AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಈ ರಸ್ತೆಯಲ್ಲಿ 1 ವಾರ ವಾಹನ ಸಂಚಾರ ಬಂದ್​!

ಬೆಂಗಳೂರಿನಲ್ಲಿ ಸದ್ಯ ನಮ್ಮ ಮೆಟ್ರೋ ಬಿಎಂಆರ್​ಸಿಎಲ್​ ಕಾಮಗಾರಿಗಳು ವೇಗದ ಗತಿಯಲ್ಲಿ ಸಾಗುತ್ತಿದೆ. ಇದರಿಂದ ನಗರದ ಕೆಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಇದೀಗ ಬೆಂಗಳೂರಿನ ಈ ರಸ್ತೆಯಲ್ಲಿ ಒಂದು ವಾರ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಬೆಂಗಳೂರಿನ ಈ ರಸ್ತೆಯಲ್ಲಿ 1 ವಾರ ವಾಹನ ಸಂಚಾರ ಬಂದ್​!
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on: Aug 06, 2024 | 8:29 AM

Share

ಬೆಂಗಳೂರು, ಆಗಸ್ಟ್​​ 06: ಹೊರ ವರ್ತುಲ ರಸ್ತೆಯ (Outer Ring Road) ಐಬಿಐಎಸ್​ ಹೊಟೇಟಲ್​ನಿಂದ ದೇವರಬೀಸನಹಳ್ಳಿ ಜಂಕ್ಷನ್​ವರೆಗಿನ ಸರ್ವಿಸ್​ ರಸ್ತೆಯಲ್ಲಿ ಒಂದು ವಾರ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಸರ್ವಿಸ್​ ರಸ್ತೆಯಲ್ಲಿ ಬಿಎಂಆರ್​ಸಿಎಲ್ (BMRCL)​ ಮತ್ತು ಬೆಸ್ಕಾಂ (BSCOM) ವತಿಯಿಂದ ಕೇಬಲ್​​ ಅಳವಡಿಸುವ ಕಾಮಗಾರಿ ನಡೆಯುತ್ತಿದೆ. ಹೀಗಾಗಿ ಆಗಸ್ಟ್​​ 13ರವರೆಗೆ ಈ ರಸ್ತೆಯಲ್ಲಿ ರಾತ್ರಿ 11 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ವಾಹನ ಸಂಚಾರ ನಿಷೇಧಿಸಿ ಎಂದು ಬೆಂಗಳೂರು ಸಂಚಾರ ಪೊಲೀಸ್​​ ಮಾಧ್ಯಮ ಪ್ರಕಟಣೆ ಹೊರಡಸಿದೆ. ಬದಲಿ ಮಾರ್ಗ ಸೂಚಿಸಲಾಗಿದೆ.

ಪರ್ಯಾಯ ಮಾರ್ಗ

ಕಾಮಗಾರಿ ಸಮಯದಲ್ಲಿ ಸುಗಮ ಸಂಚಾರಕ್ಕಾಗಿ ದೇವರಬಿಸನಹಳ್ಳಿ ಮೇಲು ಸೇತುವೆ ಮೂಲಕ ಸಂಚರಿಸಬಹುದಾಗಿದೆ.

ನೈಸ್​ ರಸ್ತೆಯಲ್ಲಿ ದ್ವಿಚಕ್ರ ವಾಹನ ನಿಷೇಧ

ನೈಸ್​ ರಸ್ತೆಯಲ್ಲಿ ಎಲ್ಲ ದಿನ ರಾತ್ರಿ 10 ರಿಂದ ಬೆಳಗಿನ ಜಾವ 5 ಗಂಟೆಯವರೆಗೆ ದ್ವಿಚಕ್ರ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಈ ಹೊಸ ನಿಯಮ ಆಗಸ್ಟ್​ 2 ರಿಂದ ಜಾರಿಗೆ ಬಂದಿದೆ.

ಇದನ್ನೂ ಓದಿ: ಬೆಂಗಳೂರು ಟ್ರಾಫಿಕ್ ಕಡಿಮೆ ಮಾಡಲು ಸಿದ್ಧವಾಗಲಿವೆ 17 ಸಿಗ್ನಲ್ ಮುಕ್ತ ಕಾರಿಡಾರ್‌ಗಳು

ಭಾರಿ ಸರಕು ವಾಹನಗಳು ರಸ್ತೆಗಳಲ್ಲಿ ಸಂಚರಿಸಲು ಸಮಯ ನಿಗದಿ

ಭಾರಿ ಸರಕು ವಾಹನಗಳು ಬೆಂಗಳೂರಿನ ರಸ್ತೆಯಲ್ಲಿ ಸಂಚರಿಸಲು ಸಮಯ ನಿಗದಿ ಮಾಡಲಾಗಿದೆ. ವಾರದ ಎಲ್ಲ ದಿನಗಳಲ್ಲಿ ಬೆಳಗ್ಗೆ 7 ರಿಂದ 11 ಮತ್ತು ಸಂಜೆ 4 ರಿಂದ 10ರವರೆಗೆ ಭಾರಿ ಸರಕು ವಾಹನಗಳು ಬೆಂಗಳೂರು ಮಹಾನಗರದ ಒಳಗಿನ ರಸ್ತೆಗಳಲ್ಲಿ ಸಂಚರಿಸುವಂತಿಲ್ಲ. ಆದರೆ, ಎಲ್ಲ ಶನಿವಾರಗಳಂದು ಬೆಳಗ್ಗೆ 10:30 ರಿಂದ ಮಧ್ಯಾಹ್ನ 2:30ರವರೆಗೆ ಹಾಗೂ ಸಂಜೆ 4:30 ರಿಂದ ರಾತ್ರಿ 9ಗಂಟೆಯವರೆಗೆ ನಿಷೇಧಿಸಿ ಮಾರ್ಪಾಡು ಮಾಡಲಾಗಿದೆ. ಈ ಹೊಸ ನಿಯಮ ಈಗಾಗಲೇ ಜಾರಿಯಾಗಿದೆ. ಇನ್ನುಳಿದಂತೆ ವಾರದ ಆರು ದಿನಗಳಲ್ಲಿ ಮೊದಲಿನಂತೆಯೇ ಮುಂದುವರೆಯಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ