AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಈ ರಸ್ತೆಯಲ್ಲಿ 1 ವಾರ ವಾಹನ ಸಂಚಾರ ಬಂದ್​!

ಬೆಂಗಳೂರಿನಲ್ಲಿ ಸದ್ಯ ನಮ್ಮ ಮೆಟ್ರೋ ಬಿಎಂಆರ್​ಸಿಎಲ್​ ಕಾಮಗಾರಿಗಳು ವೇಗದ ಗತಿಯಲ್ಲಿ ಸಾಗುತ್ತಿದೆ. ಇದರಿಂದ ನಗರದ ಕೆಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಇದೀಗ ಬೆಂಗಳೂರಿನ ಈ ರಸ್ತೆಯಲ್ಲಿ ಒಂದು ವಾರ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಬೆಂಗಳೂರಿನ ಈ ರಸ್ತೆಯಲ್ಲಿ 1 ವಾರ ವಾಹನ ಸಂಚಾರ ಬಂದ್​!
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on: Aug 06, 2024 | 8:29 AM

Share

ಬೆಂಗಳೂರು, ಆಗಸ್ಟ್​​ 06: ಹೊರ ವರ್ತುಲ ರಸ್ತೆಯ (Outer Ring Road) ಐಬಿಐಎಸ್​ ಹೊಟೇಟಲ್​ನಿಂದ ದೇವರಬೀಸನಹಳ್ಳಿ ಜಂಕ್ಷನ್​ವರೆಗಿನ ಸರ್ವಿಸ್​ ರಸ್ತೆಯಲ್ಲಿ ಒಂದು ವಾರ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಸರ್ವಿಸ್​ ರಸ್ತೆಯಲ್ಲಿ ಬಿಎಂಆರ್​ಸಿಎಲ್ (BMRCL)​ ಮತ್ತು ಬೆಸ್ಕಾಂ (BSCOM) ವತಿಯಿಂದ ಕೇಬಲ್​​ ಅಳವಡಿಸುವ ಕಾಮಗಾರಿ ನಡೆಯುತ್ತಿದೆ. ಹೀಗಾಗಿ ಆಗಸ್ಟ್​​ 13ರವರೆಗೆ ಈ ರಸ್ತೆಯಲ್ಲಿ ರಾತ್ರಿ 11 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ವಾಹನ ಸಂಚಾರ ನಿಷೇಧಿಸಿ ಎಂದು ಬೆಂಗಳೂರು ಸಂಚಾರ ಪೊಲೀಸ್​​ ಮಾಧ್ಯಮ ಪ್ರಕಟಣೆ ಹೊರಡಸಿದೆ. ಬದಲಿ ಮಾರ್ಗ ಸೂಚಿಸಲಾಗಿದೆ.

ಪರ್ಯಾಯ ಮಾರ್ಗ

ಕಾಮಗಾರಿ ಸಮಯದಲ್ಲಿ ಸುಗಮ ಸಂಚಾರಕ್ಕಾಗಿ ದೇವರಬಿಸನಹಳ್ಳಿ ಮೇಲು ಸೇತುವೆ ಮೂಲಕ ಸಂಚರಿಸಬಹುದಾಗಿದೆ.

ನೈಸ್​ ರಸ್ತೆಯಲ್ಲಿ ದ್ವಿಚಕ್ರ ವಾಹನ ನಿಷೇಧ

ನೈಸ್​ ರಸ್ತೆಯಲ್ಲಿ ಎಲ್ಲ ದಿನ ರಾತ್ರಿ 10 ರಿಂದ ಬೆಳಗಿನ ಜಾವ 5 ಗಂಟೆಯವರೆಗೆ ದ್ವಿಚಕ್ರ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಈ ಹೊಸ ನಿಯಮ ಆಗಸ್ಟ್​ 2 ರಿಂದ ಜಾರಿಗೆ ಬಂದಿದೆ.

ಇದನ್ನೂ ಓದಿ: ಬೆಂಗಳೂರು ಟ್ರಾಫಿಕ್ ಕಡಿಮೆ ಮಾಡಲು ಸಿದ್ಧವಾಗಲಿವೆ 17 ಸಿಗ್ನಲ್ ಮುಕ್ತ ಕಾರಿಡಾರ್‌ಗಳು

ಭಾರಿ ಸರಕು ವಾಹನಗಳು ರಸ್ತೆಗಳಲ್ಲಿ ಸಂಚರಿಸಲು ಸಮಯ ನಿಗದಿ

ಭಾರಿ ಸರಕು ವಾಹನಗಳು ಬೆಂಗಳೂರಿನ ರಸ್ತೆಯಲ್ಲಿ ಸಂಚರಿಸಲು ಸಮಯ ನಿಗದಿ ಮಾಡಲಾಗಿದೆ. ವಾರದ ಎಲ್ಲ ದಿನಗಳಲ್ಲಿ ಬೆಳಗ್ಗೆ 7 ರಿಂದ 11 ಮತ್ತು ಸಂಜೆ 4 ರಿಂದ 10ರವರೆಗೆ ಭಾರಿ ಸರಕು ವಾಹನಗಳು ಬೆಂಗಳೂರು ಮಹಾನಗರದ ಒಳಗಿನ ರಸ್ತೆಗಳಲ್ಲಿ ಸಂಚರಿಸುವಂತಿಲ್ಲ. ಆದರೆ, ಎಲ್ಲ ಶನಿವಾರಗಳಂದು ಬೆಳಗ್ಗೆ 10:30 ರಿಂದ ಮಧ್ಯಾಹ್ನ 2:30ರವರೆಗೆ ಹಾಗೂ ಸಂಜೆ 4:30 ರಿಂದ ರಾತ್ರಿ 9ಗಂಟೆಯವರೆಗೆ ನಿಷೇಧಿಸಿ ಮಾರ್ಪಾಡು ಮಾಡಲಾಗಿದೆ. ಈ ಹೊಸ ನಿಯಮ ಈಗಾಗಲೇ ಜಾರಿಯಾಗಿದೆ. ಇನ್ನುಳಿದಂತೆ ವಾರದ ಆರು ದಿನಗಳಲ್ಲಿ ಮೊದಲಿನಂತೆಯೇ ಮುಂದುವರೆಯಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ