AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶು ವೈಧ್ಯಾಧಿಕಾರಿಗಳ ನೇಮಕಾತಿ ಹಗರಣ: ಜ್ಞಾನೇಂದ್ರ ಕುಮಾರ್​​ ಬಂಧನದ ಬೆನ್ನಲ್ಲೇ ಉಳಿದವರಿಗೂ ಢವಢವ

ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಸಂಬಂಧ ಎಕ್ಸಾಂ ಕಂಟ್ರೋಲರ್​​ ಆಗಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಬಂಧನವಾಗಿದ್ದು, ಸಿಐಡಿ ತನಿಖೆ ತೀವ್ರಗೊಂಡಿದೆ. ಇದರಿಂದ ಕೆಪಿಎಸ್‌ಸಿ ಮಾಜಿ ಅಧ್ಯಕ್ಷರು, ಅಧಿಕಾರಿಗಳು ಹಾಗೂ ಸದಸ್ಯರಲ್ಲಿ ತೀವ್ರ ಆತಂಕ ಶುರುವಾಗಿದ್ದು, ಕಳೆದ 3 ವರ್ಷಗಳಲ್ಲಿ KPSC ನಡೆಸಿರುವ ನಾಲ್ಕು ಪರೀಕ್ಷೆಗಳ ಬಗ್ಗೆಯೂ ಅಧಿಕಾರಿಗಳು ವಿವರ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

ಪಶು ವೈಧ್ಯಾಧಿಕಾರಿಗಳ ನೇಮಕಾತಿ ಹಗರಣ: ಜ್ಞಾನೇಂದ್ರ ಕುಮಾರ್​​ ಬಂಧನದ ಬೆನ್ನಲ್ಲೇ ಉಳಿದವರಿಗೂ ಢವಢವ
ಜ್ಞಾನೇಂದ್ರ ಕುಮಾರ್​​ ಬಂಧನImage Credit source: Tv9 Kannada
ರಾಚಪ್ಪಾಜಿ ನಾಯ್ಕ್
| Edited By: |

Updated on: Aug 30, 2026 | 7:27 AM

Share

ಬೆಂಗಳೂರು, ಆಗಸ್ಟ್​​ 30: ಪಶು ವೈಧ್ಯಾಧಿಕಾರಿಗಳ ನೇಮಕಾತಿ ಹಗರಣ ಸಂಬಂಧ ಸಿಐಡಿ ತನಿಖೆ ಮತ್ತಷ್ಟು ಚುರುಕೊಂಡಿದ್ದು, ಪ್ರಕರಣ ಸಂಬಂಧ ಎಕ್ಸಾಂ ಕಂಟ್ರೋಲರ್​​ ಆಗಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್​​ರನ್ನು ಈಗಾಗಲೇ ಅಧಿಕಾರಿಗಳು ಬಂಧಿಸಿದ್ದಾರೆ. ಆ ಬೆನ್ನಲ್ಲೇ ಸಿಐಡಿಯಿಂದ ಮತ್ತಷ್ಟು ಮಂದಿ ಅರೆಸ್ಟ್​​ ಆಗುವ ಮುನ್ಸೂಚನೆ ಸಿಕ್ಕಿರುವ ಕಾರಣ ಕೆಪಿಎಸ್​​ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್​​, ಅಧಿಕಾರಿಗಳು ಮತ್ತು ಕೆಲ ಸದಸ್ಯರಿಗೆ ಢವಢವ ಶುರುವಾಗಿದೆ. ತನಿಖೆ ವೇಳೆ ಕೆಲ ಸಾಕ್ಷ್ಯಗಳು ಪತ್ತೆ ಹಾಗೂ ವಿಚಾರಣೆ ವೇಳೆ ಸರಿಯಾಗಿ ಸಹಕರಿಸದ ಹಿನ್ನೆಲೆ ಜ್ಞಾನೇಂದ್ರ ಕುಮಾರ್​​ರನ್ನು ನಿನ್ನೆ ಬಂಧಿಸಲಾಗಿತ್ತು.

ಓಎಂಆರ್ ಶೀಟ್ ತಿದ್ದುಪಡಿಯಲ್ಲಿ ಜ್ಞಾನೇಂದ್ರ ಕೈವಾಡ?

ಪ್ರಕರಣ ಸಂಬಂಧ ಮೊನ್ನೆ (ಆಗಸ್ಟ್​​ 28) ರಾತ್ರಿ 11 ಗಂಟೆಯವರೆಗೂ IAS ಅಧಿಕಾರಿ ಜ್ಞಾನೇಂದ್ರ ಕುಮಾರ್​​ ವಿಚಾರಣೆ ನಡೆಸಿದ್ದ ಸಿಐಡಿ, ನಿನ್ನೆ ಕೂಡ ಮಧ್ಯರಾತ್ರಿವರೆಗೂ ವಿಚಾರಣೆ ನಡೆಸಿತ್ತು. ತನಿಖೆ ವೇಳೆ ಓಎಂಆರ್ ಶೀಟ್ ತಿದ್ದುಪಡಿಯಲ್ಲಿ ಜ್ಞಾನೇಂದ್ರ ಕೈವಾಡದ ಬಗ್ಗೆ ಪ್ರಮುಖ ಸಾಕ್ಷ್ಯಗಳು ಪತ್ತೆಯಾಗಿವೆ ಎನ್ನಲಾಗಿದ್ದು, ಕೆಲ ಹೋಟೆಲ್ ಹಾಗೂ ರೆಸಾರ್ಟ್​​ಗಳಿಗೆ ಕರೆದೊಯ್ದು ಅಭ್ಯರ್ಥಿಗಳಿಗೆ ಟ್ರೈನಿಂಗ್ ನೀಡಿರುವ ವಿಚಾರದಲ್ಲೂ ಇವರ ಪಾತ್ರ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಐಎಎಸ್ ಅಧಿಕಾರಿಯನ್ನು ಬಂಧಿಸಿ ಸಿಐಡಿ ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಸಿಬಿಐ ತನಿಖೆ ಕೋರಿದ್ದ ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಈ ಹಿಂದಿನ ನೇಮಕಾತಿ ಪರೀಕ್ಷೆಗಳ ಬಗ್ಗೆಯೂ ತನಿಖೆ

ಕೆಪಿಎಸ್​​ಸಿ ನೇಮಕಾತಿಯಲ್ಲಿ ಅಕ್ರಮ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ಈ ಹಿಂದಿನ ಪರೀಕ್ಷೆಗಳ ಬಗ್ಗೆಯೂ ಮಾಹಿತಿ ಸಂಗ್ರಹ ಮಾಡಿದ್ದಾರೆ. 3 ವರ್ಷಗಳಲ್ಲಿ ನಡೆದ ನಾಲ್ಕು ಪರೀಕ್ಷೆಗಳ ಬಗ್ಗೆ ವಿವರ ಪಡೆದುಕೊಳ್ಳಲಾಗಿದೆ. ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ನೇಮಕಾತಿ ಪರೀಕ್ಷೆ ಸೇರಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಬಗ್ಗೆಯೂ ಕೆದಕಿದ್ದಾರೆ. ಈ ನಾಲ್ಕೂ ನೇಮಕಾತಿಗಳ ವೇಳೆ ಅಕ್ರಮ ಎಸಗಿರುವ ಶಂಕೆ ಹಿನ್ನೆಲೆ, ಆ ಬಗ್ಗೆಯೂ ತನಿಖೆ ನಡೆಸಲಾಗ್ತಿದೆ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
'ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವವರು ಹಿಂದೂಗಳೇ ಅಲ್ಲ'; ಮೋಹನ್ ಭಾಗವತ್
'ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವವರು ಹಿಂದೂಗಳೇ ಅಲ್ಲ'; ಮೋಹನ್ ಭಾಗವತ್
ನೇಪಾಳದ ಪ್ರವಾಹ ಸಂತ್ರಸ್ತರಿಗಾಗಿ ಅಡುಗೆ ಮಾಡಿಕೊಟ್ಟ ಸೈನಿಕರು
ನೇಪಾಳದ ಪ್ರವಾಹ ಸಂತ್ರಸ್ತರಿಗಾಗಿ ಅಡುಗೆ ಮಾಡಿಕೊಟ್ಟ ಸೈನಿಕರು
ನಟ ಚಿಕ್ಕಣ್ಣ ಮದುವೆ ಆರತಕ್ಷತೆ ಸಂಭ್ರಮ: ವಿಡಿಯೋ ನೋಡಿ
ನಟ ಚಿಕ್ಕಣ್ಣ ಮದುವೆ ಆರತಕ್ಷತೆ ಸಂಭ್ರಮ: ವಿಡಿಯೋ ನೋಡಿ
ಮುಂಬೈನಲ್ಲಿ ‘ಟಾಕ್ಸಿಕ್’ ಬಗ್ಗೆ ಕೇಳಲಾದ ಪ್ರಶ್ನೆಗೆ ಶಿವಣ್ಣ ಕೊಟ್ಟ ಉತ್ತರ
ಮುಂಬೈನಲ್ಲಿ ‘ಟಾಕ್ಸಿಕ್’ ಬಗ್ಗೆ ಕೇಳಲಾದ ಪ್ರಶ್ನೆಗೆ ಶಿವಣ್ಣ ಕೊಟ್ಟ ಉತ್ತರ
ಉಜ್ಬೇಕಿಸ್ತಾನ್ ತಲುಪಿದ ಪ್ರಧಾನಿ ಮೋದಿಗೆ ಅಪ್ಪುಗೆಯ ಸ್ವಾಗತ
ಉಜ್ಬೇಕಿಸ್ತಾನ್ ತಲುಪಿದ ಪ್ರಧಾನಿ ಮೋದಿಗೆ ಅಪ್ಪುಗೆಯ ಸ್ವಾಗತ
ಜಿಬಿಎ ಆಡಳಿತಕ್ಕೆ ಚುರುಕು ಮುಟ್ಟಿಸಲು ಮುಂದಾದ ಸಚಿವ ಕೃಷ್ಣಬೈರೇಗೌಡ
ಜಿಬಿಎ ಆಡಳಿತಕ್ಕೆ ಚುರುಕು ಮುಟ್ಟಿಸಲು ಮುಂದಾದ ಸಚಿವ ಕೃಷ್ಣಬೈರೇಗೌಡ
'ತಪ್ಪಿಗೆ ಜಾತಿಯ ಬಣ್ಣ ಹಚ್ಚುವುದು ಸರಿಯಲ್ಲ'
'ತಪ್ಪಿಗೆ ಜಾತಿಯ ಬಣ್ಣ ಹಚ್ಚುವುದು ಸರಿಯಲ್ಲ'
ಗೃಹ ಸಚಿವರನ್ನ ಕೋರ್ಟ್​​ಗೆ ಕರೆಯಿಸಿದ ಆರ್​​ಎಸ್​ಎಸ್​ ಕೇಸ್
ಗೃಹ ಸಚಿವರನ್ನ ಕೋರ್ಟ್​​ಗೆ ಕರೆಯಿಸಿದ ಆರ್​​ಎಸ್​ಎಸ್​ ಕೇಸ್
ನಾಗೇಂದ್ರ ರಾಜೀನಾಮೆ ಹಿಂದಿನ ಮರ್ಮವನ್ನು ಬಿಚ್ಚಿಟ್ಟ ಸಚಿವ ಬಾಲಕೃಷ್ಣ
ನಾಗೇಂದ್ರ ರಾಜೀನಾಮೆ ಹಿಂದಿನ ಮರ್ಮವನ್ನು ಬಿಚ್ಚಿಟ್ಟ ಸಚಿವ ಬಾಲಕೃಷ್ಣ
ಕಣ್ಣೂರಿನಲ್ಲಿ ಚಲಿಸುತ್ತಿದ್ದ ಬಸ್‌ನಿಂದ ಬೀಳುತ್ತಿದ್ದ ವೃದ್ಧನ ರಕ್ಷಣೆ
ಕಣ್ಣೂರಿನಲ್ಲಿ ಚಲಿಸುತ್ತಿದ್ದ ಬಸ್‌ನಿಂದ ಬೀಳುತ್ತಿದ್ದ ವೃದ್ಧನ ರಕ್ಷಣೆ