AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳ್ಳಿ ಯುವತಿಯರೇ ಈತನ ಟಾರ್ಗೆಟ್; FDA, SDA ಕೆಲಸ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ಬ್ಯಾಂಕಾಕ್​ನಲ್ಲಿ ಮೋಜುಮಸ್ತಿ

ಹಳ್ಳಿ ಭಾಗದಿಂದ ಕೆಲಸ ಬಯಸಿ ಬೆಂಗಳೂರಿಗೆ ಬರುತ್ತಿದ್ದ ಯುವತಿಯರನ್ನೇ ಟಾರ್ಗೆಟ್ ಮಾಡಿಕೊಂಡು ಎಫ್​ಡಿಎ, ಎಸ್​ಡಿಎನಲ್ಲಿ ಕೆಲಸ ಕೊಡಿಸುವ ಭರವಸೆ ನೀಡಿ ಲಕ್ಷಾಂತರ ರೂಪಾಯಿ ಪಡೆದು ವಂಚನೆ ಎಸಗಿದ ಆರೋಪಿಯನ್ನು ಬೆಂಗಳೂರಿನ ವಿಧಾನಸೌಧ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಹಳ್ಳಿ ಯುವತಿಯರೇ ಈತನ ಟಾರ್ಗೆಟ್; FDA, SDA ಕೆಲಸ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ಬ್ಯಾಂಕಾಕ್​ನಲ್ಲಿ ಮೋಜುಮಸ್ತಿ
ಎಫ್​ಡಿಎ, ಎಸ್​​ಡಿಎನಲ್ಲಿ ಕೆಲಸ ಕೊಡಿಸುವುದಾಗಿ ಹಣ ಪಡೆದ ವಂಚಿಸುತ್ತಿದ್ದ ಬಂಧಿತ ಆರೋಪಿ ಮೋಹನ್ ಕುಮಾರ್
Jagadisha B
| Edited By: Rakesh Nayak Manchi|

Updated on:Nov 16, 2023 | 2:58 PM

Share

ಬೆಂಗಳೂರು, ನ.16: ಹಳ್ಳಿ ಭಾಗದಿಂದ ಕೆಲಸ ಬಯಸಿ ಬೆಂಗಳೂರಿಗೆ (Bengaluru) ಬರುತ್ತಿದ್ದ ಯುವತಿಯರನ್ನೇ ಟಾರ್ಗೆಟ್ ಮಾಡಿಕೊಂಡು ಉದ್ಯೋಗ ಕೊಡಿಸುವ ಭವರಸೆ ನೀಡಿ ಲಕ್ಷಾಂತರ ರೂಪಾಯಿ ಪಡೆದ ಬ್ಯಾಂಕಾಕ್​ನಲ್ಲಿ ಮೋಜುಮಸ್ತಿ ಮಾಡುತ್ತಿದ್ದ ಆರೋಪಿಯನ್ನು ನಗರದ ವಿಧಾನಸೌಧ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೋಹನ್ ಕುಮಾರ್ (53) ಬಂಧಿತ ಆರೋಪಿ.

ಇನ್ನೇನು ಓದು ಮುಗಿತು, ಸರ್ಕಾರಿ ಉದ್ಯೋಗಕ್ಕೆ ಯತ್ನಿಸಬೇಕು, ಅಲ್ಲಿವೆರೆಗೆ ಏನಾದರೂ ಉದ್ಯೋಗ ಮಾಡಬೇಕು ಎಂದು ಯೋಚಿಸಿ ಬೆಂಗಳೂರಿಗೆ ಬರುವ ಹಳ್ಳಿ ಭಾಗದ ಯುವತಿಯರನ್ನೇ ಟಾರ್ಗೆಟ್ ಮಾಡುತ್ತಿದ್ದ ಮೋಹನ್ ಕುಮಾರ್, ಬಣ್ಣ ಬಣ್ಣದ ಮಾತುಗಳನ್ನಾಡಿ ಬಳಿಕ ಎಫ್​ಡಿಎ, ಎಸ್​​ಡಿಎನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸುತ್ತಾನೆ.

ಮೋಹನ್​ನ ಬಣ್ಣ ಬಣ್ಣದ ಮಾತುಗಳಿಂದ ಬಲೆಗೆ ಬಿದ್ದ ಯುವತಿಯರಿಂದ ಲಕ್ಷಾಂತರ ರೂಪಾಯಿ ಪಡೆದು ಬಳಿಕ ಸಂಪರ್ಕಕ್ಕೆ ಸಿಗದೆ ಪರಾರಿಯಾಗುತ್ತಾನೆ. ಇದೇ ದುಡ್ಡಲ್ಲಿ ಬ್ಯಾಂಕಾಕ್​ಗೆ ಹೋಗಿ ಮೋಜುಮಸ್ತಿ ಮಾಡುತ್ತಿದ್ದನು. ಹೀಗೆ ಬ್ಯಾಂಕಾಕ್​ನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೋಹನ್​ ಕೈಗಳಿಗೆ ವಿಧಾನಸೌಧ ಪೊಲೀಸರು ಕೋಳ ಹಾಕಿದ್ದಾರೆ.

ಇದನ್ನೂ ಓದಿ: ವೈದ್ಯಕೀಯ ಸೀಟು ಕೊಡಿಸುವುದಾಗಿ ಭರವಸೆ: ಗೃಹ ಸಚಿವರ ಆಪ್ತನೆಂದು ಹೇಳಿ ಲಕ್ಷಾಂತರ ರೂ ವಂಚನೆ

ಎಸ್​ಡಿಎ ಕೆಲಸ ಕೊಡಿಸುವುದಾಗಿ ಗಿರಿಜಾ ಎಂಬ ಯುವತಿಯಿಂದ ಏಳು ಲಕ್ಷಕ್ಕೂ ಹೆಚ್ಚು ಹಣ ಪಡೆದು ವಂಚನೆ ಎಸಗಿದ್ದ. ವಿಧಾನಸೌಧದಲ್ಲಿ ಅಧಿಕಾರಿಗಳ ಪರಿಚಯವಿದ್ದು, ನೇರ ನೇಮಕಾತಿ ಮಾಡಿಸುವುದಾಗಿ ಹೇಳಿ ಹಣ ಪಡೆದು ಬಳಿಕ ಮೊಬೈಲ್ ಸ್ವಿಚ್ ಆಪ್ ಮಾಡಿಕೊಂಡು ತಲೆಮರೆಸಿಕೊಂಡಿದ್ದನು. ಈ ಬಗ್ಗೆ ಯುವತಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು.

ಅಗ್ನಿಶಾಮಕದಳ ಸಿಬ್ಬಂದಿಯಿಂದ ಚಂದಾ ವಸೂಲಿ

ಬಳ್ಳಾರಿ: ದೀಪಾವಳಿ ಹಬ್ಬ, ದಸರಾ ಹಬ್ಬದ ನಿಮಿತ್ತ ಪ್ರತಿ ಅಂಗಡಿಗಳಲ್ಲಿ ಚಂದಾ ವಸೂಲಿ ಮಾಡಿದ ಆರೋಪ ಕುರುಗೋಡು ಅಗ್ನಿಶಾಮಕದಳ ಸಿಬ್ಬಂದಿ ವಿರುದ್ಧ ಕೇಳಿಬಂದಿದೆ. ಪೈರ್‌ಮ್ಯಾನ್‌ ಎಂ. ಪ್ರಭಾಕರ್ ಸ್ವಾಮಿ ವಿರುದ್ಧ ಚಂದಾ ವಸೂಲಿ ಆರೋಪ ಕೇಳಿಬಂದಿದೆ.

ಹಬ್ಬದ ಪೂಜೆಗಾಗಿ ಪ್ರತಿ ಅಂಗಡಿಯಿಂದ 500 ರೂ., 1000 ರೂ. ಚಂದಾ ವಸೂಲಿ ಮಾಡಿದ್ದಾಗಿ ಆರೋಪಿಸಲಾಗಿದೆ. ಶಾಪ್‌ಗಳು, ಪೆಟ್ರೋಲ್ ಬಂಕ್, ರಸಗೊಬ್ಬರದಂಗಡಿ, ಮದ್ಯದಂಗಡಿ ಸೇರಿದಂತೆ ವಿವಿಧ ಕಡೆ ವಸೂಲಿ ಮಾಡಿದ ಆರೋಪ ಕೇಳಿಬಂದಿದೆ. ಚಂದಾ ವಸೂಲಿಗೆ ಅಂಗಡಿಗೆ ತೆರಳುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ.

ಇಲಾಖೆ ಹೆಸರು ಹೇಳಿಕೊಂಡು ಚಂದಾ ವಸೂಲಿ ಮಾಡಲಾಗುತ್ತಿದೆ ಅಂತಾ ಪ್ರಭಾಕರ್ ಸ್ವಾಮಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಗ್ನಿಶಾಮಕ ಚಾಲಕ ಶಾಂತಪ್ಪ ಅವರು ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಅಲ್ಲದೆ, ಅಂಗಡಿ ಮಾಲೀಕರು ಕೂಡ ಪ್ರಭಾಕರ್ ಭಾವಚಿತ್ರ ಸಮೇತ ಪತ್ರದ ಮೂಲಕ ದೂರು ನೀಡಿದ್ದಾರೆ.

ಪ್ರತಿ ವರ್ಷವೂ ಪೂಜೆ ಹೆಸರಲ್ಲಿ ಚಂದಾ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ದೂರು ನೀಡಿದರೂ ಹಿರಿಯ ಅಧಿಕಾರಿಗಳು ಮೌನವಹಿಸಿದ್ದಾರೆ ಎಂದು ದೂರಲಾಗಿದೆ. ಈ ಬಗ್ಗೆ ಹಿರಿಯ ಅಧಿಕಾರಿಗಳನ್ನು ಕೇಳಿದರೆ, ಘಟನೆ ಬಗ್ಗೆ ಮಾಹಿತಿ ಇಲ್ಲ ಎನ್ನುತ್ತಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:55 pm, Thu, 16 November 23

Follow Us
Jagadisha B
Jagadisha B

ಜಗದೀಶ್​ ಬಸವರಾಜು ಟಿವಿ9 ಕನ್ನಡದ ವರದಿಗಾರರಲ್ಲಿ ಒಬ್ಬರು. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ.

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ