AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳ್ಳಿ ಯುವತಿಯರೇ ಈತನ ಟಾರ್ಗೆಟ್; FDA, SDA ಕೆಲಸ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ಬ್ಯಾಂಕಾಕ್​ನಲ್ಲಿ ಮೋಜುಮಸ್ತಿ

ಹಳ್ಳಿ ಭಾಗದಿಂದ ಕೆಲಸ ಬಯಸಿ ಬೆಂಗಳೂರಿಗೆ ಬರುತ್ತಿದ್ದ ಯುವತಿಯರನ್ನೇ ಟಾರ್ಗೆಟ್ ಮಾಡಿಕೊಂಡು ಎಫ್​ಡಿಎ, ಎಸ್​ಡಿಎನಲ್ಲಿ ಕೆಲಸ ಕೊಡಿಸುವ ಭರವಸೆ ನೀಡಿ ಲಕ್ಷಾಂತರ ರೂಪಾಯಿ ಪಡೆದು ವಂಚನೆ ಎಸಗಿದ ಆರೋಪಿಯನ್ನು ಬೆಂಗಳೂರಿನ ವಿಧಾನಸೌಧ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಹಳ್ಳಿ ಯುವತಿಯರೇ ಈತನ ಟಾರ್ಗೆಟ್; FDA, SDA ಕೆಲಸ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ಬ್ಯಾಂಕಾಕ್​ನಲ್ಲಿ ಮೋಜುಮಸ್ತಿ
ಎಫ್​ಡಿಎ, ಎಸ್​​ಡಿಎನಲ್ಲಿ ಕೆಲಸ ಕೊಡಿಸುವುದಾಗಿ ಹಣ ಪಡೆದ ವಂಚಿಸುತ್ತಿದ್ದ ಬಂಧಿತ ಆರೋಪಿ ಮೋಹನ್ ಕುಮಾರ್
Jagadisha B
| Updated By: Rakesh Nayak Manchi|

Updated on:Nov 16, 2023 | 2:58 PM

Share

ಬೆಂಗಳೂರು, ನ.16: ಹಳ್ಳಿ ಭಾಗದಿಂದ ಕೆಲಸ ಬಯಸಿ ಬೆಂಗಳೂರಿಗೆ (Bengaluru) ಬರುತ್ತಿದ್ದ ಯುವತಿಯರನ್ನೇ ಟಾರ್ಗೆಟ್ ಮಾಡಿಕೊಂಡು ಉದ್ಯೋಗ ಕೊಡಿಸುವ ಭವರಸೆ ನೀಡಿ ಲಕ್ಷಾಂತರ ರೂಪಾಯಿ ಪಡೆದ ಬ್ಯಾಂಕಾಕ್​ನಲ್ಲಿ ಮೋಜುಮಸ್ತಿ ಮಾಡುತ್ತಿದ್ದ ಆರೋಪಿಯನ್ನು ನಗರದ ವಿಧಾನಸೌಧ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೋಹನ್ ಕುಮಾರ್ (53) ಬಂಧಿತ ಆರೋಪಿ.

ಇನ್ನೇನು ಓದು ಮುಗಿತು, ಸರ್ಕಾರಿ ಉದ್ಯೋಗಕ್ಕೆ ಯತ್ನಿಸಬೇಕು, ಅಲ್ಲಿವೆರೆಗೆ ಏನಾದರೂ ಉದ್ಯೋಗ ಮಾಡಬೇಕು ಎಂದು ಯೋಚಿಸಿ ಬೆಂಗಳೂರಿಗೆ ಬರುವ ಹಳ್ಳಿ ಭಾಗದ ಯುವತಿಯರನ್ನೇ ಟಾರ್ಗೆಟ್ ಮಾಡುತ್ತಿದ್ದ ಮೋಹನ್ ಕುಮಾರ್, ಬಣ್ಣ ಬಣ್ಣದ ಮಾತುಗಳನ್ನಾಡಿ ಬಳಿಕ ಎಫ್​ಡಿಎ, ಎಸ್​​ಡಿಎನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸುತ್ತಾನೆ.

ಮೋಹನ್​ನ ಬಣ್ಣ ಬಣ್ಣದ ಮಾತುಗಳಿಂದ ಬಲೆಗೆ ಬಿದ್ದ ಯುವತಿಯರಿಂದ ಲಕ್ಷಾಂತರ ರೂಪಾಯಿ ಪಡೆದು ಬಳಿಕ ಸಂಪರ್ಕಕ್ಕೆ ಸಿಗದೆ ಪರಾರಿಯಾಗುತ್ತಾನೆ. ಇದೇ ದುಡ್ಡಲ್ಲಿ ಬ್ಯಾಂಕಾಕ್​ಗೆ ಹೋಗಿ ಮೋಜುಮಸ್ತಿ ಮಾಡುತ್ತಿದ್ದನು. ಹೀಗೆ ಬ್ಯಾಂಕಾಕ್​ನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೋಹನ್​ ಕೈಗಳಿಗೆ ವಿಧಾನಸೌಧ ಪೊಲೀಸರು ಕೋಳ ಹಾಕಿದ್ದಾರೆ.

ಇದನ್ನೂ ಓದಿ: ವೈದ್ಯಕೀಯ ಸೀಟು ಕೊಡಿಸುವುದಾಗಿ ಭರವಸೆ: ಗೃಹ ಸಚಿವರ ಆಪ್ತನೆಂದು ಹೇಳಿ ಲಕ್ಷಾಂತರ ರೂ ವಂಚನೆ

ಎಸ್​ಡಿಎ ಕೆಲಸ ಕೊಡಿಸುವುದಾಗಿ ಗಿರಿಜಾ ಎಂಬ ಯುವತಿಯಿಂದ ಏಳು ಲಕ್ಷಕ್ಕೂ ಹೆಚ್ಚು ಹಣ ಪಡೆದು ವಂಚನೆ ಎಸಗಿದ್ದ. ವಿಧಾನಸೌಧದಲ್ಲಿ ಅಧಿಕಾರಿಗಳ ಪರಿಚಯವಿದ್ದು, ನೇರ ನೇಮಕಾತಿ ಮಾಡಿಸುವುದಾಗಿ ಹೇಳಿ ಹಣ ಪಡೆದು ಬಳಿಕ ಮೊಬೈಲ್ ಸ್ವಿಚ್ ಆಪ್ ಮಾಡಿಕೊಂಡು ತಲೆಮರೆಸಿಕೊಂಡಿದ್ದನು. ಈ ಬಗ್ಗೆ ಯುವತಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು.

ಅಗ್ನಿಶಾಮಕದಳ ಸಿಬ್ಬಂದಿಯಿಂದ ಚಂದಾ ವಸೂಲಿ

ಬಳ್ಳಾರಿ: ದೀಪಾವಳಿ ಹಬ್ಬ, ದಸರಾ ಹಬ್ಬದ ನಿಮಿತ್ತ ಪ್ರತಿ ಅಂಗಡಿಗಳಲ್ಲಿ ಚಂದಾ ವಸೂಲಿ ಮಾಡಿದ ಆರೋಪ ಕುರುಗೋಡು ಅಗ್ನಿಶಾಮಕದಳ ಸಿಬ್ಬಂದಿ ವಿರುದ್ಧ ಕೇಳಿಬಂದಿದೆ. ಪೈರ್‌ಮ್ಯಾನ್‌ ಎಂ. ಪ್ರಭಾಕರ್ ಸ್ವಾಮಿ ವಿರುದ್ಧ ಚಂದಾ ವಸೂಲಿ ಆರೋಪ ಕೇಳಿಬಂದಿದೆ.

ಹಬ್ಬದ ಪೂಜೆಗಾಗಿ ಪ್ರತಿ ಅಂಗಡಿಯಿಂದ 500 ರೂ., 1000 ರೂ. ಚಂದಾ ವಸೂಲಿ ಮಾಡಿದ್ದಾಗಿ ಆರೋಪಿಸಲಾಗಿದೆ. ಶಾಪ್‌ಗಳು, ಪೆಟ್ರೋಲ್ ಬಂಕ್, ರಸಗೊಬ್ಬರದಂಗಡಿ, ಮದ್ಯದಂಗಡಿ ಸೇರಿದಂತೆ ವಿವಿಧ ಕಡೆ ವಸೂಲಿ ಮಾಡಿದ ಆರೋಪ ಕೇಳಿಬಂದಿದೆ. ಚಂದಾ ವಸೂಲಿಗೆ ಅಂಗಡಿಗೆ ತೆರಳುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ.

ಇಲಾಖೆ ಹೆಸರು ಹೇಳಿಕೊಂಡು ಚಂದಾ ವಸೂಲಿ ಮಾಡಲಾಗುತ್ತಿದೆ ಅಂತಾ ಪ್ರಭಾಕರ್ ಸ್ವಾಮಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಗ್ನಿಶಾಮಕ ಚಾಲಕ ಶಾಂತಪ್ಪ ಅವರು ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಅಲ್ಲದೆ, ಅಂಗಡಿ ಮಾಲೀಕರು ಕೂಡ ಪ್ರಭಾಕರ್ ಭಾವಚಿತ್ರ ಸಮೇತ ಪತ್ರದ ಮೂಲಕ ದೂರು ನೀಡಿದ್ದಾರೆ.

ಪ್ರತಿ ವರ್ಷವೂ ಪೂಜೆ ಹೆಸರಲ್ಲಿ ಚಂದಾ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ದೂರು ನೀಡಿದರೂ ಹಿರಿಯ ಅಧಿಕಾರಿಗಳು ಮೌನವಹಿಸಿದ್ದಾರೆ ಎಂದು ದೂರಲಾಗಿದೆ. ಈ ಬಗ್ಗೆ ಹಿರಿಯ ಅಧಿಕಾರಿಗಳನ್ನು ಕೇಳಿದರೆ, ಘಟನೆ ಬಗ್ಗೆ ಮಾಹಿತಿ ಇಲ್ಲ ಎನ್ನುತ್ತಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:55 pm, Thu, 16 November 23

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು