AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳ್ಳಿ ಯುವತಿಯರೇ ಈತನ ಟಾರ್ಗೆಟ್; FDA, SDA ಕೆಲಸ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ಬ್ಯಾಂಕಾಕ್​ನಲ್ಲಿ ಮೋಜುಮಸ್ತಿ

ಹಳ್ಳಿ ಭಾಗದಿಂದ ಕೆಲಸ ಬಯಸಿ ಬೆಂಗಳೂರಿಗೆ ಬರುತ್ತಿದ್ದ ಯುವತಿಯರನ್ನೇ ಟಾರ್ಗೆಟ್ ಮಾಡಿಕೊಂಡು ಎಫ್​ಡಿಎ, ಎಸ್​ಡಿಎನಲ್ಲಿ ಕೆಲಸ ಕೊಡಿಸುವ ಭರವಸೆ ನೀಡಿ ಲಕ್ಷಾಂತರ ರೂಪಾಯಿ ಪಡೆದು ವಂಚನೆ ಎಸಗಿದ ಆರೋಪಿಯನ್ನು ಬೆಂಗಳೂರಿನ ವಿಧಾನಸೌಧ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಹಳ್ಳಿ ಯುವತಿಯರೇ ಈತನ ಟಾರ್ಗೆಟ್; FDA, SDA ಕೆಲಸ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ಬ್ಯಾಂಕಾಕ್​ನಲ್ಲಿ ಮೋಜುಮಸ್ತಿ
ಎಫ್​ಡಿಎ, ಎಸ್​​ಡಿಎನಲ್ಲಿ ಕೆಲಸ ಕೊಡಿಸುವುದಾಗಿ ಹಣ ಪಡೆದ ವಂಚಿಸುತ್ತಿದ್ದ ಬಂಧಿತ ಆರೋಪಿ ಮೋಹನ್ ಕುಮಾರ್
Jagadisha B
| Edited By: |

Updated on:Nov 16, 2023 | 2:58 PM

Share

ಬೆಂಗಳೂರು, ನ.16: ಹಳ್ಳಿ ಭಾಗದಿಂದ ಕೆಲಸ ಬಯಸಿ ಬೆಂಗಳೂರಿಗೆ (Bengaluru) ಬರುತ್ತಿದ್ದ ಯುವತಿಯರನ್ನೇ ಟಾರ್ಗೆಟ್ ಮಾಡಿಕೊಂಡು ಉದ್ಯೋಗ ಕೊಡಿಸುವ ಭವರಸೆ ನೀಡಿ ಲಕ್ಷಾಂತರ ರೂಪಾಯಿ ಪಡೆದ ಬ್ಯಾಂಕಾಕ್​ನಲ್ಲಿ ಮೋಜುಮಸ್ತಿ ಮಾಡುತ್ತಿದ್ದ ಆರೋಪಿಯನ್ನು ನಗರದ ವಿಧಾನಸೌಧ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೋಹನ್ ಕುಮಾರ್ (53) ಬಂಧಿತ ಆರೋಪಿ.

ಇನ್ನೇನು ಓದು ಮುಗಿತು, ಸರ್ಕಾರಿ ಉದ್ಯೋಗಕ್ಕೆ ಯತ್ನಿಸಬೇಕು, ಅಲ್ಲಿವೆರೆಗೆ ಏನಾದರೂ ಉದ್ಯೋಗ ಮಾಡಬೇಕು ಎಂದು ಯೋಚಿಸಿ ಬೆಂಗಳೂರಿಗೆ ಬರುವ ಹಳ್ಳಿ ಭಾಗದ ಯುವತಿಯರನ್ನೇ ಟಾರ್ಗೆಟ್ ಮಾಡುತ್ತಿದ್ದ ಮೋಹನ್ ಕುಮಾರ್, ಬಣ್ಣ ಬಣ್ಣದ ಮಾತುಗಳನ್ನಾಡಿ ಬಳಿಕ ಎಫ್​ಡಿಎ, ಎಸ್​​ಡಿಎನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸುತ್ತಾನೆ.

ಮೋಹನ್​ನ ಬಣ್ಣ ಬಣ್ಣದ ಮಾತುಗಳಿಂದ ಬಲೆಗೆ ಬಿದ್ದ ಯುವತಿಯರಿಂದ ಲಕ್ಷಾಂತರ ರೂಪಾಯಿ ಪಡೆದು ಬಳಿಕ ಸಂಪರ್ಕಕ್ಕೆ ಸಿಗದೆ ಪರಾರಿಯಾಗುತ್ತಾನೆ. ಇದೇ ದುಡ್ಡಲ್ಲಿ ಬ್ಯಾಂಕಾಕ್​ಗೆ ಹೋಗಿ ಮೋಜುಮಸ್ತಿ ಮಾಡುತ್ತಿದ್ದನು. ಹೀಗೆ ಬ್ಯಾಂಕಾಕ್​ನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೋಹನ್​ ಕೈಗಳಿಗೆ ವಿಧಾನಸೌಧ ಪೊಲೀಸರು ಕೋಳ ಹಾಕಿದ್ದಾರೆ.

ಇದನ್ನೂ ಓದಿ: ವೈದ್ಯಕೀಯ ಸೀಟು ಕೊಡಿಸುವುದಾಗಿ ಭರವಸೆ: ಗೃಹ ಸಚಿವರ ಆಪ್ತನೆಂದು ಹೇಳಿ ಲಕ್ಷಾಂತರ ರೂ ವಂಚನೆ

ಎಸ್​ಡಿಎ ಕೆಲಸ ಕೊಡಿಸುವುದಾಗಿ ಗಿರಿಜಾ ಎಂಬ ಯುವತಿಯಿಂದ ಏಳು ಲಕ್ಷಕ್ಕೂ ಹೆಚ್ಚು ಹಣ ಪಡೆದು ವಂಚನೆ ಎಸಗಿದ್ದ. ವಿಧಾನಸೌಧದಲ್ಲಿ ಅಧಿಕಾರಿಗಳ ಪರಿಚಯವಿದ್ದು, ನೇರ ನೇಮಕಾತಿ ಮಾಡಿಸುವುದಾಗಿ ಹೇಳಿ ಹಣ ಪಡೆದು ಬಳಿಕ ಮೊಬೈಲ್ ಸ್ವಿಚ್ ಆಪ್ ಮಾಡಿಕೊಂಡು ತಲೆಮರೆಸಿಕೊಂಡಿದ್ದನು. ಈ ಬಗ್ಗೆ ಯುವತಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು.

ಅಗ್ನಿಶಾಮಕದಳ ಸಿಬ್ಬಂದಿಯಿಂದ ಚಂದಾ ವಸೂಲಿ

ಬಳ್ಳಾರಿ: ದೀಪಾವಳಿ ಹಬ್ಬ, ದಸರಾ ಹಬ್ಬದ ನಿಮಿತ್ತ ಪ್ರತಿ ಅಂಗಡಿಗಳಲ್ಲಿ ಚಂದಾ ವಸೂಲಿ ಮಾಡಿದ ಆರೋಪ ಕುರುಗೋಡು ಅಗ್ನಿಶಾಮಕದಳ ಸಿಬ್ಬಂದಿ ವಿರುದ್ಧ ಕೇಳಿಬಂದಿದೆ. ಪೈರ್‌ಮ್ಯಾನ್‌ ಎಂ. ಪ್ರಭಾಕರ್ ಸ್ವಾಮಿ ವಿರುದ್ಧ ಚಂದಾ ವಸೂಲಿ ಆರೋಪ ಕೇಳಿಬಂದಿದೆ.

ಹಬ್ಬದ ಪೂಜೆಗಾಗಿ ಪ್ರತಿ ಅಂಗಡಿಯಿಂದ 500 ರೂ., 1000 ರೂ. ಚಂದಾ ವಸೂಲಿ ಮಾಡಿದ್ದಾಗಿ ಆರೋಪಿಸಲಾಗಿದೆ. ಶಾಪ್‌ಗಳು, ಪೆಟ್ರೋಲ್ ಬಂಕ್, ರಸಗೊಬ್ಬರದಂಗಡಿ, ಮದ್ಯದಂಗಡಿ ಸೇರಿದಂತೆ ವಿವಿಧ ಕಡೆ ವಸೂಲಿ ಮಾಡಿದ ಆರೋಪ ಕೇಳಿಬಂದಿದೆ. ಚಂದಾ ವಸೂಲಿಗೆ ಅಂಗಡಿಗೆ ತೆರಳುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ.

ಇಲಾಖೆ ಹೆಸರು ಹೇಳಿಕೊಂಡು ಚಂದಾ ವಸೂಲಿ ಮಾಡಲಾಗುತ್ತಿದೆ ಅಂತಾ ಪ್ರಭಾಕರ್ ಸ್ವಾಮಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಗ್ನಿಶಾಮಕ ಚಾಲಕ ಶಾಂತಪ್ಪ ಅವರು ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಅಲ್ಲದೆ, ಅಂಗಡಿ ಮಾಲೀಕರು ಕೂಡ ಪ್ರಭಾಕರ್ ಭಾವಚಿತ್ರ ಸಮೇತ ಪತ್ರದ ಮೂಲಕ ದೂರು ನೀಡಿದ್ದಾರೆ.

ಪ್ರತಿ ವರ್ಷವೂ ಪೂಜೆ ಹೆಸರಲ್ಲಿ ಚಂದಾ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ದೂರು ನೀಡಿದರೂ ಹಿರಿಯ ಅಧಿಕಾರಿಗಳು ಮೌನವಹಿಸಿದ್ದಾರೆ ಎಂದು ದೂರಲಾಗಿದೆ. ಈ ಬಗ್ಗೆ ಹಿರಿಯ ಅಧಿಕಾರಿಗಳನ್ನು ಕೇಳಿದರೆ, ಘಟನೆ ಬಗ್ಗೆ ಮಾಹಿತಿ ಇಲ್ಲ ಎನ್ನುತ್ತಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:55 pm, Thu, 16 November 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!