AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳ್ಳಿ ಯುವತಿಯರೇ ಈತನ ಟಾರ್ಗೆಟ್; FDA, SDA ಕೆಲಸ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ಬ್ಯಾಂಕಾಕ್​ನಲ್ಲಿ ಮೋಜುಮಸ್ತಿ

ಹಳ್ಳಿ ಭಾಗದಿಂದ ಕೆಲಸ ಬಯಸಿ ಬೆಂಗಳೂರಿಗೆ ಬರುತ್ತಿದ್ದ ಯುವತಿಯರನ್ನೇ ಟಾರ್ಗೆಟ್ ಮಾಡಿಕೊಂಡು ಎಫ್​ಡಿಎ, ಎಸ್​ಡಿಎನಲ್ಲಿ ಕೆಲಸ ಕೊಡಿಸುವ ಭರವಸೆ ನೀಡಿ ಲಕ್ಷಾಂತರ ರೂಪಾಯಿ ಪಡೆದು ವಂಚನೆ ಎಸಗಿದ ಆರೋಪಿಯನ್ನು ಬೆಂಗಳೂರಿನ ವಿಧಾನಸೌಧ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಹಳ್ಳಿ ಯುವತಿಯರೇ ಈತನ ಟಾರ್ಗೆಟ್; FDA, SDA ಕೆಲಸ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ಬ್ಯಾಂಕಾಕ್​ನಲ್ಲಿ ಮೋಜುಮಸ್ತಿ
ಎಫ್​ಡಿಎ, ಎಸ್​​ಡಿಎನಲ್ಲಿ ಕೆಲಸ ಕೊಡಿಸುವುದಾಗಿ ಹಣ ಪಡೆದ ವಂಚಿಸುತ್ತಿದ್ದ ಬಂಧಿತ ಆರೋಪಿ ಮೋಹನ್ ಕುಮಾರ್
ಜಗದೀಶ ಬಿ.
| Edited By: Rakesh Nayak Manchi|

Updated on:Nov 16, 2023 | 2:58 PM

Share

ಬೆಂಗಳೂರು, ನ.16: ಹಳ್ಳಿ ಭಾಗದಿಂದ ಕೆಲಸ ಬಯಸಿ ಬೆಂಗಳೂರಿಗೆ (Bengaluru) ಬರುತ್ತಿದ್ದ ಯುವತಿಯರನ್ನೇ ಟಾರ್ಗೆಟ್ ಮಾಡಿಕೊಂಡು ಉದ್ಯೋಗ ಕೊಡಿಸುವ ಭವರಸೆ ನೀಡಿ ಲಕ್ಷಾಂತರ ರೂಪಾಯಿ ಪಡೆದ ಬ್ಯಾಂಕಾಕ್​ನಲ್ಲಿ ಮೋಜುಮಸ್ತಿ ಮಾಡುತ್ತಿದ್ದ ಆರೋಪಿಯನ್ನು ನಗರದ ವಿಧಾನಸೌಧ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೋಹನ್ ಕುಮಾರ್ (53) ಬಂಧಿತ ಆರೋಪಿ.

ಇನ್ನೇನು ಓದು ಮುಗಿತು, ಸರ್ಕಾರಿ ಉದ್ಯೋಗಕ್ಕೆ ಯತ್ನಿಸಬೇಕು, ಅಲ್ಲಿವೆರೆಗೆ ಏನಾದರೂ ಉದ್ಯೋಗ ಮಾಡಬೇಕು ಎಂದು ಯೋಚಿಸಿ ಬೆಂಗಳೂರಿಗೆ ಬರುವ ಹಳ್ಳಿ ಭಾಗದ ಯುವತಿಯರನ್ನೇ ಟಾರ್ಗೆಟ್ ಮಾಡುತ್ತಿದ್ದ ಮೋಹನ್ ಕುಮಾರ್, ಬಣ್ಣ ಬಣ್ಣದ ಮಾತುಗಳನ್ನಾಡಿ ಬಳಿಕ ಎಫ್​ಡಿಎ, ಎಸ್​​ಡಿಎನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸುತ್ತಾನೆ.

ಮೋಹನ್​ನ ಬಣ್ಣ ಬಣ್ಣದ ಮಾತುಗಳಿಂದ ಬಲೆಗೆ ಬಿದ್ದ ಯುವತಿಯರಿಂದ ಲಕ್ಷಾಂತರ ರೂಪಾಯಿ ಪಡೆದು ಬಳಿಕ ಸಂಪರ್ಕಕ್ಕೆ ಸಿಗದೆ ಪರಾರಿಯಾಗುತ್ತಾನೆ. ಇದೇ ದುಡ್ಡಲ್ಲಿ ಬ್ಯಾಂಕಾಕ್​ಗೆ ಹೋಗಿ ಮೋಜುಮಸ್ತಿ ಮಾಡುತ್ತಿದ್ದನು. ಹೀಗೆ ಬ್ಯಾಂಕಾಕ್​ನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೋಹನ್​ ಕೈಗಳಿಗೆ ವಿಧಾನಸೌಧ ಪೊಲೀಸರು ಕೋಳ ಹಾಕಿದ್ದಾರೆ.

ಇದನ್ನೂ ಓದಿ: ವೈದ್ಯಕೀಯ ಸೀಟು ಕೊಡಿಸುವುದಾಗಿ ಭರವಸೆ: ಗೃಹ ಸಚಿವರ ಆಪ್ತನೆಂದು ಹೇಳಿ ಲಕ್ಷಾಂತರ ರೂ ವಂಚನೆ

ಎಸ್​ಡಿಎ ಕೆಲಸ ಕೊಡಿಸುವುದಾಗಿ ಗಿರಿಜಾ ಎಂಬ ಯುವತಿಯಿಂದ ಏಳು ಲಕ್ಷಕ್ಕೂ ಹೆಚ್ಚು ಹಣ ಪಡೆದು ವಂಚನೆ ಎಸಗಿದ್ದ. ವಿಧಾನಸೌಧದಲ್ಲಿ ಅಧಿಕಾರಿಗಳ ಪರಿಚಯವಿದ್ದು, ನೇರ ನೇಮಕಾತಿ ಮಾಡಿಸುವುದಾಗಿ ಹೇಳಿ ಹಣ ಪಡೆದು ಬಳಿಕ ಮೊಬೈಲ್ ಸ್ವಿಚ್ ಆಪ್ ಮಾಡಿಕೊಂಡು ತಲೆಮರೆಸಿಕೊಂಡಿದ್ದನು. ಈ ಬಗ್ಗೆ ಯುವತಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು.

ಅಗ್ನಿಶಾಮಕದಳ ಸಿಬ್ಬಂದಿಯಿಂದ ಚಂದಾ ವಸೂಲಿ

ಬಳ್ಳಾರಿ: ದೀಪಾವಳಿ ಹಬ್ಬ, ದಸರಾ ಹಬ್ಬದ ನಿಮಿತ್ತ ಪ್ರತಿ ಅಂಗಡಿಗಳಲ್ಲಿ ಚಂದಾ ವಸೂಲಿ ಮಾಡಿದ ಆರೋಪ ಕುರುಗೋಡು ಅಗ್ನಿಶಾಮಕದಳ ಸಿಬ್ಬಂದಿ ವಿರುದ್ಧ ಕೇಳಿಬಂದಿದೆ. ಪೈರ್‌ಮ್ಯಾನ್‌ ಎಂ. ಪ್ರಭಾಕರ್ ಸ್ವಾಮಿ ವಿರುದ್ಧ ಚಂದಾ ವಸೂಲಿ ಆರೋಪ ಕೇಳಿಬಂದಿದೆ.

ಹಬ್ಬದ ಪೂಜೆಗಾಗಿ ಪ್ರತಿ ಅಂಗಡಿಯಿಂದ 500 ರೂ., 1000 ರೂ. ಚಂದಾ ವಸೂಲಿ ಮಾಡಿದ್ದಾಗಿ ಆರೋಪಿಸಲಾಗಿದೆ. ಶಾಪ್‌ಗಳು, ಪೆಟ್ರೋಲ್ ಬಂಕ್, ರಸಗೊಬ್ಬರದಂಗಡಿ, ಮದ್ಯದಂಗಡಿ ಸೇರಿದಂತೆ ವಿವಿಧ ಕಡೆ ವಸೂಲಿ ಮಾಡಿದ ಆರೋಪ ಕೇಳಿಬಂದಿದೆ. ಚಂದಾ ವಸೂಲಿಗೆ ಅಂಗಡಿಗೆ ತೆರಳುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ.

ಇಲಾಖೆ ಹೆಸರು ಹೇಳಿಕೊಂಡು ಚಂದಾ ವಸೂಲಿ ಮಾಡಲಾಗುತ್ತಿದೆ ಅಂತಾ ಪ್ರಭಾಕರ್ ಸ್ವಾಮಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಗ್ನಿಶಾಮಕ ಚಾಲಕ ಶಾಂತಪ್ಪ ಅವರು ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಅಲ್ಲದೆ, ಅಂಗಡಿ ಮಾಲೀಕರು ಕೂಡ ಪ್ರಭಾಕರ್ ಭಾವಚಿತ್ರ ಸಮೇತ ಪತ್ರದ ಮೂಲಕ ದೂರು ನೀಡಿದ್ದಾರೆ.

ಪ್ರತಿ ವರ್ಷವೂ ಪೂಜೆ ಹೆಸರಲ್ಲಿ ಚಂದಾ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ದೂರು ನೀಡಿದರೂ ಹಿರಿಯ ಅಧಿಕಾರಿಗಳು ಮೌನವಹಿಸಿದ್ದಾರೆ ಎಂದು ದೂರಲಾಗಿದೆ. ಈ ಬಗ್ಗೆ ಹಿರಿಯ ಅಧಿಕಾರಿಗಳನ್ನು ಕೇಳಿದರೆ, ಘಟನೆ ಬಗ್ಗೆ ಮಾಹಿತಿ ಇಲ್ಲ ಎನ್ನುತ್ತಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:55 pm, Thu, 16 November 23

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ