AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ಪರ ಘೋಷಣೆ ಪ್ರಕರಣ: FSL ವರದಿಯಲ್ಲಿ ಸತ್ಯ ಬಹಿರಂಗ, ಆರೋಪಿ ಬಂಧನಕ್ಕೆ ತಯಾರಿ

ಇಡೀ ರಾಜ್ಯದಲ್ಲಿ ಕಿಚ್ಚು ಹಬ್ಬಿಸಿದ್ದ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆಯ ಎಫ್​ಎಸ್​ಎಲ್ ವರದಿ ಬಹಿರಂಗವಾಗಿದೆ. ವರದಿಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಸಾಬೀತಾಗಿದ್ದು ವಾಯ್ಸ್ ಮ್ಯಾಚ್ ಮಾಡಿ ಆರೋಪಿಯನ್ನು ಬಂಧಿಸಲು ಪೊಲೀಸರು ತಯಾರಿ ನಡೆಸುತ್ತಿದ್ದಾರೆ. ಈಗಾಗಲೇ ಅನೇಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.

ಪಾಕ್ ಪರ ಘೋಷಣೆ ಪ್ರಕರಣ: FSL ವರದಿಯಲ್ಲಿ ಸತ್ಯ ಬಹಿರಂಗ, ಆರೋಪಿ ಬಂಧನಕ್ಕೆ ತಯಾರಿ
ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ
Follow us
Prajwal Kumar NY
| Updated By: ಆಯೇಷಾ ಬಾನು

Updated on: Mar 02, 2024 | 7:04 AM

ಬೆಂಗಳೂರು, ಮಾರ್ಚ್.02: ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ (Pakistan Zindabad slogans) ಘೋಷಣೆ ಕೂಗಿದ ಪ್ರಕರಣ ಸಂಬಂಧ ಎಫ್​ಎಸ್​ಎಲ್​ ವರದಿ (FSL Report) ಹೊರ ಬಿದ್ದಿದ್ದು ಪಾಕಿಸ್ತಾನ್ ಪರ ಘೋಷಣೆ ಕೂಗಿದ್ದು ದೃಢಪಟ್ಟಿದೆ. ನಾಸಿರ್ ಸಾಬ್ ಜಿಂದಾಬಾದ್ ಮತ್ತು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ. FSL​ನಲ್ಲಿ ಪರಿಶೀಲನೆ ವೇಳೆ ಆಡಿಯೋ ಮತ್ತು ವಿಡಿಯೋವನ್ನು ಎಡಿಟ್ ಮಾಡಿ ಸೇರಿಸಲಾಗಿಲ್ಲ. ಪಾಕ್ ಪರ ಘೋಷಣೆ ಕೂಗಿದ್ದು ನಿಜ ಎಂದು ತಿಳಿದು ಬಂದಿದೆ.

ಎಫ್​ಎಸ್​ಎಲ್ ವರದಿ ಅನ್ವಯ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಪೊಲೀಸರ ತನಿಖೆ ವೇಳೆ ಕೆಲ ಅನುಮಾನಿತ ವ್ಯಕ್ತಿಗಳನ್ನು ವಶಕ್ಕೆ ಪಡೆಯಲಾಗಿತ್ತು. ಈಗಾಗಲೇ ವಶಕ್ಕೆ ಪಡೆದಿದ್ದ ಅನುಮಾನಿತ ವ್ಯಕ್ತಿಗಳ ವಾಯ್ಸ್ ರವಾನೆ ಮಾಡಲಾಗಿದೆ. ಅನುಮಾನಿತರ ಪೈಕಿ ಓರ್ವನನ್ನು ವಶಕ್ಕೆ ಪಡೆಯಲಾಗಿದೆ. ಎಫ್​ಎಸ್​ಎಲ್​ನಿಂದ ವಾಯ್ಸ್ ಮ್ಯಾಚ್ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ವಾಯ್ಸ್ ಮ್ಯಾಚ್ ಆದ ಕೂಡಲೇ ಅಧಿಕೃತವಾಗಿ ಆರೋಪಿಯನ್ನು ಬಂಧಿಸಲು ತಯಾರಿ ನಡೆದಿದೆ.

7 ಮಂದಿ ವಿಚಾರಣೆ, 19 ಮಂದಿ ಬಾಕಿ

ವಿಧಾನಸೌಧ ಠಾಣೆ ಪೊಲೀಸರು ಈವರೆಗೆ 7 ಮಂದಿಯ ವಿಚಾರಣೆ ನಡೆಸಿದ್ದಾರೆ. ಮೂವರ ವಾಯ್ಸ್ ಸ್ಯಾಂಪಲ್ FSLಗೆ ರವಾನಿಸಿದ್ದಾರೆ. ವಿಚಾರಣೆಗೆ ಒಳಪಟ್ಟ ಎಲ್ಲರೂ ಪಾಕ್ ಪರ ಘೋಷಣೆ ಕೂಗಿಲ್ಲವೆಂದು ಹೇಳಿಕೆ ನೀಡಿದ್ದಾರೆ. ಪೊಲೀಸರು 26 ಮಂದಿಯ ಪಟ್ಟಿ ಮಾಡಿದ್ದು, ಇನ್ನೂ 19 ಜನರ ವಿಚಾರಣೆ ನಡೆಯುತ್ತಿದೆ.

ಇದನ್ನೂ ಓದಿ: ಪಾಕ್ ಪರ ಘೋಷಣೆ ಕೂಗಿದವರ ವಿಚಾರಣೆಯೋ ಅಥವಾ ಬಿರಿಯಾನಿ ತಿನ್ನಿಸಿ ವಾಪಸ್ಸು ಕಳಿಸಲಾಗುತ್ತಿದೆಯೋ? ಸಿಟಿ ರವಿ, ಬಿಜೆಪಿ ನಾಯಕ

‘ವರದಿ ಬಂದರೂ ಸರ್ಕಾರ ಬಹಿರಂಗ ಪಡಿಸಿಲ್ಲ’

ಇನ್ನು ಈ ಹಿಂದೆ ಎಫ್​ಎಸ್​ಎಲ್ ವರದಿ ಬಂದರೂ ಸರ್ಕಾರ ವರದಿಯನ್ನು ಬಹಿರಂಗ ಪಡಿಸಿರಲಿಲ್ಲ. ಹೀಗಾಗಿ ಬಿಜೆಪಿ ಕಿಡಿಕಾರಿತ್ತು. ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಗಂಭೀರ ಆರೋಪ ಮಾಡಿದ್ರು. FSL ವರದಿಯಲ್ಲಿ ಪಾಕ್​ ಪರ ಘೋಷಣೆ ಕೂಗಿದ್ದು ಗೊತ್ತಾಗಿದೆ. ರಾತ್ರಿ ವರದಿ ಬಂದರೂ ರಾಜ್ಯ ಸರ್ಕಾರ ಇನ್ನೂ ಬಹಿರಂಗ ಪಡಿಸಿಲ್ಲ ಎಂದು ಆಕ್ರೋಶ ಹೊರ ಹಾಕಿದ್ದರು.

ಪಾಕ್ ಪರ ಘೋಷಣೆ ಕೂಗಿದವರನ್ನ ರಕ್ಷಿಸುತ್ತಿದ್ದಾರೆ

ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರನ್ನು ರಕ್ಷಣೆ ಮಾಡಿದ್ದಾರೆ ಅಂತಾ ಮಾಜಿ ಸಚಿವ ಆರಗ ಜ್ಞಾನೇಂದ್ರ ಆರೋಪಿಸಿದ್ದರು. FSL ವರದಿ ಬರಲಿ ಅಂತಿದ್ದಾರೆ. ಒಬ್ಬರ ಕೊಲೆ ಆಗ್ತದೆ, ಆಗ ಪೋಸ್ಟ್ ಮಾರ್ಟಂ ವರದಿ ಬರಲಿ ಅಂತಾ ಕಾಯ್ತಾರಾ ಅರೆಸ್ಟ್ ಮಾಡ್ತಾರೆ ಎಂದು ಪ್ರಶ್ನಿಸಿದ್ರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ