AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Village Accountant ಕೆಲಸ ಕೊಡಿಸುವುದಾಗಿ ನಂಬಿಸಿ ವಂಚನೆ; ವಿಧಾನಸೌಧ ಪೊಲೀಸರಿಂದ ಆರೋಪಿ ಅರೆಸ್ಟ್

ಆರೋಪಿ ಈರಣ್ಣ ತುಮಕೂರು ಜಿಲ್ಲೆಯ ಕಂಪನಹಳ್ಳಿ ನಿವಾಸಿ. ಕೇವಲ ಉತ್ತರ ಕರ್ನಾಟಕ ಮೂಲದ ಯುವಕರನ್ನೇ ಈರಣ್ಣ ಟಾರ್ಗೆಟ್ ಮಾಡಿ ವಂಚಿಸ್ತಿದ್ದ. ತಾನು ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯಲ್ಲಿ ನೌಕರ ಅಂತ ಪರಿಚಯ ಮಾಡಿಕೊಳ್ತಿದ್ದ ಈರಣ್ಣ ವಿಧಾನಸೌಧದ ಬಳಿಯೇ ಕೂತು ಅಭ್ಯರ್ಥಿಗಳನ್ನ ಖೆಡ್ಡಕ್ಕೆ ಕೆಡವುತ್ತಿದ್ದ.

Village Accountant ಕೆಲಸ ಕೊಡಿಸುವುದಾಗಿ ನಂಬಿಸಿ ವಂಚನೆ; ವಿಧಾನಸೌಧ ಪೊಲೀಸರಿಂದ ಆರೋಪಿ ಅರೆಸ್ಟ್
ಸಾಂದರ್ಭಿಕ ಚಿತ್ರ
TV9 Web
| Updated By: ಸಾಧು ಶ್ರೀನಾಥ್​|

Updated on:Jan 20, 2022 | 11:20 AM

Share

ಬೆಂಗಳೂರು: ಗ್ರಾಮ ಲೆಕ್ಕಿಗ (Village Accountant) ಕೆಲಸ ಕೊಡಿಸುವುದಾಗಿ ನಂಬಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಈರಣ್ಣನನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ಉತ್ತರ ಕರ್ನಾಟಕ ಮೂಲದ ಯುವಕರನ್ನೇ ಟಾರ್ಗೆಟ್ ಮಾಡಿ ಹಣ ಪೀಕುತ್ತಿದ್ದ ವಂಚನ ಅರೆಸ್ಟ್ ಆಗಿದ್ದಾನೆ.

ಆರೋಪಿ ಈರಣ್ಣ ತುಮಕೂರು ಜಿಲ್ಲೆಯ ಕಂಪನಹಳ್ಳಿ ನಿವಾಸಿ. ಕೇವಲ ಉತ್ತರ ಕರ್ನಾಟಕ ಮೂಲದ ಯುವಕರನ್ನೇ ಈರಣ್ಣ ಟಾರ್ಗೆಟ್ ಮಾಡಿ ವಂಚಿಸ್ತಿದ್ದ. ತಾನು ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯಲ್ಲಿ ನೌಕರ ಅಂತ ಪರಿಚಯ ಮಾಡಿಕೊಳ್ತಿದ್ದ ಈರಣ್ಣ ವಿಧಾನಸೌಧದ ಬಳಿಯೇ ಕೂತು ಅಭ್ಯರ್ಥಿಗಳನ್ನ ಖೆಡ್ಡಕ್ಕೆ ಕೆಡವುತ್ತಿದ್ದ. ಗ್ರಾಮಲೆಕ್ಕಿಗನ ಕೆಲಸ ಕೊಡಿಸ್ತೀನಿ, ಅದಕ್ಕಾಗಿ ಪಿಯುಸಿಯಲ್ಲಿ ಅಧಿಕ ಅಂಕ ಗಳಿಸಿರಬೇಕು. ಹೀಗಾಗಿ ನಕಲಿ ಅಂಕಪಟ್ಟಿ ಸಿದ್ಧಪಡಿಸಿಕೊಳ್ಳಿ ಎಂದು ನಂಬಿಸುತ್ತಿದ್ದ. ಆರೋಪಿ ಈರಣ್ಣನ ಮಾತು ಕೇಳಿ ಅನೇಕರು ನಕಲಿ ಅಂಕಪಟ್ಟಿ ತಯಾರಿಸಿದ್ದರು.

ಅರುಣ್ ಕುಮಾರ್, ಸಿದ್ಧನಗೌಡ ಬಿರಾದರ, ಹುಚ್ಚಯ್ಯ ಸ್ವಾಮಿ, ಶಿವಕುಮಾರ ಗಂಗಾವತಿ, ನಯನ ಬೀಳಗಿ, ಶೋಭಾ ಕಲಕೆರೆ, ಸಂಗಮೇಶ್ ವಸ್ತ್ರದ್ ಎಂಬವರಿಗೆ ಮಾತಿನಲ್ಲೇ ಪುಸಲಾಯಿಸಿ ವಂಚಿಸಿದ್ದ. ಅಷ್ಟೇ ಅಲ್ಲ ಅಭ್ಯರ್ಥಿಗಳಿಗೆ ಫೇಕ್ ಮಾರ್ಕ್ಸ್ ಕಾರ್ಡ್ ಮಾಡಿಸಿ ವಿಲೇಜ್ ಅಕೌಂಟೆಂಟ್ ಹುದ್ದೆಗೂ ಅರ್ಜಿ ಹಾಕಿಸಿದ್ದ. ಶಿವಮೊಗ್ಗ, ಹಾಸನ, ಮಂಡ್ಯ, ಚಿಕ್ಕಮಗಳೂರು ಸೇರಿದಂತೆ ಹಲವು ಕಡೆ ಗ್ರಾಮಲೆಕ್ಕಿಗನ ಪೋಸ್ಟ್ಗೆ ಅರ್ಜಿ ಕೂಡ ಹಾಕಿಸಿದ್ದ. ಬುಟ್ಟಿಗೆ ಬೀಳೋ ಅಭ್ಯರ್ಥಿಗಳಿಂದ ಲಕ್ಷಾಂತರ ರೂಪಾಯಿ ಸುಲಿಗೆ ಮಾಡಿದ್ದ ಈರಣ್ಣ ಸದ್ಯ ವಿಧಾನಸೌಧ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಆರೋಪಿಯನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಸಿಲಿಕಾನ್ ಸಿಟಿಯಲ್ಲೊಬ್ಬ ವಿಚಿತ್ರ ಕಳ್ಳ-ಕಳ್ಳತನ, ಎಲ್ಲ ಬಿಟ್ಟು ಶನಿ ವಿಗ್ರಹವನ್ನೇ ಯಾಕೆ ಹೊತ್ತೊಯ್ದ ಎಂಬುದೇ ನಿಗೂಢ!

Published On - 11:07 am, Thu, 20 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ