AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಪರಿಷತ್ ಚುನಾವಣೆ: ಮದ್ಯ ಮಾರಾಟ ಸಂಬಂಧ ಸರ್ಕಾರದ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್

ವಿಧಾನಪರಿಷತ್ ಚುನಾವಣೆಗೆ ಮದ್ಯ(Liquor)ಮಾರಾಟ ನಿರ್ಬಂಧ‌ ವಿಚಾರವಾಗಿ ‘ ಇಂದು 48 ಗಂಟೆಗಳ ಅವಧಿಗೆ ಮದ್ಯ ಮಾರಾಟ ನಿಷೇಧ ಅನಗತ್ಯವೆಂದು ವಾದ ಮಾಡಲಾಗಿದ್ದು, ಈ ಬಗ್ಗೆ Liquor ಸರ್ಕಾರದ ಪ್ರತಿಕ್ರಿಯೆಗೆ ಹೈಕೋರ್ಟ್ ಸೂಚನೆ ನೀಡಿದೆ. ಇನ್ನೊಂದೆಡೆ ಗುತ್ತಿಗೆದಾರರಿಂದ 40% ಕಮಿಷನ್ ಸಂಬಂಧ ತನಿಖೆಗೆ ಆಯೋಗ ವಿಚಾರ ಹಿನ್ನಲೆ ವಿಚಾರಣೆ ಪೂರ್ಣಗೊಳಿಸಲು 6 ವಾರಗಳ ಕಾಲಾವಕಾಶವನ್ನು ಹೈಕೋರ್ಟ್​ ನೀಡಿದೆ.

ವಿಧಾನಪರಿಷತ್ ಚುನಾವಣೆ: ಮದ್ಯ ಮಾರಾಟ ಸಂಬಂಧ ಸರ್ಕಾರದ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್
ಹೈಕೋರ್ಟ್​
Ramesha M
| Edited By: |

Updated on:Feb 13, 2024 | 10:57 PM

Share

ಬೆಂಗಳೂರು, ಫೆ.13: ವಿಧಾನಪರಿಷತ್ ಚುನಾವಣೆಗೆ ಮದ್ಯ(Liquor)ಮಾರಾಟ ನಿರ್ಬಂಧ‌ ವಿಚಾರವಾಗಿ ಜಿಲ್ಲಾಧಿಕಾರಿಗಳ ಕ್ರಮ ಪ್ರಶ್ನಿಸಿ ಹೋಟೆಲ್​ಗಳ ಸಂಘಟನೆ ಅರ್ಜಿ ಸಲ್ಲಿಸಿತ್ತು. ಕೇವಲ 16 ಸಾವಿರ ಶಿಕ್ಷಕ ಮತದಾರರು ಚುನಾವಣೆಯಲ್ಲಿ ಭಾಗಿಯಾಗಿದ್ದು, ಮದ್ಯ ನಿಷೇಧದಿಂದ ವರ್ತಕರು, ಹೋಟೆಲ್ ಉದ್ದಿಮೆಗೆ ಸಮಸ್ಯೆಯಾಗಿದೆ ಎನ್ನಲಾಗಿತ್ತು. 48 ಗಂಟೆಗಳ ಅವಧಿಗೆ ಮದ್ಯ ಮಾರಾಟ ನಿಷೇಧ ಅನಗತ್ಯವೆಂದು ವಾದ ಮಾಡಲಾಗಿದ್ದು, ಈ ಬಗ್ಗೆ Liquor ಸರ್ಕಾರದ ಪ್ರತಿಕ್ರಿಯೆಗೆ ಹೈಕೋರ್ಟ್(High Court) ಸೂಚನೆ ನೀಡಿದೆ.

ಗುತ್ತಿಗೆದಾರರಿಂದ 40% ಕಮಿಷನ್ ಸಂಬಂಧ ತನಿಖೆಗೆ ಆಯೋಗ; ವಿಚಾರಣೆ ಪೂರ್ಣಗೊಳಿಸಲು 6 ವಾರಗಳ ಕಾಲಾವಕಾಶ

ಬೆಂಗಳೂರು: ಗುತ್ತಿಗೆದಾರರಿಂದ 40% ಕಮಿಷನ್ ಸಂಬಂಧ ತನಿಖೆಗೆ ಆಯೋಗ ವಿಚಾರ ಹಿನ್ನಲೆ ತನಿಖೆಯ ನೆಪವೊಡ್ಡಿ ಬಿಲ್ ಪಾವತಿ‌ ವಿಳಂಬಕ್ಕೆ ಗುತ್ತಿಗೆದಾರರು ಆಕ್ಷೇಪ ವ್ಯಕ್ತಪಡಿಸಿ ಹೈಕೋರ್ಟ್​ನಲ್ಲಿ ಹಲವು ಗುತ್ತಿಗೆದಾರರು ರಿಟ್ ಅರ್ಜಿ ಸಲ್ಲಿಸಿದ್ದು, ಇದೀಗ ವಿಚಾರಣೆ ಮಾಡಿ, ಆಯೋಗದ ವಿಚಾರಣೆ ಪೂರ್ಣಗೊಳಿಸಲು 6 ವಾರಗಳ ಕಾಲಾವಕಾಶ ನೀಡಲಾಗಿದೆ. ಅಂದರೆ ಏಪ್ರೀಲ್​.2 ರೊಳಗೆ ವರದಿ‌ ಸಲ್ಲಿಸಲು ಹೈಕೋರ್ಟ್​ನಿಂದ ಅಂತಿಮ ಗಡುವು ನೀಡಿದ್ದು, ಇಲ್ಲವಾದರೆ ಬಾಕಿ ಬಿಲ್ ಪಾವತಿಗೆ ಆದೇಶ ಅನಿವಾರ್ಯವಾಗಿದೆ. ಬಳಿಕ ವಿಚಾರಣೆ ಮುಂದುವರಿಸಲು ಅವಕಾಶ ನೀಡುವುದಿಲ್ಲ ಎಂದು ಸರ್ಕಾರಕ್ಕೆ ನ್ಯಾಯಮೂರ್ತಿ ಎಂ.ನಾಗಪ್ರಸನ್ನರಿದ್ದ ಹೈಕೋರ್ಟ್ ಪೀಠ ಸೂಚನೆ ನೀಡಿದೆ.

ಇದನ್ನೂ ಓದಿ:ಕರ್ನಾಟಕ ಹೈಕೋರ್ಟ್​ಗೆ ನೂತನ ಮುಖ್ಯ ನ್ಯಾಯಾಮೂರ್ತಿ ಹೆಸರು ಶಿಫಾರಸು: ಯಾರು ಗೊತ್ತಾ?

ಬಿಲ್​ ಪಾವತಿ ಮಾಡಲು ವಿವಿಧ ಇಲಾಖೆಗಳಲ್ಲಿ 40% ಕಮಿಷನ್ ಪಡೆಯಲಾಗಿದೆ ಎಂಬ ಗುತ್ತಿಗೆದಾರರ ಆರೋಪಕ್ಕೆ ಸಂಬಂಧಿಸಿದಂತೆ, ಈ ಕುರಿತು ವಿಚಾರಣೆ ನಡೆಸಲು ನೇಮಕಗೊಂಡಿರುವ ನಿವೃತ್ತ ನ್ಯಾಯಮೂರ್ತಿ ಹೆಚ್​.ಎನ್​ ನಾಗಮೋಹನ್​ ದಾಸ್​ ಅವರ ಏಕ ವ್ಯಕ್ತಿ ಆಯೋಗದ ಮುಂದೆ ಏಕೆ ಒಂದೇ ಒಂದು ಪ್ರಕ್ರಿಯೆ ನಡೆದಿಲ್ಲ ಎಂಬುದನ್ನು ರಾಜ್ಯ ಸರ್ಕಾರ ತಿಳಿಸಬೇಕು. ಇಲ್ಲವಾದಲ್ಲಿ ಸೂಕ್ತ ಆದೇಶ ಮಾಡಲಾಗುವುದು ಎಂದು ಹೈಕೋರ್ಟ್‌ ಎಚ್ಚರಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:21 pm, Tue, 13 February 24

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ