AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಘಾಟನೆಗೂ ಮುನ್ನವೇ ಸೋರುತ್ತಿದೆ ವಿಜಯನಗರ ಪಾಲಿಕೆ ಬಜಾರ್: ಖರ್ಚಾಗಿದೆ 16 ಕೋಟಿ ರೂ.

ವಿಜಯನಗರದ ಬೀದಿ ಬದಿ ವ್ಯಾಪಾರಿಗಳ ಕನಸಿನ ಕೂಸಾದ ಅಂಡರ್ ಗ್ರೌಂಡ್ ಮಾರ್ಕೆಟ್ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ. ಏಳು ವರ್ಷಗಳಿಂದ ಕಾಮಗಾರಿ ನಡೆಯುತ್ತಲೇ ಇದೆ. ಆದರೆ ಇನ್ನೂ ಉದ್ಘಾಟನೆ ಮಾತ್ರ ಆಗಿಲ್ಲ. ಆಗಲೇ ನಗರದಲ್ಲಿ ಸುರಿಯುತ್ತಿರುವ ಮಳೆಗೆ ಮಾರ್ಕೆಟ್ ಮಳಿಗೆಗಳು ಸೋರುತ್ತಿವೆ. ಯಾವುದೇ ಮೂಲಭೂತ ಸೌಕರ್ಯಗಳೂ ಇಲ್ಲ. ವ್ಯಾಪಾರಕ್ಕಾಗಿ ಬರುವ ಗ್ರಾಹಕರಿಗೆ ಪಾರ್ಕಿಂಗ್ ವ್ಯವಸ್ಥೆಯೂ ಇಲ್ಲ.

ಉದ್ಘಾಟನೆಗೂ ಮುನ್ನವೇ ಸೋರುತ್ತಿದೆ ವಿಜಯನಗರ ಪಾಲಿಕೆ ಬಜಾರ್: ಖರ್ಚಾಗಿದೆ 16 ಕೋಟಿ ರೂ.
ಪಾಲಿಕೆ ಬಜಾರ್
ಕಿರಣ್​ ಸೂರ್ಯ
| Edited By: |

Updated on: Aug 05, 2024 | 7:40 AM

Share

ಬೆಂಗಳೂರು, ಆಗಸ್ಟ್ 5: ವಿಜಯನಗರ ಮುಖ್ಯ ರಸ್ತೆಯಲ್ಲಿ 2017ರಲ್ಲಿ ಬೀದಿಬದಿಯ ವ್ಯಾಪಾರಿಗಳಿಗಾಗಿ ಸುಮಾರು ಹತ್ತು ಕೋಟಿ ರೂಪಾಯಿ ವೆಚ್ಚದಲ್ಲಿ ಅಂಡರ್ ಗ್ರೌಂಡ್ ಮಾರ್ಕೆಟ್ ಕಾಮಗಾರಿ ಆರಂಭ ಮಾಡಲಾಯಿತು. ಆದರೆ ಸುಮಾರು ಏಳು ವರ್ಷಗಳಿಂದ ಕಾಮಗಾರಿ ನಡೆಯುತ್ತಲೇ ಇದೆ ಇನ್ನೂ ಪೂರ್ಣವಾಗಿಲ್ಲ. ಈ ತಿಂಗಳೋ, ಮುಂದಿನ ತಿಂಗಳು ಓಪನ್ ಮಾಡಲಾಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ, ಈ ಅಂಡರ್ ಗ್ರೌಂಡ್ ಮಾರ್ಕೆಟ್​​​ನಲ್ಲಿ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಯಾವುದೇ ಮೂಲಭೂತ ಸೌಕರ್ಯಗಳಿಲ್ಲ. ಆರಂಭದಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಅಂತ ನಿರ್ಮಾಣ ಮಾಡಿದ್ದರೂ ಈಗ ನೋಡಿದರೆ ಟೆಂಡರ್ ಮೂಲಕ ಮಳಿಗೆಗಳನ್ನು ಪಡೆದುಕೊಳ್ಳಬೇಕು ಎನ್ನಲಾಗುತ್ತಿದೆ.

16 ಕೋಟಿ ರೂಪಾಯಿ ವೆಚ್ಚ; ಇಲ್ಲ ಸೌಕರ್ಯ

ಮೊದಲಿಗೆ 10 ಕೋಟಿ ರೂಪಾಯಿ ವೆಚ್ಚ ಅಂದಾಜಿಸಿ ಕಾಮಗಾರಿ ಆರಂಭ ಮಾಡಿದ್ದರು. ಈಗ ನೋಡಿದರೆ 16 ಕೋಟಿ ರೂಪಾಯಿ ವೆಚ್ಚವಾಗಿದೆ ಎನ್ನುತ್ತಿದ್ದಾರೆ. ಈ ಪಾಲಿಕೆ ಬಜಾರ್​​ಗೆ ಬರುವ ಗ್ರಾಹಕರಿಗೆ ವಾಹನಗಳನ್ನು ಪಾರ್ಕಿಂಗ್ ಮಾಡಲು ಯಾವುದೇ ವ್ಯವಸ್ಥೆ ಇಲ್ಲ. ಉದ್ಘಾಟನೆಗೂ ಮುನ್ನವೇ ಮಳಿಗೆಗಳಲ್ಲಿ ನೀರು ಸೋರುತ್ತಿದೆ.

Vijayanagar municipality underground bazaar chaos, Rain water Leaking even before the inauguration, Kannada news

‘ಉದ್ಘಾಟನೆಗೆ ಮುನ್ನವೇ ಮಳೆ ನೀರು ಸೋರುತ್ತಿದೆ ಅಂದರೆ ಎಷ್ಟರಮಟ್ಟಿಗೆ ಕಳಪೆ ಕಾಮಗಾರಿ ಮಾಡಿರಬೇಡಿ ಹೇಳಿ’ ಎಂದು ಸ್ಥಳೀಯ ನಿವಾಸಿ ರಾಜು ಎಂಬವರು ಪ್ರಶ್ನಿಸಿದ್ದಾರೆ. ಈ ಬಗ್ಗೆ ಕೂಡಲೇ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಸ್ಥಳ ಪರಿಶೀಲನೆ ಮಾಡಿ ಸಮಸ್ಯೆ ಬಗಹರಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಬೆಚ್ಚಿಬೀಳಿಸುವ ಘಟನೆ: ಮಹಿಳೆಯನ್ನು ಬಲವಂತವಾಗಿ ತಬ್ಬಿ ಚುಂಬಿಸಿದ ದುಷ್ಕರ್ಮಿ

ಒಟ್ಟಿನಲ್ಲಿ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಸರ್ಕಾರ ಬೀದಿ ಬದಿಯ ವ್ಯಾಪಾರಿಗಳಿಗಾಗಿ ಅಂಡರ್ ಗ್ರೌಂಡ್ ಮಾರ್ಕೆಟ್ ನಿರ್ಮಾಣ ಮಾಡಿದೆ‌. ಆದರೆ ಉದ್ಘಾಟನೆಗೂ ಮುನ್ನವೇ ಮಳಿಗೆಗಳಲ್ಲಿ ಮಳೆ ನೀರು ಸೋರುತ್ತಿದ್ದು, ಮಳಿಗೆಗಳಲ್ಲಿ ವ್ಯಾಪಾರ ಮಾಡಲು ವ್ಯಾಪಾರಸ್ಥರು ಯಾರಾದರೂ ಈ ಕಡೆ ಬರಲು ಧೈರ್ಯ ಮಾಡುತ್ತಾರೆಯೇ ಎಂಬ ಪ್ರಶ್ನೆ ಉದ್ಭವಿಸಿದೆ. ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳೇ ಉತ್ತರ ನೀಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು