AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಘಾತ ಪ್ರಕರಣದ ಅಪರಾಧಿ 14 ವರ್ಷಗಳ ಬಳಿಕ ವಿಜಯನಗರ ಪೊಲೀಸರ ಬಲೆಗೆ

ಪಟಾಕಿ ಅಂಗಡಿಗೆ ಹೋಗಿ ಲಾಂಗ್ ಬೀಸಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗೌತಮ್, ವಿಕ್ರಮ್, ವೀರಮಣಿ, ಅಜಿತ್ ಬಂಧಿತ ಆರೋಪಿಗಳು.

ಅಪಘಾತ ಪ್ರಕರಣದ ಅಪರಾಧಿ 14 ವರ್ಷಗಳ ಬಳಿಕ ವಿಜಯನಗರ ಪೊಲೀಸರ ಬಲೆಗೆ
ಬಂಧಿತ ಆರೋಪಿ
TV9 Web
| Edited By: |

Updated on:Nov 11, 2021 | 4:11 PM

Share

ಬೆಂಗಳೂರು: ಅಪಘಾತ ಪ್ರಕರಣದ ಅಪರಾಧಿ ಸುಮಾರು 14 ವರ್ಷಗಳ ಬಳಿಕ ಪೊಲೀಸರ ಬಲೆಗೆ ಬಿದ್ದಿದ್ದಾನೆ. ತ್ರಿಪುರಾ ಮೂಲದ ಮತಿವಣ್ಣನ್ ಎಂಬಾತ ಬಂಧಿತ ಅಪರಾಧಿ. 2005ರಲ್ಲಿ ಅಪಘಾತ ಪ್ರಕರಣದಲ್ಲಿ ಮತಿವಣ್ಣನ್ ಬಂಧಿತನಾಗಿದ್ದ. ವಿಜಯನಗರ ಸಂಚಾರಿ ಪೊಲೀಸರು ಬಂಧಿಸಿದ್ದರು. ನಂತರ ಮತಿವಣ್ಣನ್ ಜಾಮೀನು ಪಡೆದಿದ್ದ. ಜಾಮೀನು ಸಿಕ್ಕ ನಂತರ ಎಸ್ಕೇಪ್ ಆಗಿದ್ದ. 2007ರಲ್ಲಿ ಆರೋಪ ಸಾಬೀತಾಗಿ ಮತಿವಣ್ಣನ್​ಗೆ ಒಂದು ವರ್ಷ ಜೈಲು ಶಿಕ್ಷೆಯಾಗಿತ್ತು. 2007ರಿಂದ ನಾಪತ್ತೆಯಾಗಿದ್ದ ಮತಿವಣ್ಣನ್ 14 ವರ್ಷಗಳ ಬಳಿಕ ತಮಿಳುನಾಡಿನಲ್ಲಿ ಸದ್ಯ ಅರೆಸ್ಟ್ ಆಗಿದ್ದಾನೆ.

ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿದ್ದ ಐವರು ಅರೆಸ್ಟ್ ಪಟಾಕಿ ಅಂಗಡಿಗೆ ಹೋಗಿ ಲಾಂಗ್ ಬೀಸಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗೌತಮ್, ವಿಕ್ರಮ್, ವೀರಮಣಿ, ಅಜಿತ್ ಬಂಧಿತ ಆರೋಪಿಗಳು. ನ.3ರ ತಡರಾತ್ರಿ ಬುಲ್ ಟೆಂಪಲ್ ರಸ್ತೆಯಲ್ಲಿರುವ ಪಟಾಕಿ ಅಂಗಡಿಗೆ ತೆರಳಿದ್ದ ಐವರ ಗ್ಯಾಂಗ್ ಪಟಾಕಿ ಖರೀದಿ ವೇಳೆ ಮಾಲೀಕನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದಾರೆ. ಪಟಾಕಿ ಅಂಗಡಿ ಮಾಲೀಕ ಮಧುಗೆ ಗಂಭೀರ ಗಾಯವಾಗಿತ್ತು. ಈ ಬಗ್ಗೆ ಕೆ.ಜಿ.ನಗರ ಠಾಣೆಯಲ್ಲಿ ಕೊಲೆ ಯತ್ನ ದೂರು ದಾಖಲಾಗಿತ್ತು. ದೂರು ಆಧರಿಸಿ ಐವರು ಆರೋಪಿಗಳನ್ನ ಕೆಜಿ ನಗರ ಪೊಲೀಸರು ಬಂಧಿಸಿದ್ದಾರೆ.

ದರೋಡೆಗೆ ಯತ್ನಿಸಿದ್ದ ಆರೋಪಿ ಸೆರೆ ಪೆಟ್ರೋಲ್ ಬಂಕ್ನಲ್ಲಿ ದರೋಡೆಗೆ ಯತ್ನಿಸಿದ್ದ ಆರೋಪಿ ಸೆರೆಯಾಗಿದ್ದಾನೆ. ಬೆಂಗಳೂರಿನಲ್ಲಿ ಆರೋಪಿ ಆಜಂನನ್ನು ಪೊಲೀಸರು ಬಂಧಿಸಿದ್ದಾರೆ. ಬ್ಯಾಟರಾಯನಪುರ ಪೆಟ್ರೋಲ್ ಬಂಕ್​ನಲ್ಲಿ ಆರೋಪಿಗಳು ಬೈಕ್​ನಲ್ಲಿ ಬಂದು ದರೋಡೆಗೆ ಯತ್ನಿಸಿದ್ದರು. 3 ದಿನಗಳ ಹಿಂದೆ ಈ ಘಟನೆ ನಡೆದಿತ್ತು. ಇಬ್ಬರು ಆರೋಪಿಗಳ ಪೈಕಿ ಓರ್ವ ಅರೆಸ್ಟ್ ಆಗಿದ್ದಾನೆ. ಸದ್ಯ ಬ್ಯಾಟರಾಯನಪುರ ಪೊಲೀಸರಿಂದ ಇನ್ನೊಬ್ಬ ಆರೋಪಿಗಾಗಿ ಹುಡುಕಾಟ ನಡೆದಿದೆ.

ನಕಲಿ ಸರ್ಫ್ ಎಕ್ಸೆಲ್ ತಯಾರಿಸುತ್ತಿದ್ದ ನಾಲ್ವರ ಬಂಧನ ಬೆಂಗಳೂರಿನ ಹನುಮಂತನಗರದಲ್ಲಿ ಸಿಸಿಬಿ ಪೊಲೀಸರು ನಕಲಿ ಸರ್ಫ್ ಎಕ್ಸೆಲ್ ತಯಾರಿಸುತ್ತಿದ್ದ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಉತ್ತಮ್ಸಿಂಗ್, ತನ್ಸಿಂಗ್, ಮೋದರಾಮ್ ಹಾಗೂ ಜಾಲಂ ಸಿಂಗ್ ರಾಥೋಡ್ ಎಂಬುವವನ್ನು ಸಿಸಿಬಿ ತಂಡ ಬಂಧಿಸಿದೆ. ಹನುಮಂತನಗರ ವ್ಯಾಪ್ತಿಯ ಮನೆಯೊಂದರಲ್ಲಿ ಇವರು ನಕಲಿ ಸರ್ಫ್ ಎಕ್ಸೆಲ್ ತಯಾರಿಸುತ್ತಿದ್ದರು. 13,080 ನಕಲಿ ಸರ್ಫ್ ಎಕ್ಸೆಲ್ ಪ್ಯಾಕ್ ಮತ್ತು ಮಷೀನ್ ವಶಕ್ಕೆ ಪಡೆಯಲಾಗಿದೆ.

ಬೆಟ್ಟಿಂಗ್​ನಲ್ಲಿ ತೊಡಗಿದ್ದ ಆರೋಪಿ ಸೆರೆ ಟಿ20 ಕ್ರಿಕೆಟ್ ಬೆಟ್ಟಿಂಗ್​ನಲ್ಲಿ ತೊಡಗಿದ್ದ ಆರೋಪಿಯನ್ನು ಬೆಂಗಳೂರಿನ ಹೈಗ್ರೌಂಡ್ಸ್ ಠಾಣಾ ವ್ಯಾಪ್ತಿಯಲ್ಲಿ ಅರೆಸ್ಟ್ ಮಾಡಲಾಗಿದೆ. ಆರೋಪಿಯನ್ನು ಬಂಧಿಸಿ ಸಿಸಿಬಿ ಪೊಲೀಸರು ಸುಮಾರು 3.5 ಲಕ್ಷ ರೂ. ಹಣವನ್ನು ಜಪ್ತಿ ಮಾಡಿದ್ದಾರೆ.

ಅಪಘಾತ ಪ್ರಕರಣದ ಅಪರಾಧಿ 14 ವರ್ಷಗಳ ಬಳಿಕ ಪೊಲೀಸರ ಬಲೆಗೆ ಬೆಂಗಳೂರು: ಅಪಘಾತ ಪ್ರಕರಣದ ಅಪರಾಧಿ ಸುಮಾರು 14 ವರ್ಷಗಳ ಬಳಿಕ ಪೊಲೀಸರ ಬಲೆಗೆ ಬಿದ್ದಿದ್ದಾನೆ. ತ್ರಿಪುರಾ ಮೂಲದ ಮತಿವಣ್ಣನ್ ಎಂಬಾತ ಬಂಧಿತ ಅಪರಾಧಿ. 2005ರಲ್ಲಿ ಅಪಘಾತ ಪ್ರಕರಣದಲ್ಲಿ ಮತಿವಣ್ಣನ್ ಬಂಧಿತನಾಗಿದ್ದ. ವಿಜಯನಗರ ಸಂಚಾರಿ ಪೊಲೀಸರು ಬಂಧಿಸಿದ್ದರು. ನಂತರ ಮತಿವಣ್ಣನ್ ಜಾಮೀನು ಪಡೆದಿದ್ದ. ಜಾಮೀನು ಸಿಕ್ಕ ನಂತರ ಎಸ್ಕೇಪ್ ಆಗಿದ್ದ. 2007ರಲ್ಲಿ ಆರೋಪ ಸಾಬೀತಾಗಿ ಮತಿವಣ್ಣನ್ಗೆ ಒಂದು ವರ್ಷ ಜೈಲು ಶಿಕ್ಷೆಯಾಗಿತ್ತು. 2007ರಿಂದ ನಾಪತ್ತೆಯಾಗಿದ್ದ ಮತಿವಣ್ಣನ್ 14 ವರ್ಷಗಳ ಬಳಿಕ ತಮಿಳುನಾಡಿನಲ್ಲಿ ಸದ್ಯ ಅರೆಸ್ಟ್ ಆಗಿದ್ದಾನೆ.

ಇದನ್ನೂ ಓದಿ

ಬಿಟ್​ಕಾಯಿನ್ ಅಂದ್ರೆ ಏನು ಅಂತಾನೆ ನನಗೂ ಗೊತ್ತಿಲ್ಲ, ನನ್ನ ಮಗ ದರ್ಶನನಿಗೂ ಗೊತ್ತಿಲ್ಲ: ರುದ್ರಪ್ಪ ಲಮಾಣಿ

ರೈತರು, ಮಹಿಳೆಯರ ಮೇಲೆ ಪೊಲೀಸರ ದಬ್ಬಾಳಿಕೆ; ಮಗುವಿನೊಂದಿಗೆ ಬಂದಿದ್ದ ಮಹಿಳೆಯನ್ನೂ ಎಳೆದಾಡಿ ರೈತರನ್ನು ವಶಕ್ಕೆ ಪಡೆದ ಖಾಕಿ

Published On - 12:06 pm, Thu, 11 November 21

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು