AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ತೂರಿನಲ್ಲಿ ಲೇನ್ ಉಲ್ಲಂಘಿಸಿ ಟ್ರಾಫಿಕ್ ಜಾಮ್​ಗೆ ಕಾರಣವಾದ ಕಾರಿನ ವಿಡಿಯೋ ವೈರಲ್; ಪತ್ತೆಹೆಚ್ಚಿ ದಂಡ ವಿಧಿಸಿದ ಪೊಲೀಸರು

ವೈಟ್‌ಫೀಲ್ಡ್ ಸಂಚಾರ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಆಯುಕ್ತರ ಅಧಿಕೃತ ಟ್ವಿಟರ್ ಖಾತೆಯು ಪೋಸ್ಟ್‌ಗೆ ಉತ್ತರಿಸಿದ್ದು, ಚಾಲಕನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿತ್ತು. ಸಂಚಾರ ಪೊಲೀಸರು ಕಾರನ್ನು ಪತ್ತೆಹಚ್ಚಿ ದಂಡ ವಿಧಿಸಿದ್ದಾರೆ.

ವರ್ತೂರಿನಲ್ಲಿ ಲೇನ್ ಉಲ್ಲಂಘಿಸಿ ಟ್ರಾಫಿಕ್ ಜಾಮ್​ಗೆ ಕಾರಣವಾದ ಕಾರಿನ ವಿಡಿಯೋ ವೈರಲ್; ಪತ್ತೆಹೆಚ್ಚಿ ದಂಡ ವಿಧಿಸಿದ ಪೊಲೀಸರು
ಟ್ರಾಫಿಕ್​ ಜಾಮ್​ಗೆ ಕಾರಣವಾದ ಕಾರು (ಟ್ವಿಟರ್ ವಿಡಿಯೋದಿಂದ ಸ್ಕ್ರೀನ್​​ಗ್ರ್ಯಾಬ್ ತೆಗೆದ ಚಿತ್ರ)
TV9 Web
| Edited By: |

Updated on: Aug 01, 2023 | 4:37 PM

Share

ಬೆಂಗಳೂರು: ವರ್ತೂರು ಬಳಿ ಟ್ರಾಫಿಕ್ ಜಾಮ್‌ಗೆ (Traffic Jam) ಕಾರಣವಾಗುವ ಕಿರಿದಾದ ರಸ್ತೆಯಲ್ಲಿ ಕಾರೊಂದು ಲೇನ್ ಶಿಸ್ತು ಉಲ್ಲಂಘಿಸಿ ಸಂಚಾರ ದಟ್ಟಣೆಗೆ ಕಾರಣವಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ವೈಟ್‌ಫೀಲ್ಡ್ ಸಂಚಾರ ಪೊಲೀಸರು ಕಾರು ಮಾಲೀಕನನ್ನು ಪತ್ತೆ ಹಚ್ಚಿ ದಂಡ ವಿಧಿಸಿದ್ದಾರೆ. ಅದೇ ರಸ್ತೆಯಲ್ಲಿ ಟ್ರಾಫಿಕ್‌ನಲ್ಲಿ ಸಿಲುಕಿಕೊಂಡಿದ್ದ ಪ್ರಯಾಣಿಕರೊಬ್ಬರು ಈ ವಿಡಿಯೋವನ್ನು ಟ್ವೀಟ್ ಮಾಡಿದ್ದರು. ಹರಿಯಾಣದ ನಂಬರ್ ಪ್ಲೇಟ್ ಹೊಂದಿದ್ದ ಕಾರು ರಸ್ತೆಯ ರಾಂಗ್ ಸೈಡ್‌ನಲ್ಲಿ ಹೋಗಿದ್ದರಿಂದ ಸಂಚಾರ ದಟ್ಟಣೆ ಉಂಟಾಗಿರುವುದು ವಿಡಿಯೋದಲ್ಲಿ ಕಾಣಿಸುತ್ತಿತ್ತು. ಸಂಚಾರಿ ನಿಯಮ ಪಾಲಿಸದ ಕಾರು ಚಾಲಕನ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದರು.

ವೈಟ್‌ಫೀಲ್ಡ್ ಸಂಚಾರ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಆಯುಕ್ತರ ಅಧಿಕೃತ ಟ್ವಿಟರ್ ಖಾತೆಯು ಪೋಸ್ಟ್‌ಗೆ ಉತ್ತರಿಸಿದ್ದು, ಚಾಲಕನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿತ್ತು. ಸಂಚಾರ ಪೊಲೀಸರು ಕಾರನ್ನು ಪತ್ತೆಹಚ್ಚಿ ದಂಡ ವಿಧಿಸಿದ್ದಾರೆ.

ಇದನ್ನೂ ಓದಿ: ಗೃಹ ಜ್ಯೋತಿ ಯೋಜನೆಯಡಿ ಶೂನ್ಯ ವಿದ್ಯುತ್ ಬಿಲ್ ಪಡೆಯಲು ನೀವೂ ಅರ್ಹರೇ? ತಿಳಿಯುವ ವಿಧಾನ ಇಲ್ಲಿದೆ

ಲೇನ್ ಶಿಸ್ತು, ರಾಂಗ್ ಸೈಡ್​​ನಲ್ಲಿ ಚಾಲನೆ ಮಾಡುವುದು, ಎಡದಿಂದ ಓವರ್‌ಟೇಕ್ ಮಾಡುವುದು, ವಾಹನಗಳ ನಡುವಿನ ಅಂತರದಂತಹ ವಿಚಾರಗಳ ಬಗ್ಗೆ ಜಾಗೃತಿ ಮೂಡಿಸಬೇಕೆಂದು ಟ್ರಾಫಿಕ್ ಪೊಲೀಸರಿಗೆ ವ್ಯಕ್ತಿಯೊಬ್ಬರು ವಿನಂತಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ