ಪಶು ವೈಧ್ಯಾಧಿಕಾರಿಗಳ ನೇಮಕಾತಿ ಹಗರಣ: ಜ್ಞಾನೇಂದ್ರ ಕುಮಾರ್​​ ಬಂಧನದ ಬೆನ್ನಲ್ಲೇ ಉಳಿದವರಿಗೂ ಢವಢವ

ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಸಂಬಂಧ ಎಕ್ಸಾಂ ಕಂಟ್ರೋಲರ್​​ ಆಗಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಬಂಧನವಾಗಿದ್ದು, ಸಿಐಡಿ ತನಿಖೆ ತೀವ್ರಗೊಂಡಿದೆ. ಇದರಿಂದ ಕೆಪಿಎಸ್‌ಸಿ ಮಾಜಿ ಅಧ್ಯಕ್ಷರು, ಅಧಿಕಾರಿಗಳು ಹಾಗೂ ಸದಸ್ಯರಲ್ಲಿ ತೀವ್ರ ಆತಂಕ ಶುರುವಾಗಿದ್ದು, ಕಳೆದ 3 ವರ್ಷಗಳಲ್ಲಿ KPSC ನಡೆಸಿರುವ ನಾಲ್ಕು ಪರೀಕ್ಷೆಗಳ ಬಗ್ಗೆಯೂ ಅಧಿಕಾರಿಗಳು ವಿವರ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

ಪಶು ವೈಧ್ಯಾಧಿಕಾರಿಗಳ ನೇಮಕಾತಿ ಹಗರಣ: ಜ್ಞಾನೇಂದ್ರ ಕುಮಾರ್​​ ಬಂಧನದ ಬೆನ್ನಲ್ಲೇ ಉಳಿದವರಿಗೂ ಢವಢವ
ಜ್ಞಾನೇಂದ್ರ ಕುಮಾರ್​​ ಬಂಧನ
Image Credit source: Tv9 Kannada
Edited By:

Updated on: Aug 30, 2026 | 7:27 AM

ಬೆಂಗಳೂರು, ಆಗಸ್ಟ್​​ 30: ಪಶು ವೈಧ್ಯಾಧಿಕಾರಿಗಳ ನೇಮಕಾತಿ ಹಗರಣ ಸಂಬಂಧ ಸಿಐಡಿ ತನಿಖೆ ಮತ್ತಷ್ಟು ಚುರುಕೊಂಡಿದ್ದು, ಪ್ರಕರಣ ಸಂಬಂಧ ಎಕ್ಸಾಂ ಕಂಟ್ರೋಲರ್​​ ಆಗಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್​​ರನ್ನು ಈಗಾಗಲೇ ಅಧಿಕಾರಿಗಳು ಬಂಧಿಸಿದ್ದಾರೆ. ಆ ಬೆನ್ನಲ್ಲೇ ಸಿಐಡಿಯಿಂದ ಮತ್ತಷ್ಟು ಮಂದಿ ಅರೆಸ್ಟ್​​ ಆಗುವ ಮುನ್ಸೂಚನೆ ಸಿಕ್ಕಿರುವ ಕಾರಣ ಕೆಪಿಎಸ್​​ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್​​, ಅಧಿಕಾರಿಗಳು ಮತ್ತು ಕೆಲ ಸದಸ್ಯರಿಗೆ ಢವಢವ ಶುರುವಾಗಿದೆ. ತನಿಖೆ ವೇಳೆ ಕೆಲ ಸಾಕ್ಷ್ಯಗಳು ಪತ್ತೆ ಹಾಗೂ ವಿಚಾರಣೆ ವೇಳೆ ಸರಿಯಾಗಿ ಸಹಕರಿಸದ ಹಿನ್ನೆಲೆ ಜ್ಞಾನೇಂದ್ರ ಕುಮಾರ್​​ರನ್ನು ನಿನ್ನೆ ಬಂಧಿಸಲಾಗಿತ್ತು.

ಓಎಂಆರ್ ಶೀಟ್ ತಿದ್ದುಪಡಿಯಲ್ಲಿ ಜ್ಞಾನೇಂದ್ರ ಕೈವಾಡ?

KPSC Recruitment Scam: 2 ದಿನದ ವಿಚಾರಣೆ ಬಳಿಕ IAS ಅಧಿಕಾರಿ ಜ್ಞಾನೇಂದ್ರ ಅರೆಸ್ಟ್ ನಿನ್ನೆ ದಿನವಿಡೀ CID ವಿಚಾರಣೆ

ಪ್ರಕರಣ ಸಂಬಂಧ ಮೊನ್ನೆ (ಆಗಸ್ಟ್​​ 28) ರಾತ್ರಿ 11 ಗಂಟೆಯವರೆಗೂ IAS ಅಧಿಕಾರಿ ಜ್ಞಾನೇಂದ್ರ ಕುಮಾರ್​​ ವಿಚಾರಣೆ ನಡೆಸಿದ್ದ ಸಿಐಡಿ, ನಿನ್ನೆ ಕೂಡ ಮಧ್ಯರಾತ್ರಿವರೆಗೂ ವಿಚಾರಣೆ ನಡೆಸಿತ್ತು. ತನಿಖೆ ವೇಳೆ ಓಎಂಆರ್ ಶೀಟ್ ತಿದ್ದುಪಡಿಯಲ್ಲಿ ಜ್ಞಾನೇಂದ್ರ ಕೈವಾಡದ ಬಗ್ಗೆ ಪ್ರಮುಖ ಸಾಕ್ಷ್ಯಗಳು ಪತ್ತೆಯಾಗಿವೆ ಎನ್ನಲಾಗಿದ್ದು, ಕೆಲ ಹೋಟೆಲ್ ಹಾಗೂ ರೆಸಾರ್ಟ್​​ಗಳಿಗೆ ಕರೆದೊಯ್ದು ಅಭ್ಯರ್ಥಿಗಳಿಗೆ ಟ್ರೈನಿಂಗ್ ನೀಡಿರುವ ವಿಚಾರದಲ್ಲೂ ಇವರ ಪಾತ್ರ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಐಎಎಸ್ ಅಧಿಕಾರಿಯನ್ನು ಬಂಧಿಸಿ ಸಿಐಡಿ ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಸಿಬಿಐ ತನಿಖೆ ಕೋರಿದ್ದ ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಈ ಹಿಂದಿನ ನೇಮಕಾತಿ ಪರೀಕ್ಷೆಗಳ ಬಗ್ಗೆಯೂ ತನಿಖೆ

ಕೆಪಿಎಸ್​​ಸಿ ನೇಮಕಾತಿಯಲ್ಲಿ ಅಕ್ರಮ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ಈ ಹಿಂದಿನ ಪರೀಕ್ಷೆಗಳ ಬಗ್ಗೆಯೂ ಮಾಹಿತಿ ಸಂಗ್ರಹ ಮಾಡಿದ್ದಾರೆ. 3 ವರ್ಷಗಳಲ್ಲಿ ನಡೆದ ನಾಲ್ಕು ಪರೀಕ್ಷೆಗಳ ಬಗ್ಗೆ ವಿವರ ಪಡೆದುಕೊಳ್ಳಲಾಗಿದೆ. ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ನೇಮಕಾತಿ ಪರೀಕ್ಷೆ ಸೇರಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಬಗ್ಗೆಯೂ ಕೆದಕಿದ್ದಾರೆ. ಈ ನಾಲ್ಕೂ ನೇಮಕಾತಿಗಳ ವೇಳೆ ಅಕ್ರಮ ಎಸಗಿರುವ ಶಂಕೆ ಹಿನ್ನೆಲೆ, ಆ ಬಗ್ಗೆಯೂ ತನಿಖೆ ನಡೆಸಲಾಗ್ತಿದೆ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us