AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯಪ್ರಿಯರಿಗೆ ಶಾಕ್​! ಅಯ್ಯೋ, ಜೂನ್ ಮೊದಲ ವಾರ ಎಣ್ಣೆ ಸಿಗಲ್ಲ

ಜೂನ್​ ಮೊದಲ ವಾರ ಮದ್ಯ ಪ್ರಿಯರಿಗೆ ನಿರಾಸೆ ಕಾದಿದೆ. ಇಡೀ ವಾರ ಬೆಂಗಳೂರಿನಲ್ಲಿ ಮದ್ಯ ಸಿಗಲ್ಲ. ಏಕೆಂದರೆ ವಿಧಾನ ಪರಿಷತ್​ ಚುನಾವಣೆ ಮತ್ತು ಲೋಕಸಭಾ ಚುನಾವಣೆ ಮತ ಎಣಿಕೆ ಇರುವುದರಿಂದ ಜೂನ್​​ 1 ರಿಂದ 6ರ ವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ಬೆಂಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಮದ್ಯಪ್ರಿಯರಿಗೆ ಶಾಕ್​! ಅಯ್ಯೋ, ಜೂನ್ ಮೊದಲ ವಾರ ಎಣ್ಣೆ ಸಿಗಲ್ಲ
ಮದ್ಯಪಾನ ಆರೋಗ್ಯಕ್ಕೆ ಹಾನಿಕಾರ
ವಿನಾಯಕ ಬಡಿಗೇರ್​
| Edited By: |

Updated on:May 27, 2024 | 10:26 AM

Share

ಬೆಂಗಳೂರು, ಮೇ 24: ಜೂನ್​ ಮೊದಲ ವಾರ ಮದ್ಯಪ್ರಿಯರಿಗೆ ಶಾಕ್​ ಕಾದಿದೆ. ಮಳೆಗಾಲ ಆರಂಭವಾಗುತ್ತೆ, ಸಾಯಂಕಾಲ ಜಿಟಿಜಿಟಿ ಮಳೆ-ಚಳಿಯಲ್ಲಿ ಒಂದು ಪೆಗ್​ ಏರಸತಾ ಕೂರಬೇಕು ಅಂದುಕೊಂಡಿರುವ ಮದ್ಯಪ್ರಿಯರು ಈ ಸುದ್ದಿಯನ್ನೊಮ್ಮೆ ಓದಿ ಬಿಡಿ. ಜೂನ್​​ ಮೊದಲ ವಾರ ನೀವು ಮದ್ಯದ ಮಳಿಗೆಗಳ (Alcohol Shop) ಬಳಿ ಹೋದರೆ ನಿರಾಸೆಯಿಂದ ವಾಪಸ್​ ಆಗಬೇಕಾಗುತ್ತದೆ. ಏಕೆಂದರೆ ವಿಧಾನ ಪರಿಷತ್​ ಚುನಾವಣೆ (Vidhan Parishad Election) ಮತ್ತು ಲೋಕಸಭೆ ಚುನಾವಣೆ (Lok Sabha Election) ಮತ ಎಣಿಕೆ ಇರುವುದರಿಂದ ಜೂನ್​ 1 ರಿಂದ 6ರ ವರೆಗೆ ಮದ್ಯದ (Alcohol) ಮಾರಾಟವನ್ನು ಬಂದ್​​ ಮಾಡುವಂತೆ ಬೆಂಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಜೂನ್ 1 ರಿಂದ 6ರವರೆಗೆ (ಜೂನ್ 5 ಹೊರತುಪಡಿಸಿ) ಬೆಂಗಳೂರಿನ ಎಲ್ಲ ಎಣ್ಣೆ ಅಂಗಡಿಗಳು ಸಂಪೂರ್ಣವಾಗಿ ಬಂದ್ ಇರಲಿವೆ. ಜೂನ್ 3 ರಂದು ಪದವೀಧರ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಹೀಗಾಗಿ ಜೂನ್ 1ರ ಸಾಯಂಕಾಲ 4 ಗಂಟೆಯಿಂದ ಜೂನ್ 3ರ ವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಇದನ್ನೂ ಓದಿ: ಲೋಕಸಭಾ ಚುನಾವಣೆ ಫಲಿತಾಂಶ ಬಳಿಕ ಮದ್ಯದ ದರ ಏರಿಕೆ ಸಾಧ್ಯತೆ

ಇನ್ನು ಜೂನ್ 4 ರಂದು ದೇಶಾದ್ಯಂತ ಲೋಕಸಭೆ ಚುನಾವಣೆಯ ಮತ ಎಣಿಕೆ‌ ನಡೆಯುವುದರಿಂದ ಅಂದು ಸಹ ಸಂಪೂರ್ಣವಾಗಿ ಎಲ್ಲ ಬಾರ್ ಅಂಡ್ ರೆಸ್ಟೋರೆಂಟ್, ವೈನ್ ಶಾಪ್ ಬಂದ್​ ಇರಲಿವೆ. ಜೂನ್​ 5 ರಂದು ಯಥಾಪ್ರಕಾರ ಎಣ್ಣೆ ಅಂಗಡಿಗಳು ತೆರೆದಿರುತ್ತವೆ. ಮತ್ತೆ ಜೂನ್ 6 ರಂದು ವಿಧಾನ ಪರಿಷತ್​ ಚುನಾವಣೆ ಮತ ಎಣಿಕೆ ಇರುವುದರಿಂದ ಅಂದು ಸಹ ಎಲ್ಲ ತರಹದ ಎಣ್ಣೆ ಅಂಗಡಿಗಳು ಬಂದ್​ ಆಗಲಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:04 pm, Fri, 24 May 24

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ