AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಈ ರಸ್ತೆಯಲ್ಲಿ 1 ವಾರ ವಾಹನ ಸಂಚಾರ ಬಂದ್​!

ಬೆಂಗಳೂರಿನಲ್ಲಿ ಸದ್ಯ ನಮ್ಮ ಮೆಟ್ರೋ ಬಿಎಂಆರ್​ಸಿಎಲ್​ ಕಾಮಗಾರಿಗಳು ವೇಗದ ಗತಿಯಲ್ಲಿ ಸಾಗುತ್ತಿದೆ. ಇದರಿಂದ ನಗರದ ಕೆಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಇದೀಗ ಬೆಂಗಳೂರಿನ ಈ ರಸ್ತೆಯಲ್ಲಿ ಒಂದು ವಾರ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಬೆಂಗಳೂರಿನ ಈ ರಸ್ತೆಯಲ್ಲಿ 1 ವಾರ ವಾಹನ ಸಂಚಾರ ಬಂದ್​!
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on: Aug 06, 2024 | 8:29 AM

Share

ಬೆಂಗಳೂರು, ಆಗಸ್ಟ್​​ 06: ಹೊರ ವರ್ತುಲ ರಸ್ತೆಯ (Outer Ring Road) ಐಬಿಐಎಸ್​ ಹೊಟೇಟಲ್​ನಿಂದ ದೇವರಬೀಸನಹಳ್ಳಿ ಜಂಕ್ಷನ್​ವರೆಗಿನ ಸರ್ವಿಸ್​ ರಸ್ತೆಯಲ್ಲಿ ಒಂದು ವಾರ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಸರ್ವಿಸ್​ ರಸ್ತೆಯಲ್ಲಿ ಬಿಎಂಆರ್​ಸಿಎಲ್ (BMRCL)​ ಮತ್ತು ಬೆಸ್ಕಾಂ (BSCOM) ವತಿಯಿಂದ ಕೇಬಲ್​​ ಅಳವಡಿಸುವ ಕಾಮಗಾರಿ ನಡೆಯುತ್ತಿದೆ. ಹೀಗಾಗಿ ಆಗಸ್ಟ್​​ 13ರವರೆಗೆ ಈ ರಸ್ತೆಯಲ್ಲಿ ರಾತ್ರಿ 11 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ವಾಹನ ಸಂಚಾರ ನಿಷೇಧಿಸಿ ಎಂದು ಬೆಂಗಳೂರು ಸಂಚಾರ ಪೊಲೀಸ್​​ ಮಾಧ್ಯಮ ಪ್ರಕಟಣೆ ಹೊರಡಸಿದೆ. ಬದಲಿ ಮಾರ್ಗ ಸೂಚಿಸಲಾಗಿದೆ.

ಪರ್ಯಾಯ ಮಾರ್ಗ

ಕಾಮಗಾರಿ ಸಮಯದಲ್ಲಿ ಸುಗಮ ಸಂಚಾರಕ್ಕಾಗಿ ದೇವರಬಿಸನಹಳ್ಳಿ ಮೇಲು ಸೇತುವೆ ಮೂಲಕ ಸಂಚರಿಸಬಹುದಾಗಿದೆ.

ನೈಸ್​ ರಸ್ತೆಯಲ್ಲಿ ದ್ವಿಚಕ್ರ ವಾಹನ ನಿಷೇಧ

ನೈಸ್​ ರಸ್ತೆಯಲ್ಲಿ ಎಲ್ಲ ದಿನ ರಾತ್ರಿ 10 ರಿಂದ ಬೆಳಗಿನ ಜಾವ 5 ಗಂಟೆಯವರೆಗೆ ದ್ವಿಚಕ್ರ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಈ ಹೊಸ ನಿಯಮ ಆಗಸ್ಟ್​ 2 ರಿಂದ ಜಾರಿಗೆ ಬಂದಿದೆ.

ಇದನ್ನೂ ಓದಿ: ಬೆಂಗಳೂರು ಟ್ರಾಫಿಕ್ ಕಡಿಮೆ ಮಾಡಲು ಸಿದ್ಧವಾಗಲಿವೆ 17 ಸಿಗ್ನಲ್ ಮುಕ್ತ ಕಾರಿಡಾರ್‌ಗಳು

ಭಾರಿ ಸರಕು ವಾಹನಗಳು ರಸ್ತೆಗಳಲ್ಲಿ ಸಂಚರಿಸಲು ಸಮಯ ನಿಗದಿ

ಭಾರಿ ಸರಕು ವಾಹನಗಳು ಬೆಂಗಳೂರಿನ ರಸ್ತೆಯಲ್ಲಿ ಸಂಚರಿಸಲು ಸಮಯ ನಿಗದಿ ಮಾಡಲಾಗಿದೆ. ವಾರದ ಎಲ್ಲ ದಿನಗಳಲ್ಲಿ ಬೆಳಗ್ಗೆ 7 ರಿಂದ 11 ಮತ್ತು ಸಂಜೆ 4 ರಿಂದ 10ರವರೆಗೆ ಭಾರಿ ಸರಕು ವಾಹನಗಳು ಬೆಂಗಳೂರು ಮಹಾನಗರದ ಒಳಗಿನ ರಸ್ತೆಗಳಲ್ಲಿ ಸಂಚರಿಸುವಂತಿಲ್ಲ. ಆದರೆ, ಎಲ್ಲ ಶನಿವಾರಗಳಂದು ಬೆಳಗ್ಗೆ 10:30 ರಿಂದ ಮಧ್ಯಾಹ್ನ 2:30ರವರೆಗೆ ಹಾಗೂ ಸಂಜೆ 4:30 ರಿಂದ ರಾತ್ರಿ 9ಗಂಟೆಯವರೆಗೆ ನಿಷೇಧಿಸಿ ಮಾರ್ಪಾಡು ಮಾಡಲಾಗಿದೆ. ಈ ಹೊಸ ನಿಯಮ ಈಗಾಗಲೇ ಜಾರಿಯಾಗಿದೆ. ಇನ್ನುಳಿದಂತೆ ವಾರದ ಆರು ದಿನಗಳಲ್ಲಿ ಮೊದಲಿನಂತೆಯೇ ಮುಂದುವರೆಯಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?