AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಈ ರಸ್ತೆಯಲ್ಲಿ 1 ವಾರ ವಾಹನ ಸಂಚಾರ ಬಂದ್​!

ಬೆಂಗಳೂರಿನಲ್ಲಿ ಸದ್ಯ ನಮ್ಮ ಮೆಟ್ರೋ ಬಿಎಂಆರ್​ಸಿಎಲ್​ ಕಾಮಗಾರಿಗಳು ವೇಗದ ಗತಿಯಲ್ಲಿ ಸಾಗುತ್ತಿದೆ. ಇದರಿಂದ ನಗರದ ಕೆಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಇದೀಗ ಬೆಂಗಳೂರಿನ ಈ ರಸ್ತೆಯಲ್ಲಿ ಒಂದು ವಾರ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಬೆಂಗಳೂರಿನ ಈ ರಸ್ತೆಯಲ್ಲಿ 1 ವಾರ ವಾಹನ ಸಂಚಾರ ಬಂದ್​!
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Aug 06, 2024 | 8:29 AM

Share

ಬೆಂಗಳೂರು, ಆಗಸ್ಟ್​​ 06: ಹೊರ ವರ್ತುಲ ರಸ್ತೆಯ (Outer Ring Road) ಐಬಿಐಎಸ್​ ಹೊಟೇಟಲ್​ನಿಂದ ದೇವರಬೀಸನಹಳ್ಳಿ ಜಂಕ್ಷನ್​ವರೆಗಿನ ಸರ್ವಿಸ್​ ರಸ್ತೆಯಲ್ಲಿ ಒಂದು ವಾರ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಸರ್ವಿಸ್​ ರಸ್ತೆಯಲ್ಲಿ ಬಿಎಂಆರ್​ಸಿಎಲ್ (BMRCL)​ ಮತ್ತು ಬೆಸ್ಕಾಂ (BSCOM) ವತಿಯಿಂದ ಕೇಬಲ್​​ ಅಳವಡಿಸುವ ಕಾಮಗಾರಿ ನಡೆಯುತ್ತಿದೆ. ಹೀಗಾಗಿ ಆಗಸ್ಟ್​​ 13ರವರೆಗೆ ಈ ರಸ್ತೆಯಲ್ಲಿ ರಾತ್ರಿ 11 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ವಾಹನ ಸಂಚಾರ ನಿಷೇಧಿಸಿ ಎಂದು ಬೆಂಗಳೂರು ಸಂಚಾರ ಪೊಲೀಸ್​​ ಮಾಧ್ಯಮ ಪ್ರಕಟಣೆ ಹೊರಡಸಿದೆ. ಬದಲಿ ಮಾರ್ಗ ಸೂಚಿಸಲಾಗಿದೆ.

ಪರ್ಯಾಯ ಮಾರ್ಗ

ಕಾಮಗಾರಿ ಸಮಯದಲ್ಲಿ ಸುಗಮ ಸಂಚಾರಕ್ಕಾಗಿ ದೇವರಬಿಸನಹಳ್ಳಿ ಮೇಲು ಸೇತುವೆ ಮೂಲಕ ಸಂಚರಿಸಬಹುದಾಗಿದೆ.

ನೈಸ್​ ರಸ್ತೆಯಲ್ಲಿ ದ್ವಿಚಕ್ರ ವಾಹನ ನಿಷೇಧ

ನೈಸ್​ ರಸ್ತೆಯಲ್ಲಿ ಎಲ್ಲ ದಿನ ರಾತ್ರಿ 10 ರಿಂದ ಬೆಳಗಿನ ಜಾವ 5 ಗಂಟೆಯವರೆಗೆ ದ್ವಿಚಕ್ರ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಈ ಹೊಸ ನಿಯಮ ಆಗಸ್ಟ್​ 2 ರಿಂದ ಜಾರಿಗೆ ಬಂದಿದೆ.

ಇದನ್ನೂ ಓದಿ: ಬೆಂಗಳೂರು ಟ್ರಾಫಿಕ್ ಕಡಿಮೆ ಮಾಡಲು ಸಿದ್ಧವಾಗಲಿವೆ 17 ಸಿಗ್ನಲ್ ಮುಕ್ತ ಕಾರಿಡಾರ್‌ಗಳು

ಭಾರಿ ಸರಕು ವಾಹನಗಳು ರಸ್ತೆಗಳಲ್ಲಿ ಸಂಚರಿಸಲು ಸಮಯ ನಿಗದಿ

ಭಾರಿ ಸರಕು ವಾಹನಗಳು ಬೆಂಗಳೂರಿನ ರಸ್ತೆಯಲ್ಲಿ ಸಂಚರಿಸಲು ಸಮಯ ನಿಗದಿ ಮಾಡಲಾಗಿದೆ. ವಾರದ ಎಲ್ಲ ದಿನಗಳಲ್ಲಿ ಬೆಳಗ್ಗೆ 7 ರಿಂದ 11 ಮತ್ತು ಸಂಜೆ 4 ರಿಂದ 10ರವರೆಗೆ ಭಾರಿ ಸರಕು ವಾಹನಗಳು ಬೆಂಗಳೂರು ಮಹಾನಗರದ ಒಳಗಿನ ರಸ್ತೆಗಳಲ್ಲಿ ಸಂಚರಿಸುವಂತಿಲ್ಲ. ಆದರೆ, ಎಲ್ಲ ಶನಿವಾರಗಳಂದು ಬೆಳಗ್ಗೆ 10:30 ರಿಂದ ಮಧ್ಯಾಹ್ನ 2:30ರವರೆಗೆ ಹಾಗೂ ಸಂಜೆ 4:30 ರಿಂದ ರಾತ್ರಿ 9ಗಂಟೆಯವರೆಗೆ ನಿಷೇಧಿಸಿ ಮಾರ್ಪಾಡು ಮಾಡಲಾಗಿದೆ. ಈ ಹೊಸ ನಿಯಮ ಈಗಾಗಲೇ ಜಾರಿಯಾಗಿದೆ. ಇನ್ನುಳಿದಂತೆ ವಾರದ ಆರು ದಿನಗಳಲ್ಲಿ ಮೊದಲಿನಂತೆಯೇ ಮುಂದುವರೆಯಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಫುಟ್​ಪಾತ್ ತೆರವು ವೇಳೆ ಜಿಬಿಎ ಸಿಬ್ಬಂದಿ ಮೇಲೆ ಪೆಪ್ಪರ್ ಸ್ಪ್ರೇ, ಹಲ್ಲೆ
ಫುಟ್​ಪಾತ್ ತೆರವು ವೇಳೆ ಜಿಬಿಎ ಸಿಬ್ಬಂದಿ ಮೇಲೆ ಪೆಪ್ಪರ್ ಸ್ಪ್ರೇ, ಹಲ್ಲೆ
ಚೆನ್ನಮ್ಮ ಸಮಾಧಿ ಬಳಿ ವಿಷ್ಣು ಸಹಸ್ರನಾಮ ಪಠಣ ವೇಳೆ ಗರುಡ ಪ್ರತ್ಯಕ್ಷ
ಚೆನ್ನಮ್ಮ ಸಮಾಧಿ ಬಳಿ ವಿಷ್ಣು ಸಹಸ್ರನಾಮ ಪಠಣ ವೇಳೆ ಗರುಡ ಪ್ರತ್ಯಕ್ಷ
ರಾಜಕಾಲುವೆ ಒತ್ತುವರಿದಾರರಿಗೂ ಶಾಕ್​​ ಕೊಡಲು ಮುಂದಾದ ಜಿಬಿಎ
ರಾಜಕಾಲುವೆ ಒತ್ತುವರಿದಾರರಿಗೂ ಶಾಕ್​​ ಕೊಡಲು ಮುಂದಾದ ಜಿಬಿಎ
5 ವರ್ಷ ಲವರ್​ನನ್ನು ಸಾಕಿ ಮದುವೆಯಾದಳು! ಆದ್ರೆ ಆತ ಬೇರೊಬ್ಬಳೊಂದಿಗೆ ಪರಾರಿ
5 ವರ್ಷ ಲವರ್​ನನ್ನು ಸಾಕಿ ಮದುವೆಯಾದಳು! ಆದ್ರೆ ಆತ ಬೇರೊಬ್ಬಳೊಂದಿಗೆ ಪರಾರಿ
ಕಲುಷಿತ ಕಾವೇರಿ ನೀರಿನ ಪೂರೈಕೆಗೆ ಕತ್ರಿಗುಪ್ಪೆ ನಿವಾಸಿಗಳ ಆಕ್ರೋಶ
ಕಲುಷಿತ ಕಾವೇರಿ ನೀರಿನ ಪೂರೈಕೆಗೆ ಕತ್ರಿಗುಪ್ಪೆ ನಿವಾಸಿಗಳ ಆಕ್ರೋಶ
ಕಂದಾಯ ಇಲಾಖೆಯ ರೆಕಾರ್ಡ್ ರೂಂನಲ್ಲಿ ಕೋತಿಗಳದ್ದೇ ಕಾರುಬಾರು! ವಿಡಿಯೋ ವೈರಲ್
ಕಂದಾಯ ಇಲಾಖೆಯ ರೆಕಾರ್ಡ್ ರೂಂನಲ್ಲಿ ಕೋತಿಗಳದ್ದೇ ಕಾರುಬಾರು! ವಿಡಿಯೋ ವೈರಲ್