AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಾಯುಕ್ತ ಎಡಿಜಿಪಿ ಎಂದು ಕಾರ್ಯಪಾಲಕ ಇಂಜಿನಿಯರ್​ಗೆ ಕರೆ ಮಾಡಿದ್ದ ವ್ಯಕ್ತಿಯ ಬಂಧನ

ಲೋಕಾಯುಕ್ತ ಎಡಿಜಿಪಿ ಎಂದು ಶಿರಾ ವಿಭಾಗದ ಭದ್ರಾ ಮೇಲ್ದಂಡೆ ಕಾರ್ಯಪಾಲಕ ಇಂಜಿನಿಯರ್ ರಾಮದಾಸಪ್ಪಗೆ ಕರೆ ಮಾಡಿದ್ದ ವ್ಯಕ್ತಿಯನ್ನು ವಿಧಾನಸೌಧ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಲೋಕಾಯುಕ್ತ ಎಡಿಜಿಪಿ ಎಂದು ಕಾರ್ಯಪಾಲಕ ಇಂಜಿನಿಯರ್​ಗೆ ಕರೆ ಮಾಡಿದ್ದ ವ್ಯಕ್ತಿಯ ಬಂಧನ
ವಿಧಾನಸೌಧ ಪೊಲೀಸ್ ಠಾಣೆ
Shivaprasad B
| Edited By: ವಿವೇಕ ಬಿರಾದಾರ|

Updated on: Nov 07, 2023 | 9:04 AM

Share

ಬೆಂಗಳೂರು ನ.07: ಲೋಕಾಯುಕ್ತ (Lokayukta) ಎಡಿಜಿಪಿ (ADGP) ಎಂದು ಶಿರಾ ವಿಭಾಗದ ಭದ್ರಾ ಮೇಲ್ದಂಡೆ ಕಾರ್ಯಪಾಲಕ ಇಂಜಿನಿಯರ್ ರಾಮದಾಸಪ್ಪಗೆ ಕರೆ ಮಾಡಿದ್ದ ವ್ಯಕ್ತಿಯನ್ನು ವಿಧಾನಸೌಧ ಪೊಲೀಸ್ (Police) ಠಾಣೆ ಪೊಲೀಸರು ಬಂಧಿಸಿದ್ದಾರೆ. ಪಟ್ಟೆಗಾರಪಾಳ್ಯದ ತ್ಯಾಗರಾಜ್ (68) ಬಂಧಿತ ಆರೋಪಿ. ಆರೋಪಿ ತ್ಯಾಗರಾಜ್​ ಕಾರ್ಯಪಾಲಕ ಇಂಜಿನಿಯರ್ ರಾಮದಾಸಪ್ಪಗೆ ಕರೆ ಮಾಡಿ, ನಾನು ಲೋಕಾಯುಕ್ತ ಇನ್ಸ್​ಪೆಕ್ಟರ್ ಎಂದು ಪರಿಚಯಿಸಿಕೊಂಡಿದ್ದಾನೆ.

ನಂತರ ನಮ್ಮ ಲೋಕಾಯುಕ್ತ ಎಡಿಜಿಪಿ ಸಾಹೇಬರು ನಿಮ್ಮ ಜೊತೆ ಮಾತನಾಡುತ್ತಾರೆ ಎಂದು ಹೇಳಿದ್ದಾನೆ. ಆತನೇ ಧ್ವನಿ ಬದಲಾಯಿಸಿ, ನಿಮ್ಮ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಮುಕ್ತಾಯಗೊಳಿಸಲು ವ್ಯವಹಾರ ಮಾಡಬೇಕಾಗಿರುತ್ತದೆ ಎಂದು ಹೇಳಿದನು. ಪ್ರಕರಣ ಮುಕ್ತಾಯ ಮಾಡಲು ನಮ್ಮ ಲೋಕಾಯುಕ್ತ ಇನ್ಸ್ಪೆಕ್ಟರ್​​ ಅವರನ್ನು ಭೇಟಿ ಮಾಡಿ ಎಂದಿದ್ದನು.

ಈ ಬಗ್ಗೆ ಅನುಮಾನಗೊಂಡ ರಾಮದಾಸಪ್ಪ ಅವರು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರು ಹಿನ್ನೆಲೆಯಲ್ಲಿ ತನಿಖೆಗೆ ಇಳಿದ ಪೊಲೀಸರು ಆರೋಪಿ ತ್ಯಾಗರಾಜ್​ನನ್ನು ಬಂಧಿಸಿದರು. ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Shivaprasad B
Shivaprasad B
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು