AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಕಾರನ್ನು ಇಲ್ಲಿ ನಿಲ್ಲಿಸಬೇಡಿ ಎಂದು ಕಾರಿನ ಗ್ಲಾಸ್​​ಗೆ ಅಂಟಿಸಿದ ಪತ್ರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಬೆಂಗಳೂರಿನ ಜನ

ತಮ್ಮ ಮನೆಯ ಮುಂದೆ ಕಾರು ಪಾರ್ಕಿಂಗ್ ಮಾಡಬೇಡಿ ಎಂದು ಸಮಾಧಾನದಿಂದ ಮನವಿ ಮಾಡಿಕೊಳ್ಳುವ ನೋಟಿಸ್​​​ ವೈರಲ್​ ಆಗಿದೆ.

Viral Post: ಕಾರನ್ನು ಇಲ್ಲಿ ನಿಲ್ಲಿಸಬೇಡಿ ಎಂದು ಕಾರಿನ ಗ್ಲಾಸ್​​ಗೆ ಅಂಟಿಸಿದ ಪತ್ರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಬೆಂಗಳೂರಿನ ಜನ
ವೈರಲ್​ ಫೋಟೋ
ಅಕ್ಷಯ್​ ಪಲ್ಲಮಜಲು​​
|

Updated on:Jun 29, 2023 | 1:44 PM

Share

ಬೆಂಗಳೂರು: ಈ ಬೆಂಗಳೂರಿನಲ್ಲಿ ಸಿಕ್ಕ ಸಿಕ್ಕಲ್ಲಿ ಪಾರ್ಕಿಂಗ್ ಮಾಡುವ ಜನರೇ ಇರುವುದು, ಇಲ್ಲಿ ಪಾರ್ಕಿಂಗ್ ಮಾಡಬೇಡಿ ಎಂದು ಬೋರ್ಡ್​ ಹಾಕಿದ್ರು, ಇದನ್ನು ಗಮನಿಸುವುದಿಲ್ಲ. ಅದು ಅನೇಕ ಬಾರಿ ಜಗಳಕ್ಕೂ ಕಾರಣವಾಗಿ, ಕೆಲವೊಂದು ಕಡೆ ಕೊಲೆಯೆ ಆಗಿದೆ. ಪಾರ್ಕಿಂಗ್ ವಿಚಾರದಲ್ಲಿ ಕಿತ್ತಾಡುವ ಜನರೇ ಹೆಚ್ಚು, ಒಂದು ಬಾರಿ ಯೋಚಿಸಿ, ತಮ್ಮ ಮನೆಯ ಮುಂದೆ ಹೀಗೆ ಪಾರ್ಕಿಂಗ್​​ ಮಾಡಬೇಡಿ ಎಂದು ಸಮಾಧಾನದಿಂದ ಹೇಳುವ ತಾಳ್ಮೆ ಈ ಬೆಂಗಳೂರಿನಲ್ಲಿ ಅನೇಕ ಜನರಿಗೆ ಇಲ್ಲ. ಈ ಕಾರಣಕ್ಕೆ ಜಗಳಕ್ಕೆ ಕಾರಣವಾಗುವುದು. ಪಾರ್ಕಿಂಗ್ ಮಾಡಿದ ವ್ಯಕ್ತಿ ನಮ್ಮ ಮುಂದೆ ಮಾತಾನಾಡಲು ಸಿಕ್ಕಿಲ್ಲ ಅಥವಾ ಮಾತನಾಡಲು ಮುಜುಗರ ಎಂದೆನಿಸಿದರೆ, ಒಂದು ವೇಳೆ ಮುಖಾಮುಖಿಯಾಗಿ ಅದು ಜಗಳಕ್ಕೆ ಕಾರಣವಾದರೆ ಎಂಬ ಆತಂಕವಿದ್ದರೆ ಹೀಗೆ ಮಾಡುಬಹುದು. ಅದು ಹೇಗೆ? ಇಲ್ಲಿದೆ ನೋಡಿ,  ಒಂದು ಟ್ವಿಟರ್​ ಪೋಸ್ಟ್, ಎಲ್ಲ ಕಡೆ ವೈರಲ್​​ ಆಗಿದೆ. ಇದಕ್ಕೆ ನೆಟ್ಟಿಗರು ಕೂಡ ಭಾರೀ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ತಮ್ಮ ಮನೆಯ ಮುಂದೆ ಕಾರು ಪಾರ್ಕಿಂಗ್ ಮಾಡಬೇಡಿ ಎಂದು ಸಮಾಧಾನದಿಂದ ಮನವಿ ಮಾಡಿಕೊಳ್ಳುವ ನೋಟಿಸ್​​​ ವೈರಲ್​ ಆಗಿದೆ.

ನಮ್ಮ ಪಾರ್ಕಿಂಗ್ ಸ್ಥಳದಲ್ಲಿ ನಿಮ್ಮ ವಾಹನ ನಿಲ್ಲಿಸಬೇಡಿ ಎಂದು ಬೆಂಗಳೂರಿನ ನಿವಾಸಿಯೊಬ್ಬರಿಗೆ ನೆರೆಯವರು ಬರೆದಿರುವ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆಯನ್ನು ಪಡೆದುಕೊಂಡಿದೆ. DevOps ಇಂಜಿನಿಯರ್ ಆಗಿರುವ ಸುಭಾಸಿಸ್ ದಾಸ್ ಅವರು ತಮ್ಮ ಕಾರಿನ ಗ್ಲಾಸ್​​ಗೆ ಅಂಟಿಸಿರುವ ನೋಟಿನ ಫೋಟೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.​

ಈ ಫೋಟೋ ಕೋರಮಂಗಲದಲ್ಲಿ ಕಂಡುಬಂದಿದೆ. ಬೆಂಗಳೂರು ಮಹಾಕಾವ್ಯದ ನಗರದ್ದು ಎಂದು ಸುಭಾಸಿಸ್ ದಾಸ್ ಟ್ವೀಟ್ ಮಾಡಿದ್ದಾರೆ. ಟ್ವಿಟರ್​ನಲ್ಲಿ ವೈರಲ್​​ ಆಗಿರುವ ನೋಟಿಸ್​​ನಲ್ಲಿ ಹೀಗೆ ಬರೆಯಲಾಗಿದೆ, ಹಾಯ್, ದಯವಿಟ್ಟು ನಿಮ್ಮ ಕಾರನ್ನು ಇಲ್ಲಿ ನಿಲ್ಲಿಸಬೇಡಿ! ನಾವು ಈ ಹಿಂದೆ ಇಲ್ಲಿ ಪಾರ್ಕಿಂಗ್ ಮಾಡಬೇಡಿ ಎಂದು ನಿಮ್ಮನ್ನು ವಿನಂತಿಸಿದ್ದೇವೆ. 2000ನೇ ಇಸವಿಯಿಂದ ನಾವು ಈ ಪ್ರದೇಶದಲ್ಲಿ ವಾಸಿಸುತ್ತಿದ್ದೇವೆ ಮತ್ತು ನಮ್ಮಲ್ಲೂ 2 ಕಾರುಗಳು ಇದೆ, ಎಂಬುದನ್ನು ದಯವಿಟ್ಟು ಅರ್ಥಮಾಡಿಕೊಳ್ಳಿ. ಆದ್ದರಿಂದ, ನಮಗೆ ಉತ್ತಮ ಪ್ರಮಾಣದ ಪಾರ್ಕಿಂಗ್ ಸ್ಥಳದ ಅಗತ್ಯವಿದೆ. ದಯವಿಟ್ಟು ನೀವು ಈ ಹಿಂದೆ ಪಾರ್ಕಿಂಗ್​​ ಮಾಡುತ್ತಿದ್ದ ಸ್ಪಾಟ್​​ನಲ್ಲಿಯೇ ಮಾಡಿ. ನಾವು ಒಳ್ಳೆಯವರಾಗಿರೋಣ ಮತ್ತು ಉತ್ತಮ ನೆರೆಹೊರೆಯವರಾಗಿರೋಣ ಧನ್ಯವಾದಗಳು, ಇಂತೀ ನಿಮ್ಮ ನೆರೆಹೊರೆಯವರು.

ಇದನ್ನೂ ಓದಿ: Mysore News: ಹೊಟ್ಟೆನೋವು ತಾಳಲಾರದೆ ಕೆರೆಗೆ ಹಾರಿ ಬಾಲಕಿ ಆತ್ಮಹತ್ಯೆ

ಈ ಬಗ್ಗೆ ಟ್ವಿಟರ್​ನಲ್ಲಿ​​ ವ್ಯಾಪಕ ಮೆಚ್ಚುಗೆ ವ್ಯಕ್ತಪಡಿಸಿದ್ದು, ಕಮೆಂಟ್​​ ಕೂಡ ಮಾಡಿದ್ದಾರೆ. ಇಲ್ಲಿ ಅನೇಕರ ಪಾರ್ಕಿಂಗ್​​ನಿಂದ ಅನುಭವಿಸಿದ ಕಿರಿಕಿರಿಯ ಬಗ್ಗೆ ಹಂಚಿಕೊಂಡಿದ್ದಾರೆ. ಕನಿಕಾ ಚೌಧರಿ ಬೆಂಗಳೂರು ಎಂಬುವವರು ಇದೊಂದು ಉತ್ತಮವಾಗಿದೆ ಎಂದು ಕಮೆಂಟ್​​ ಮಾಡಿದ್ದಾರೆ. ಇನ್ನೊಬ್ಬ ಟ್ವಿಟರ್​ ಬಳಕೆದಾರರಾದ ಅಂಕಿತ್ ಬೆರ್ರಿ ಅವರು ಇದೇ ರೀತಿಯ ಸಮಸ್ಯೆಯನ್ನು ನಾನು ಎದುರಿಸಿದೆ ಎಂಬ ಅನುಭವವನ್ನು ಹಂಚಿಕೊಂಡಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:34 pm, Thu, 29 June 23

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ