AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬನ್ ಪಾರ್ಕ್ ಒಳಗೆ 365 ದಿನವೂ ವಾಹನ ಸಂಚಾರಕ್ಕೆ ಅವಕಾಶ? ಸರ್ಕಾರದಿಂದ ಮಹತ್ವದ ಸಭೆ

ಬೆಂಗಳೂರು ಈಗ ಬಹುತೇಕ ಕಾಂಕ್ರೀಟ್ ಕಾಡಾಗಿ ಬೆಳೆದಿದೆ. ಉಳಿದಿರುವ ಅಲ್ಪ ಸ್ವಲ್ಪ ಪರಿಸರದರಲ್ಲಿ ಜನ ಬದುಕು ಕಂಡುಕೊಳ್ಳುವ ಪರಿಸ್ಥಿತಿ ಇದೆ. ಬೆಂಗಳೂರಿಗರ ಪಾಲಿನ ಆಕ್ಸಿಜನ್ ಪಾರ್ಕ್ ಎಂದೇ ಪ್ರಿಯವಾಗಿರುವ ಕಬ್ಬನ್ ಪಾರ್ಕ್ ಪರಿಸರಕ್ಕೆ ಸರ್ಕಾರ ಕೊಡಲಿ ಪೆಟ್ಟು ನೀಡುವ ಭೀತಿ ಎದುರಾಗಿದೆ. ಸರ್ಕಾರ ಏನು ಮಾಡಲು ಹೊರಟಿದೆ? ವಿರೋಧ ವ್ಯಕ್ತವಾಗಿದ್ದೇಕೆ ಎಂಬ ವಿವರ ಇಲ್ಲಿದೆ.

ಕಬ್ಬನ್ ಪಾರ್ಕ್ ಒಳಗೆ 365 ದಿನವೂ ವಾಹನ ಸಂಚಾರಕ್ಕೆ ಅವಕಾಶ? ಸರ್ಕಾರದಿಂದ ಮಹತ್ವದ ಸಭೆ
ಕಬ್ಬನ್ ಪಾರ್ಕ್
TV9 Web
| Edited By: |

Updated on:Jan 24, 2025 | 8:13 AM

Share

ಬೆಂಗಳೂರು, ಜನವರಿ 24: ಎಲ್ಲೆಲ್ಲೂ ಹಚ್ಚ ಹಸುರಿನ ವಾತಾವರಣ, ನಗರದ ಟ್ರಾಫಿಕ್ ಕಿರಿಕಿರಿಯಿಂದ ತಪ್ಪಿಸಿ ಒಳಬಂದರೆ ಅದೇನೋ ಆನಂದ. ಮೈಂಡ್ ರಿಲ್ಯಾಕ್ಸ್ ಆಗುವ ಜೊತೆಗೆ ಶ್ವಾಸಕೋಶ ಕೂಡ ಫ್ರೀ! ಈ ಎಲ್ಲಾ ಅನುಭವಗಳು ಆಗೋದು ಕಬ್ಬನ್ ಪಾರ್ಕ್ ಒಳಗೆ ಕಾಲಿಟ್ಟಾಗ. 197 ಎಕರೆ ವಿಶಾಲವಾದ ಜಾಗದಲ್ಲಿ ಹರಡಿರುವ ಕಬ್ಬನ್ ಪಾರ್ಕ್ ಬೆಂಗಳೂರು ನಗರ ಜನರ ಪಾಲಿನ ಆಕ್ಸಿಜನ್ ಪಾರ್ಕ್. ಆದರೆ, ಇತ್ತೀಚಿಗೆ ಕಬ್ಬನ್ ಪಾರ್ಕ್ ಪರಿಸರಕ್ಕೆ ಕೊಡಲಿ ಪೆಟ್ಟು ಬೀಳುವ ಆತಂಕ ಎದುರಾಗಿದೆ. ಕಬ್ಬನ್ ಪಾರ್ಕ್ ಪರಿಸರ ಉಳಿಸುವ ನಿಟ್ಟಿನಲ್ಲಿ ತೋಟಗಾರಿಕೆ ಇಲಾಖೆ ಹತ್ತು ಹಲವು ಕಾರ್ಯಕ್ರಮಗಳನ್ನು ರೂಪಿಸಿದೆ. ಈ ಪೈಕಿ ಎರಡನೇ ಹಾಗೂ ನಾಲ್ಕನೇ ಶನಿವಾರ, ಭಾನುವಾರ ಹಾಗೂ ಸರ್ಕಾರಿ ದಿನಗಳಲ್ಲಿ ಕಬ್ಬನ್ ಪಾರ್ಕ್ ಒಳಗೆ ವಾಹನಗಳ ಓಡಾಟಕ್ಕೆ ನಿಷೇಧ ಹೇರಿದೆ. ಹಲವು ವರ್ಷಗಳಿಂದ ರೂಪಿಸಿರುವ ಈ ನಿರ್ಧಾರ ಈಗ ಬದಲಾಗುವ ಸಾಧ್ಯತೆ ಹೆಚ್ಚಿದೆ.

ಸಿಟಿಯಲ್ಲಿ ಟ್ರಾಫಿಕ್ ದಟ್ಟಣೆ ಹೆಚ್ಚಾಗಿದೆ ಹೀಗಾಗಿ ಕಬ್ಬನ್ ಪಾರ್ಕ್ ಒಳಗೆ ರಜಾ ದಿನಗಳಲ್ಲಿಯೂ ವಾಹನಗಳ ಓಡಾಟಕ್ಕೆ ನಿಷೇಧ ಹೇರಬಾರದು ಎಂದು ಟ್ರಾಫಿಕ್ ವಿಭಾಗ ಸರ್ಕಾರದ ಮೇಲೆ ಒತ್ತಾಯ ಹೇರಿದೆ. ಆದರೆ, ಈ ನಡೆಗೆ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಬೆಂಗಳೂರು ಟ್ರಾಫಿಕ್ ಕಂಟ್ರೋಲ್​ಗೆ ಪ್ಲಾನ್: ಪರಿಸರ ಪ್ರೇಮಿಗಳ ವಿರೋಧ

ಶನಿವಾರ, ಭಾನುವಾರ, ಸರ್ಕಾರಿ ರಜೆಗಳಲ್ಲಿ ವಾಹನ ಸಂಚಾರ ನಿಷೇಧಿಸಿದರೆ, ಟ್ರಾಫಿಕ್ ಜಾಮ್ ಆಗುತ್ತದೆ. ಸೆಂಟ್ರಲ್ ಬ್ಯುಸಿನೆಸ್ ಡಿಸ್ಟ್ರಿಕ್ಟ್ ಸುತ್ತಮುತ್ತ ಭಾರಿ ಸಂಚಾರ ದಟ್ಟಣೆ ಉಂಟಾಗುತ್ತದೆ. ಇದರಿಂದ ಬೆಂಗಳೂರು ದಕ್ಷಿಣ ಹಾಗೂ ಉತ್ತರದ ಭಾಗದಲ್ಲಿ ಚೈನ್ ಟ್ರಾಫಿಕ್ ಜಾಮ್ ಆಗುತ್ತಿದೆ. ಈ ನಿರ್ಧಾರವನ್ನು ಕೈಬಿಡಬೇಕೆಂದು ಸಂಚಾರಿ ಇಲಾಖೆ ಸರ್ಕಾರವನ್ನು ಒತ್ತಾಯಿಸಿದೆ. ಆದರೆ ಇದಕ್ಕೆ ಪರಿಸರ ಪ್ರೇಮಿಗಳು ಸೇರಿ, ನಡಿಗೆದಾರರು ವಿರೋಧ ವ್ಯಕ್ತಪಡಿಸಿದ್ದಾರೆ.

ಬೇಕು, ಬೇಡಗಳ ಚರ್ಚೆಯ ಮಧ್ಯೆ ಸರ್ಕಾರದ ಪ್ರಾಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಗುರುವಾರ ಹೈವೋಲ್ಟೇಜ್ ಸಭೆ ನಡೆಸಿದ್ದಾರೆ. ತೋಟಾಗಾರಿಕೆ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಕಬ್ಬನ್ ಪಾರ್ಕ್ ಹಿತ ರಕ್ಷಣಾ ಸಮಿತಿಯ ಜೊತೆ ಸಭೆ ನಡೆಸಿ ಅಭಿಪ್ರಾಯ ಪಡೆದಿದ್ದಾರೆ.

ಇದನ್ನೂ ಓದಿ: ವಿಕ್ಟೋರಿಯಾ, ವಾಣಿ ವಿಲಾಸ್ ಆಸ್ಪತ್ರೆಗಳಲ್ಲಿ ವೈದ್ಯರು, ಸಿಬ್ಬಂದಿ ಕೊರತೆ: ನೇಮಕಕ್ಕೆ ಆಸಕ್ತಿ ತೋರದ ಸರ್ಕಾರ, ರೋಗಿಗಳಿಗೆ ಸಂಕಷ್ಟ

ಈಗಾಗಲೇ ಕಬ್ಬನ್ ಪಾರ್ಕನ್ನು ‘ಕ್ವೈಟ್ ಝೋನ್’ ಎಂದು ಘೋಷಿಸಿಲಾಗಿದೆ. 2015ರಲ್ಲಿ ಕಬ್ಬನ್ ಪಾರ್ಕ್ ಉಳಿವಿಗೆ, ವಾಯು ಹಾಗೂ ಶಬ್ದ ಮಾಲಿನ್ಯ ತಡೆಗೆ ವಾಹನಗಳ ನಿಷೇಧ ಕಾರ್ಯಕ್ರಮ ಜಾರಿಗೊಳಿಸಲಾಗಿದೆ. ಹಾಗಿದ್ದರೆ ಟ್ರಾಫಿಕ್ ಕಂಟ್ರೋಲ್​ಗಾಗಿ ಕಬ್ಬನ್ ಪಾರ್ಕ್​ ಬರೆ ಎಳೆಯಲು ಸರ್ಕಾರ ಮುಂದಾಗುತ್ತಾ? ತೋಟಗಾರಿಕೆ ಇಲಾಖೆಯ ತೀರ್ಮಾನ ವಿರೋಧಿಸುತ್ತಾ ಅಥವಾ ಪೊಲೀಸರ ಮನವಿ ಪುರಸ್ಕರಿಸುತ್ತಾ ಎಂಬುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:11 am, Fri, 24 January 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್