AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ಪರ ಘೋಷಣೆ: ರಾಜ್ಯಸಭೆ ಕಾಂಗ್ರೆಸ್ ಸದಸ್ಯ ನಾಸೀರ್ ಹುಸೇನ್ ವಿರುದ್ಧ ಬಿಜೆಪಿ ದೂರು; ಬಂಧನಕ್ಕೆ ಒತ್ತಾಯ

ರಾಜ್ಯಸಭಾ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್ ಅವರ ಗೆಲುವಿಗೆ ವಿಧಾನಸೌದಲ್ಲಿ ಸಂಭ್ರಮಾಚರಣೆ ನಡೆಸುತ್ತಿದ್ದಾಗ ಕಾಂಗ್ರೆಸ್ ಕಾರ್ಯಕರ್ತರು ಪಾಕ್ ಪರ ಘೋಷಣೆ ಕೂಗಿದ ಆರೋಪ ಎಫ್ಎಸ್​ಎಲ್ ವರದಿಯಲ್ಲಿ ದೃಢಪಟ್ಟಿದ್ದು, ಮೂವರನ್ನು ಬಂಧಿಸಲಾಗಿದೆ. ಈ ನಡುವೆ, ತನಿಖೆ ಪೂರ್ಣಗೊಳ್ಳುವವರೆಗೆ ನಾಸೀರ್ ಹುಸೇನ್ ಪ್ರಮಾಣವಚನ ಸ್ವೀಕಾರ ಮಾಡಬಾರದು ಎಂದು ಬಿಜೆಪಿ ಒತ್ತಾಯಿಸಿದೆ. ಅಲ್ಲದೆ, ನಾಸೀರ್ ಹುಸೇನ್ ಬಂಧಿಸುವಂತೆ ದೂರು ನೀಡಿದೆ.

ಪಾಕ್ ಪರ ಘೋಷಣೆ: ರಾಜ್ಯಸಭೆ ಕಾಂಗ್ರೆಸ್ ಸದಸ್ಯ ನಾಸೀರ್ ಹುಸೇನ್ ವಿರುದ್ಧ ಬಿಜೆಪಿ ದೂರು; ಬಂಧನಕ್ಕೆ ಒತ್ತಾಯ
ರಾಜ್ಯಸಭೆ ಕಾಂಗ್ರೆಸ್ ಸದಸ್ಯ ನಾಸೀರ್ ಹುಸೇನ್ ವಿರುದ್ಧ ಬಿಜೆಪಿ ದೂರು; ಬಂಧನಕ್ಕೆ ಒತ್ತಾಯ
Follow us
ಕಿರಣ್​ ಹನಿಯಡ್ಕ
| Updated By: Rakesh Nayak Manchi

Updated on: Mar 05, 2024 | 2:41 PM

ಬೆಂಗಳೂರು, ಮಾ.5: ವಿಧಾನಸೌಧದಲ್ಲಿ ಕಾರ್ಯಕರ್ತರು ಪಾಕ್ ಪರ ಘೋಷಣೆ (Pro-Pak Slogan) ಕೂಗಿದ ಪ್ರಕರಣದ ಸಂಬಂಧ ರಾಜ್ಯಸಭಾ ಕಾಂಗ್ರೆಸ್ (Congress) ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್ (Dr Syed Nasir Hussain) ಅವರನ್ನು ಬಂಧಿಸುವಂತೆ ಒತ್ತಾಯಿಸಿ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದೆ. ರಾಜ್ಯ ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ಹಾಗೂ ರಾಜ್ಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್ ಮುನಿರಾಜು ಅವರು ದೂರು ನೀಡಿದ್ದಾರೆ.

ಇನ್ನೊಂದೆಡೆ, ಪ್ರಕರಣದ ತನಿಖೆ ಪೂರ್ಣಗೊಳ್ಳುವವರೆಗೆ ನಾಸೀರ್ ಹುಸೇನ್ ಪ್ರಮಾಣ ವಚನ ಸ್ವೀಕಾರ ಮಾಡಬಾರದು ಎಂದು ಒತ್ತಾಯಿಸುತ್ತಿರುವ ಬಿಜೆಪಿ, ಪ್ರಮಾಣವಚನ ಬೋಧಿಸದಂತೆ ಕೋರಿ ಉಪ ರಾಷ್ಟ್ರಪತಿಯವರಿಗೆ ಪತ್ರ ಬರೆಯಲು ಮುಂದಾಗಿದೆ. ಈ ಬಗ್ಗೆ ಬೆಳಗಾವಿ ನಗರದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಪಾಕಿಸ್ತಾನದ ಪರ ವಿಧಾನಸೌಧದಲ್ಲಿ ಘೋಷಣೆ ಕೂಗಿದ ಪ್ರಕರಣ ಪೂರ್ಣಗೊಳ್ಳದ ಹೊರತು ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿರುವ ನಾಸೀರ್ ಹುಸೇನ್ ಪ್ರಮಾಣ ವಚನ ಸ್ವೀಕರಿಸಬಾರದು ಎಂದು ಹೇಳಿದರು.

ಇದನ್ನೂ ಓದಿ: ಪಾಕ್ ಪರ ಘೋಷಣೆ ಮಾತ್ರವಲ್ಲ, ವಿಧಾನಸೌಧದಲ್ಲಿ ಆಗಿತ್ತು ಭದ್ರತಾ ಲೋಪ: ತನಿಖೆ ವೇಳೆ ಬಯಲಿಗೆ

ರಾಜ್ಯಸಭೆಗೆ ಆಯ್ಕೆಯಾಗುವ ಜನಪ್ರತಿನಿಧಿಯು ಸಂವಿಧಾನ ಮತ್ತು ದೇಶದ ಸಾರ್ವಭೌಮತೆಯ ಪ್ರಮಾಣ ವಚನ ಸ್ವೀಕರಿಸುತ್ತಾನೆ. ಆದರೆ ಹುಸ್ಸೇನ್ ಅವರ ಬೆಂಬಲಿಗರು ವಿಧಾನ ಸೌಧದಲ್ಲಿ ಪಾಕಿಸ್ತಾನ್ ಪರವಾಗಿ ಘೋಷಣೆ ಕೂಗಿದ್ದು ಸಾಬೀತಾಗಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷಕ್ಕೆ ದೇಶಾಭಿಮಾನವಿದ್ದರೆ ಮತ್ತು ಅವರಲ್ಲಿ ರಾಷ್ಟ್ರದ ಸಮಗ್ರತೆ ಬಗ್ಗೆ ನಿಜವಾದ ಕಾಳಜಿಯಿದ್ದರೆ, ಹುಸೇನ್ ಅವರನ್ನು ಪ್ರಮಾಣವಚನ ಸ್ವೀಕರಿಸದಂತೆ ತಡೆಯಬೇಕು ಎಂದರು. ಅಲ್ಲದೆ, ಹುಸ್ಸೇನ್ ಅವರಿಗೆ ಪ್ರಮಾಣ ವಚನ ಬೋಧಿಸಬಾರದೆಂದು ಕೋರಿ ಉಪ ರಾಷ್ಟ್ರಪತಿಯವರಿಗೆ ಪತ್ರ ಬರೆಯುವುದಾಗಿ ಹೇಳಿದರು.

ಪಾಕಿಸ್ತಾನ ಪರ ಘೋಷಣೆ ಕೂಗಿಲ್ಲ ಎನ್ನುತ್ತಿದ್ದ ಕಾಂಗ್ರೆಸ್ ನಾಯಕರು, ಮಾಧ್ಯಮದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ್ದರು. ಎಫ್​ಎಸ್​ಎಲ್ ವರದಿ ಕೈ ಸೆರಿದ್ದರೂ ಯಾವುದೇ ವಿಚಾರವನ್ನು ಬಹಿರಂಗಪಡಿಸದೇ ಮುಚ್ಚಿಡಲಾಗಿತ್ತು. ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿಯ ನಿರಂತ ಟೀಕಾಪ್ರಹಾರಗಳ ನಡುವೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, ಎರಡು ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈವರೆಗೆ ಎಫ್​ಎಸ್​ಎಲ್ ವರದಿಯನ್ನು ರಾಜ್ಯ ಸರ್ಕಾರ ಬಹಿರಂಗಪಡಿಸಿಲ್ಲ. ಈ ಬಗ್ಗೆ ಮಾತನಾಡಿದ ಗೃಹಸಚಿವ ಡಾ.ಜಿ.ಪರಮೇಶ್ವರ, ಎಫ್​ಎಸ್​ಎಲ್ ವರದಿ ಆಧಾರದ ಮೇಲೆ ಬಂಧಿಸಲಾಗಿದೆ ಎಂದರು. ಅಲ್ಲಿಗೆ, ಪಾಕ್ ಪರ ಘೋಷಣೆ ಕೂಗಲಾಗಿಲ್ಲ ಎನ್ನುವ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಸಚಿವ ಪ್ರಿಯಾಂಕ್ ಖರ್ಗೆ ಸೇರಿದಂತೆ ಇನ್ನಿತರ ಸಚಿವರು ಹಾಗೂ ಕೈ ಶಾಸಕರ ವಾದ ಸುಳ್ಳೆಂದು ಸಾಬೀತಾಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್