AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕರ ಹೆಸರಲ್ಲಿ ನಕಲಿ ಸಹಿ,​ ಲೆಟರ್​ ಹೆಡ್ ಸೃಷ್ಟಿಸಿ ಕೆಲಸ ಕೊಡಿಸಿದ ಆರೋಪಿಯ ಬಂಧನ

ಶಾಸಕರ ಹೆಸರಿನಲ್ಲಿ ನಕಲಿ ಲೆಟರ್​​ಹೆಡ್​ ಸೃಷ್ಟಿಸಿ, ಅದರಲ್ಲಿ ಶಾಸಕರ ನಕಲಿ ಸಹಿ ಮಾಡಿ ಇಬ್ಬರಿಗೆ ಕೆಲಸ ಕೊಡಿಸಿದ್ದ ಆರೋಪಿಯನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಕೃತ್ಯದಲ್ಲಿ ಭಾಗಿಯಾದ ಮಹಿಳೆಯೊಬ್ಬಳಿಗೆ ಪೊಲೀಸರು ನೋಟಿಸ್​ ನೀಡಿದ್ದಾರೆ.

ಶಾಸಕರ ಹೆಸರಲ್ಲಿ ನಕಲಿ ಸಹಿ,​ ಲೆಟರ್​ ಹೆಡ್ ಸೃಷ್ಟಿಸಿ ಕೆಲಸ ಕೊಡಿಸಿದ ಆರೋಪಿಯ ಬಂಧನ
ಶಾಸಕರ ನಕಲಿ ಸಹಿ, ಲೆಟರ್​ಹೆಡ್​​ ಸೃಷ್ಟಿಸಿದ ಆರೋಪಿಗಳು
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Aug 26, 2024 | 10:21 AM

Share

ಬೆಂಗಳೂರು, ಆಗಸ್ಟ್​ 26: ಶಾಸಕರ (MLA) ಹೆಸರಿನಲ್ಲಿ ನಕಲಿ ಸಹಿ, ಲೆಟರ್ ಹೆಡ್ ಸೃಷ್ಟಿ ಮಾಡಿ ಕೆಲಸ ಕೊಡಿಸಿದ ಆರೋಪದ ಮೇಲೆ ಇಬ್ಬರನ್ನು ವಿಧಾನಸೌಧ ಠಾಣಾ ಪೊಲೀಸರು (Vidhansoudha Police Station) ಬಂಧಿಸಿದ್ದಾರೆ. ರಾಮನಗರದ ಸ್ವಾಮಿ (35), ಅಂಜನ್ ಕುಮಾರ್ (28) ಬಂಧಿತ ಆರೋಪಿಗಳು.

ಸ್ವಾಮಿ ಈ ಹಿಂದೆ ವಿಧಾನಸೌಧದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡಿಕೊಂಡಿದ್ದನು. ಆದರೆ, ಸ್ವಾಮಿ ಕೆಲಸ ತೊರೆದು ರಾಜಕಾರಣಿಗಳ ಒಡನಾಟ ಬೆಳೆಸಿಕೊಂಡಿದ್ದನು. ಈತ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಹೆಸರಿನಲ್ಲಿ ನಕಲಿ ಲೆಟರ್ ಹೆಡ್ ಸೃಷ್ಟಿಸಿ, ನಕಲಿ ಸಹಿ ಮಾಡಿದ್ದಾನೆ. ಬಳಿಕ ಸ್ವಾಮಿ, ವಿಧಾನಸಭಾ ಸಚಿವಾಲಯಕ್ಕೆ ಪತ್ರ ಬರೆದು ಪತ್ನಿ ವಿನುತಾ ಮತ್ತು ಅಂಜನ್ ಎಂಬುವರಿಗೆ ಶಾಸಕರ ಆಪ್ತ ಸಹಾಯಕ ಹುದ್ದೆ ಕೊಡಿಸಿದ್ದನು.

ಪತ್ನಿ ವಿನುತಾಗೆ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಆಪ್ತ ಸಹಾಯಕಿಯಾಗಿ ನೇಮಿಸಲು ಶಿಫಾರಸ್ಸು ಮಾಡಿದ್ದನು. ಈ ನಕಲಿ ಲೆಟರ್ ಹೆಡ್ ನಂಬಿದ ವಿಧಾನಸಭಾ ಸಚಿವಾಲಯ ಸಿಬ್ಬಂದಿ 2023ರ ಮೇನಲ್ಲಿ ವಿನುತಾಗೆ ಕೆಲಸ ನೀಡಿದ್ದರು. ಬಳಿಕ, ವಿನುತಾ ಕೆಲಸಕ್ಕೆ ಬಾರದೆ ಪ್ರತಿ ತಿಂಗಳು 30 ಸಾವಿರ ಸಂಬಳವನ್ನು ಪಡೆದಿದ್ದಳು.

ಇದನ್ನೂ ಓದಿ: ಸರ್ಕಾರಿ ವೈದ್ಯೆಯರಿಗೆ ರಕ್ಷಣೆ ಕೊಡಲು ಆರೋಗ್ಯ ಇಲಾಖೆಯಿಂದ ಮಹತ್ವದ ನಿರ್ಧಾರ

ಗರ್ಭಿಣಿಯಾದ ಬಳಿಕ ಕೆಲಸದಿಂದ ಬಿಡುಗಡೆಗೊಳಿಸುವಂತೆ ವಿನುತಾ ಪತ್ರ ಬರೆದಿದ್ದಳು. ಇದರ ಬಗ್ಗೆ ಅನುಮಾನಗೊಂಡು ಪರಿಶೀಲನೆ ಮಾಡಿದಾಗ ಅಸಲಿ ವಿಚಾರ ಬೆಳಕಿಗೆ ಬಂದಿದ್ದು, ಅಧಿಕಾರಿಗಳು ವಿಧಾನಸೌಧ ಪೊಲೀಸ್​ ಠಾಣೆಯಲ್ಲಿ ದೂರು‌ ದಾಖಲಿಸಿದರು.

ತನಿಖೆ ವೇಳೆ ಶಾಸಕ ಎಸ್.ರಘು ಹೆಸರಿನಲ್ಲೂ ವಂಚನೆ ಮಾಡಿರೋದು ಬೆಳಕಿಗೆ ಬಂದಿದೆ. ಶಾಸಕ ರಘು ಹೆಸರಿನಲ್ಲಿ ನಕಲಿ ಲೆಟರ್ ಸೃಷ್ಟಿಸಿ ಅಂಜನ್ ಕುಮಾರ್ ಎಂಬಾತನಿಗೆ ಕೆಲಸ ಕೊಡಿಸಿದ್ದನು. ಸದ್ಯ ಪೊಲೀಸರು ಸ್ವಾಮಿ ಮತ್ತು ಅಂಜನ್​ ಕುಮಾರ್​ನನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿ ಸ್ವಾಮಿ ಪತ್ನಿ ವಿನುತಾಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:19 am, Mon, 26 August 24

Follow Us
ವಿವೇಕ ಬಿರಾದಾರ
ವಿವೇಕ ಬಿರಾದಾರ

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ನಿರುದ್ಯೋಗಿಗಳಿಗೆ ಗುಡ್​ನ್ಯೂಸ್​​ ನೀಡಿದ ಸಿಎಂ ಡಿಕೆ ಶಿವಕುಮಾರ್​
ನಿರುದ್ಯೋಗಿಗಳಿಗೆ ಗುಡ್​ನ್ಯೂಸ್​​ ನೀಡಿದ ಸಿಎಂ ಡಿಕೆ ಶಿವಕುಮಾರ್​
ವೆನೆಜುವೆಲಾ ದರೋಡೆಕೋರನ ಮೇಲಿನ ವೈಮಾನಿಕ ದಾಳಿಯ ವಿಡಿಯೋ ಹಂಚಿಕೊಂಡ ಟ್ರಂಪ್
ವೆನೆಜುವೆಲಾ ದರೋಡೆಕೋರನ ಮೇಲಿನ ವೈಮಾನಿಕ ದಾಳಿಯ ವಿಡಿಯೋ ಹಂಚಿಕೊಂಡ ಟ್ರಂಪ್
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ
ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ