AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳ್ಳಿ ಯುವತಿಯರೇ ಈತನ ಟಾರ್ಗೆಟ್; FDA, SDA ಕೆಲಸ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ಬ್ಯಾಂಕಾಕ್​ನಲ್ಲಿ ಮೋಜುಮಸ್ತಿ

ಹಳ್ಳಿ ಭಾಗದಿಂದ ಕೆಲಸ ಬಯಸಿ ಬೆಂಗಳೂರಿಗೆ ಬರುತ್ತಿದ್ದ ಯುವತಿಯರನ್ನೇ ಟಾರ್ಗೆಟ್ ಮಾಡಿಕೊಂಡು ಎಫ್​ಡಿಎ, ಎಸ್​ಡಿಎನಲ್ಲಿ ಕೆಲಸ ಕೊಡಿಸುವ ಭರವಸೆ ನೀಡಿ ಲಕ್ಷಾಂತರ ರೂಪಾಯಿ ಪಡೆದು ವಂಚನೆ ಎಸಗಿದ ಆರೋಪಿಯನ್ನು ಬೆಂಗಳೂರಿನ ವಿಧಾನಸೌಧ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಹಳ್ಳಿ ಯುವತಿಯರೇ ಈತನ ಟಾರ್ಗೆಟ್; FDA, SDA ಕೆಲಸ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ಬ್ಯಾಂಕಾಕ್​ನಲ್ಲಿ ಮೋಜುಮಸ್ತಿ
ಎಫ್​ಡಿಎ, ಎಸ್​​ಡಿಎನಲ್ಲಿ ಕೆಲಸ ಕೊಡಿಸುವುದಾಗಿ ಹಣ ಪಡೆದ ವಂಚಿಸುತ್ತಿದ್ದ ಬಂಧಿತ ಆರೋಪಿ ಮೋಹನ್ ಕುಮಾರ್
Follow us
Jagadisha B
| Updated By: Rakesh Nayak Manchi

Updated on:Nov 16, 2023 | 2:58 PM

ಬೆಂಗಳೂರು, ನ.16: ಹಳ್ಳಿ ಭಾಗದಿಂದ ಕೆಲಸ ಬಯಸಿ ಬೆಂಗಳೂರಿಗೆ (Bengaluru) ಬರುತ್ತಿದ್ದ ಯುವತಿಯರನ್ನೇ ಟಾರ್ಗೆಟ್ ಮಾಡಿಕೊಂಡು ಉದ್ಯೋಗ ಕೊಡಿಸುವ ಭವರಸೆ ನೀಡಿ ಲಕ್ಷಾಂತರ ರೂಪಾಯಿ ಪಡೆದ ಬ್ಯಾಂಕಾಕ್​ನಲ್ಲಿ ಮೋಜುಮಸ್ತಿ ಮಾಡುತ್ತಿದ್ದ ಆರೋಪಿಯನ್ನು ನಗರದ ವಿಧಾನಸೌಧ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೋಹನ್ ಕುಮಾರ್ (53) ಬಂಧಿತ ಆರೋಪಿ.

ಇನ್ನೇನು ಓದು ಮುಗಿತು, ಸರ್ಕಾರಿ ಉದ್ಯೋಗಕ್ಕೆ ಯತ್ನಿಸಬೇಕು, ಅಲ್ಲಿವೆರೆಗೆ ಏನಾದರೂ ಉದ್ಯೋಗ ಮಾಡಬೇಕು ಎಂದು ಯೋಚಿಸಿ ಬೆಂಗಳೂರಿಗೆ ಬರುವ ಹಳ್ಳಿ ಭಾಗದ ಯುವತಿಯರನ್ನೇ ಟಾರ್ಗೆಟ್ ಮಾಡುತ್ತಿದ್ದ ಮೋಹನ್ ಕುಮಾರ್, ಬಣ್ಣ ಬಣ್ಣದ ಮಾತುಗಳನ್ನಾಡಿ ಬಳಿಕ ಎಫ್​ಡಿಎ, ಎಸ್​​ಡಿಎನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸುತ್ತಾನೆ.

ಮೋಹನ್​ನ ಬಣ್ಣ ಬಣ್ಣದ ಮಾತುಗಳಿಂದ ಬಲೆಗೆ ಬಿದ್ದ ಯುವತಿಯರಿಂದ ಲಕ್ಷಾಂತರ ರೂಪಾಯಿ ಪಡೆದು ಬಳಿಕ ಸಂಪರ್ಕಕ್ಕೆ ಸಿಗದೆ ಪರಾರಿಯಾಗುತ್ತಾನೆ. ಇದೇ ದುಡ್ಡಲ್ಲಿ ಬ್ಯಾಂಕಾಕ್​ಗೆ ಹೋಗಿ ಮೋಜುಮಸ್ತಿ ಮಾಡುತ್ತಿದ್ದನು. ಹೀಗೆ ಬ್ಯಾಂಕಾಕ್​ನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೋಹನ್​ ಕೈಗಳಿಗೆ ವಿಧಾನಸೌಧ ಪೊಲೀಸರು ಕೋಳ ಹಾಕಿದ್ದಾರೆ.

ಇದನ್ನೂ ಓದಿ: ವೈದ್ಯಕೀಯ ಸೀಟು ಕೊಡಿಸುವುದಾಗಿ ಭರವಸೆ: ಗೃಹ ಸಚಿವರ ಆಪ್ತನೆಂದು ಹೇಳಿ ಲಕ್ಷಾಂತರ ರೂ ವಂಚನೆ

ಎಸ್​ಡಿಎ ಕೆಲಸ ಕೊಡಿಸುವುದಾಗಿ ಗಿರಿಜಾ ಎಂಬ ಯುವತಿಯಿಂದ ಏಳು ಲಕ್ಷಕ್ಕೂ ಹೆಚ್ಚು ಹಣ ಪಡೆದು ವಂಚನೆ ಎಸಗಿದ್ದ. ವಿಧಾನಸೌಧದಲ್ಲಿ ಅಧಿಕಾರಿಗಳ ಪರಿಚಯವಿದ್ದು, ನೇರ ನೇಮಕಾತಿ ಮಾಡಿಸುವುದಾಗಿ ಹೇಳಿ ಹಣ ಪಡೆದು ಬಳಿಕ ಮೊಬೈಲ್ ಸ್ವಿಚ್ ಆಪ್ ಮಾಡಿಕೊಂಡು ತಲೆಮರೆಸಿಕೊಂಡಿದ್ದನು. ಈ ಬಗ್ಗೆ ಯುವತಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು.

ಅಗ್ನಿಶಾಮಕದಳ ಸಿಬ್ಬಂದಿಯಿಂದ ಚಂದಾ ವಸೂಲಿ

ಬಳ್ಳಾರಿ: ದೀಪಾವಳಿ ಹಬ್ಬ, ದಸರಾ ಹಬ್ಬದ ನಿಮಿತ್ತ ಪ್ರತಿ ಅಂಗಡಿಗಳಲ್ಲಿ ಚಂದಾ ವಸೂಲಿ ಮಾಡಿದ ಆರೋಪ ಕುರುಗೋಡು ಅಗ್ನಿಶಾಮಕದಳ ಸಿಬ್ಬಂದಿ ವಿರುದ್ಧ ಕೇಳಿಬಂದಿದೆ. ಪೈರ್‌ಮ್ಯಾನ್‌ ಎಂ. ಪ್ರಭಾಕರ್ ಸ್ವಾಮಿ ವಿರುದ್ಧ ಚಂದಾ ವಸೂಲಿ ಆರೋಪ ಕೇಳಿಬಂದಿದೆ.

ಹಬ್ಬದ ಪೂಜೆಗಾಗಿ ಪ್ರತಿ ಅಂಗಡಿಯಿಂದ 500 ರೂ., 1000 ರೂ. ಚಂದಾ ವಸೂಲಿ ಮಾಡಿದ್ದಾಗಿ ಆರೋಪಿಸಲಾಗಿದೆ. ಶಾಪ್‌ಗಳು, ಪೆಟ್ರೋಲ್ ಬಂಕ್, ರಸಗೊಬ್ಬರದಂಗಡಿ, ಮದ್ಯದಂಗಡಿ ಸೇರಿದಂತೆ ವಿವಿಧ ಕಡೆ ವಸೂಲಿ ಮಾಡಿದ ಆರೋಪ ಕೇಳಿಬಂದಿದೆ. ಚಂದಾ ವಸೂಲಿಗೆ ಅಂಗಡಿಗೆ ತೆರಳುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ.

ಇಲಾಖೆ ಹೆಸರು ಹೇಳಿಕೊಂಡು ಚಂದಾ ವಸೂಲಿ ಮಾಡಲಾಗುತ್ತಿದೆ ಅಂತಾ ಪ್ರಭಾಕರ್ ಸ್ವಾಮಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಗ್ನಿಶಾಮಕ ಚಾಲಕ ಶಾಂತಪ್ಪ ಅವರು ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಅಲ್ಲದೆ, ಅಂಗಡಿ ಮಾಲೀಕರು ಕೂಡ ಪ್ರಭಾಕರ್ ಭಾವಚಿತ್ರ ಸಮೇತ ಪತ್ರದ ಮೂಲಕ ದೂರು ನೀಡಿದ್ದಾರೆ.

ಪ್ರತಿ ವರ್ಷವೂ ಪೂಜೆ ಹೆಸರಲ್ಲಿ ಚಂದಾ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ದೂರು ನೀಡಿದರೂ ಹಿರಿಯ ಅಧಿಕಾರಿಗಳು ಮೌನವಹಿಸಿದ್ದಾರೆ ಎಂದು ದೂರಲಾಗಿದೆ. ಈ ಬಗ್ಗೆ ಹಿರಿಯ ಅಧಿಕಾರಿಗಳನ್ನು ಕೇಳಿದರೆ, ಘಟನೆ ಬಗ್ಗೆ ಮಾಹಿತಿ ಇಲ್ಲ ಎನ್ನುತ್ತಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:55 pm, Thu, 16 November 23

ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ
Video: ಅಹಮದಾಬಾದ್ ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ
Video: ಅಹಮದಾಬಾದ್ ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ