AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯಪ್ರಿಯರಿಗೆ ಶಾಕ್​! ಅಯ್ಯೋ, ಜೂನ್ ಮೊದಲ ವಾರ ಎಣ್ಣೆ ಸಿಗಲ್ಲ

ಜೂನ್​ ಮೊದಲ ವಾರ ಮದ್ಯ ಪ್ರಿಯರಿಗೆ ನಿರಾಸೆ ಕಾದಿದೆ. ಇಡೀ ವಾರ ಬೆಂಗಳೂರಿನಲ್ಲಿ ಮದ್ಯ ಸಿಗಲ್ಲ. ಏಕೆಂದರೆ ವಿಧಾನ ಪರಿಷತ್​ ಚುನಾವಣೆ ಮತ್ತು ಲೋಕಸಭಾ ಚುನಾವಣೆ ಮತ ಎಣಿಕೆ ಇರುವುದರಿಂದ ಜೂನ್​​ 1 ರಿಂದ 6ರ ವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ಬೆಂಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಮದ್ಯಪ್ರಿಯರಿಗೆ ಶಾಕ್​! ಅಯ್ಯೋ, ಜೂನ್ ಮೊದಲ ವಾರ ಎಣ್ಣೆ ಸಿಗಲ್ಲ
ಮದ್ಯಪಾನ ಆರೋಗ್ಯಕ್ಕೆ ಹಾನಿಕಾರ
ವಿನಾಯಕ ಬಡಿಗೇರ್​
| Edited By: ವಿವೇಕ ಬಿರಾದಾರ|

Updated on:May 27, 2024 | 10:26 AM

Share

ಬೆಂಗಳೂರು, ಮೇ 24: ಜೂನ್​ ಮೊದಲ ವಾರ ಮದ್ಯಪ್ರಿಯರಿಗೆ ಶಾಕ್​ ಕಾದಿದೆ. ಮಳೆಗಾಲ ಆರಂಭವಾಗುತ್ತೆ, ಸಾಯಂಕಾಲ ಜಿಟಿಜಿಟಿ ಮಳೆ-ಚಳಿಯಲ್ಲಿ ಒಂದು ಪೆಗ್​ ಏರಸತಾ ಕೂರಬೇಕು ಅಂದುಕೊಂಡಿರುವ ಮದ್ಯಪ್ರಿಯರು ಈ ಸುದ್ದಿಯನ್ನೊಮ್ಮೆ ಓದಿ ಬಿಡಿ. ಜೂನ್​​ ಮೊದಲ ವಾರ ನೀವು ಮದ್ಯದ ಮಳಿಗೆಗಳ (Alcohol Shop) ಬಳಿ ಹೋದರೆ ನಿರಾಸೆಯಿಂದ ವಾಪಸ್​ ಆಗಬೇಕಾಗುತ್ತದೆ. ಏಕೆಂದರೆ ವಿಧಾನ ಪರಿಷತ್​ ಚುನಾವಣೆ (Vidhan Parishad Election) ಮತ್ತು ಲೋಕಸಭೆ ಚುನಾವಣೆ (Lok Sabha Election) ಮತ ಎಣಿಕೆ ಇರುವುದರಿಂದ ಜೂನ್​ 1 ರಿಂದ 6ರ ವರೆಗೆ ಮದ್ಯದ (Alcohol) ಮಾರಾಟವನ್ನು ಬಂದ್​​ ಮಾಡುವಂತೆ ಬೆಂಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಜೂನ್ 1 ರಿಂದ 6ರವರೆಗೆ (ಜೂನ್ 5 ಹೊರತುಪಡಿಸಿ) ಬೆಂಗಳೂರಿನ ಎಲ್ಲ ಎಣ್ಣೆ ಅಂಗಡಿಗಳು ಸಂಪೂರ್ಣವಾಗಿ ಬಂದ್ ಇರಲಿವೆ. ಜೂನ್ 3 ರಂದು ಪದವೀಧರ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಹೀಗಾಗಿ ಜೂನ್ 1ರ ಸಾಯಂಕಾಲ 4 ಗಂಟೆಯಿಂದ ಜೂನ್ 3ರ ವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಇದನ್ನೂ ಓದಿ: ಲೋಕಸಭಾ ಚುನಾವಣೆ ಫಲಿತಾಂಶ ಬಳಿಕ ಮದ್ಯದ ದರ ಏರಿಕೆ ಸಾಧ್ಯತೆ

ಇನ್ನು ಜೂನ್ 4 ರಂದು ದೇಶಾದ್ಯಂತ ಲೋಕಸಭೆ ಚುನಾವಣೆಯ ಮತ ಎಣಿಕೆ‌ ನಡೆಯುವುದರಿಂದ ಅಂದು ಸಹ ಸಂಪೂರ್ಣವಾಗಿ ಎಲ್ಲ ಬಾರ್ ಅಂಡ್ ರೆಸ್ಟೋರೆಂಟ್, ವೈನ್ ಶಾಪ್ ಬಂದ್​ ಇರಲಿವೆ. ಜೂನ್​ 5 ರಂದು ಯಥಾಪ್ರಕಾರ ಎಣ್ಣೆ ಅಂಗಡಿಗಳು ತೆರೆದಿರುತ್ತವೆ. ಮತ್ತೆ ಜೂನ್ 6 ರಂದು ವಿಧಾನ ಪರಿಷತ್​ ಚುನಾವಣೆ ಮತ ಎಣಿಕೆ ಇರುವುದರಿಂದ ಅಂದು ಸಹ ಎಲ್ಲ ತರಹದ ಎಣ್ಣೆ ಅಂಗಡಿಗಳು ಬಂದ್​ ಆಗಲಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:04 pm, Fri, 24 May 24

Follow Us
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು