯಾ ಪೈಪ್ ಲೈನ್‌ಗಳನ್ನು ಅಳವಡಿಸುವ ಕಾಮಗಾರಿ ನಡೆಯುತ್ತಿದೆ. ಕಾಮಗಾರಿಯಿಂದ ಉತ್ತರಹಳ್ಳಿ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ.

ಹೀಗಾಗಿ ಸುಗಮ ಸಂಚಾರ ದೃಷ್ಟಿಯಿಂದ “ಬಿಜಿಎಸ್ ಜಂಕ್ಷನ್ ಕಡೆಯಿಂದ ಮಧು ಪೆಟ್ರೋಲ್ ಬಂಕ್ ಜಂಕ್ಷನ್ (ಪೂರ್ವದಿಂದ ಪಶ್ಚಿಮಕ್ಕೆ)” ವರೆಗಿನ ರಸ್ತೆಯಲ್ಲಿ ಇಂದಿನಿಂದ (ಸೆ.27) ಒಂದು ತಿಂಗಳ ಕಾಲ ಎಲ್ಲ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಬೆಂಗಳೂರು ಸಂಚಾರಿ ಪೊಲೀಸರು ಮಾದ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ಪರ್ಯಾಯ ಮಾರ್ಗ

ಬಿಜಿಎಸ್ ಜಂಕ್ಷನ್ ಕಡೆಯಿಂದ ಮಧು ಪೆಟ್ರೋಲ್ ಬಂಕ್ ಜಂಕ್ಷನ್ (ಮೈಸೂರು ರಸ್ತೆ) ಕಡೆಗೆ ಸಂಚರಿಸುವ ವಾಹನಗಳು ಬಿಜಿಎಸ್ ಆಸ್ಪತ್ರೆ ಜಂಕ್ಷನ್​ನಲ್ಲಿ ಬಲ ತಿರುವು ಪಡೆದು ಮೂಕಾಂಬಿಕ ಸರ್ಕಲ್, ವೃಷಭಾವತಿ ಮೋರಿ ಬ್ರಿಡ್ಜ್ ಮೂಲಕ ಮೈಸೂರು ರಸ್ತೆಗೆ ಪ್ರವೇಶಿಸಬಹುದು.

ಟ್ವಿಟರ್ ಪೋಸ್ಟ್​

ಮೈಸೂರು ರಸ್ತೆಯಿಂದ ಉತ್ತರಹಳ್ಳಿಗೆ ಹೋಗುವ ವಾಹನಗಳು ಮೈಲಸಂದ್ರ ವಿಲೇಜ್ ಜಂಕ್ಷನ್​ನಲ್ಲಿ ಬಲ ತಿರುವು ಪಡೆದು ವಿಲೇಜ್ ಬ್ಯಾಕ್ ಗೇಟ್ ರಸ್ತೆ ಹಾಗೂ ಬಿಜಿಎಸ್ ಜಂಕ್ಷನ್ ಮೂಲಕ ಉತ್ತರಹಳ್ಳಿಗೆ ತಲುಪಬಹುದಾಗಿರುತ್ತದೆ. ನಗರದ ಕಡೆಯಿಂದ ಉತ್ತರಹಳ್ಳಿಗೆ ಹೋಗುವ ವಾಹನಗಳು ಮೈಲಸಂದ್ರ ಜಂಕ್ಷನ್ನಲ್ಲಿ ಎಡ ತಿರುವು ಪಡೆದು ಬಿಜಿಎಸ್ ಜಂಕ್ಷನ್ ಮೂಲಕ ಸಾಗಬಹುದು ಎಂದು ಬೆಂಗಳೂರು ಸಂಚಾರಿ ಪೊಲೀಸ್​ ತಿಳಿಸಿದೆ.

ಇದನ್ನೂ ಓದಿ: ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ವಿದ್ಯುತ್​ ಇರಲ್ಲ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?