AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರೋಲ್ ಪೇಜ್, ಯೂಟ್ಯೂಬ್ ಚಾನೆಲ್​ಗಳ ವಿರುದ್ಧ ದೂರು ನೀಡಿದ ಅವಧೂತ ವಿನಯ್ ಗುರೂಜಿ!

ಕೆಪಿಸಿಸಿ ಆನೇಕಲ್ ವಿಭಾಗ ಸೋಷಿಯಲ್ ಮೀಡಿಯಾ ವಿಂಗ್ ಸೇರಿ ಸುಮಾರು 22 ಟ್ರೋಲ್ ಪೇಜ್​ಗಳ ಮೇಲೆ ಪ್ರಕರಣ ದಾಖಲಾಗಿದೆ.

ಟ್ರೋಲ್ ಪೇಜ್, ಯೂಟ್ಯೂಬ್ ಚಾನೆಲ್​ಗಳ ವಿರುದ್ಧ ದೂರು ನೀಡಿದ ಅವಧೂತ ವಿನಯ್ ಗುರೂಜಿ!
ವಿನಯ್ ಗುರೂಜಿ
TV9 Web
| Updated By: sandhya thejappa|

Updated on:Jul 26, 2022 | 10:45 AM

Share

ಬೆಂಗಳೂರು: ಸ್ವರ್ಣಪೀಠಿಕೇಶ್ವರಿ ದತ್ತಾಶ್ರಮದ ಅವಧೂತ ವಿನಯ್ ಗುರೂಜಿಗೆ (Vinay Guruji) ತೇಜೋವಧೆ ಆಗಿದೆ ಎಂದು ಟ್ರೋಲ್ ಪೇಜ್​ಗಳು (Troll Pages) ಮತ್ತು ಯೂಟ್ಯೂಬ್ ಚಾನೆಲ್​ಗಳ (YouTube Channels) ವಿರುದ್ಧ ದೂರು ದಾಖಲಾಗಿದೆ. ತಮ್ಮ ಪಿಆರ್​ಓ ಮೂಲಕ ವಿನಯ್ ಗುರೂಜಿ ದೂರು ನೀಡಿದ್ದು, ಕೆಪಿಸಿಸಿ ಆನೇಕಲ್ ವಿಭಾಗ ಸೋಷಿಯಲ್ ಮೀಡಿಯಾ ವಿಂಗ್ ಸೇರಿ ಸುಮಾರು 22 ಟ್ರೋಲ್ ಪೇಜ್​ಗಳ ಮೇಲೆ ಪ್ರಕರಣ ದಾಖಲಾಗಿದೆ. ತಲೆಯ ಮೇಲೆ ಕಾಲಿಡುವ ದೃಶ್ಯವನ್ನು ಪೋಸ್ಟ್ ಮಾಡಿ ಅದರಲ್ಲಿ ಕೆಟ್ಟದಾಗಿ ಕಾಮೆಂಟ್ ಹಾಕಿದ್ದಾರೆಂದು ದೂರಿನಲ್ಲಿ ಉಲ್ಲೇಖವಾಗಿದೆ.

ಪೋಸ್ಟ್​ನಲ್ಲಿ ಏನಿದೆ?: ರಾತ್ರಿ ಕುಡಿದ ಹೆಂಡದ ಅಮಲಿನಲ್ಲಿ ತಲೆಯ ಮೇಲೆ ಕಾಲಿಡುತ್ತಿರುವ ಗುರೂಜಿ, ನಶೆಯಲ್ಲಿ ನಿಲ್ಲೋಕೆ ಆಗುತ್ತಿಲ್ಲ. ಸಾಮಾನ್ಯ ಮನುಷ್ಯನಾಗಿ ಮೋಜು- ಮಸ್ತಿ ಮಾಡಿದರೂ ಯಾರೂ ಪ್ರಶ್ನಿಸಲ್ಲ. ಆದರೆ ತಾನು ದೇವರ ಅವತಾರ ಅಂತ ಬೊಗಳೆ ಬಿಟ್ಟು ಜನರ ಭಾವನೆ- ನಂಬಿಕೆಗಳನ್ನು ದುರುಪಯೋಗಪಡಿಸಿಕೊಂಡು ದೇವರುಗಳ ಮಾನ ಮರ್ಯಾದೆ ಹರಾಜು ಹಾಕುತ್ತಿರುವುದನ್ನು ಸಹಿಸುವುದು ಹೇಗೆ? ಇವನನ್ನು ದೇವನ ಅವತಾರ ಪುರುಷ ಅಂತ ಒಪ್ಪಿದರೆ, ದೇವರು ಹೆಂಡ ಕುಡಿತಾನೆ, ಹುಡುಗಿಯರ ಸಂಗ ಮಾಡುತ್ತಾನೆ, ಸಿಗರೇಟ್ ಹೊಡೆಯುತ್ತಾನೆ ಅಂತನೂ ಒಪ್ಪಿಕೊಳ್ಳಬೇಕಾಗುತ್ತದೆ ಎಂದು ವಿನಯ್ ಗುರೂಜಿ ವಿರುದ್ಧ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: Kargil Vijay Diwas 2022: ಕಾರ್ಗಿಲ್​ ಯುದ್ಧದಲ್ಲಿ ಹೋರಾಡಿದ ವೀರ ಯೋಧರ ಭಾವಚಿತ್ರಗಳು ಇಲ್ಲಿವೆ

ಇದನ್ನೂ ಓದಿ
Image
India Covid Updates: ಭಾರತದಲ್ಲಿ 14,830 ಮಂದಿ ಕೊರೊನಾ ಸೋಂಕಿತರು ಪತ್ತೆ, 36 ಸಾವು
Image
Gujarat Hooch Tragedy: ಗುಜರಾತ್​​ನಲ್ಲಿ ಕಳ್ಳಭಟ್ಟಿ ಸೇವನೆಯಿಂದ ಮೃತಪಟ್ಟವರ ಸಂಖ್ಯೆ 24ಕ್ಕೆ ಏರಿಕೆ; 45 ಜನ ಆಸ್ಪತ್ರೆಗೆ ದಾಖಲು
Image
5G Auctions: ಇಂದಿನಿಂದ 5G ಸ್ಪೆಕ್ಟ್ರಮ್ ಹರಾಜು: ಅಖಾಡದಲ್ಲಿದೆ 4 ಕಂಪನಿಗಳು, ಇಲ್ಲಿದೆ ಎಲ್ಲ ಮಾಹಿತಿ
Image
Mangaluru: ಮಂಗಳೂರು ಪಬ್​ನಲ್ಲಿ ಕಾಲೇಜು ವಿದ್ಯಾರ್ಥಿಗಳ ಪಾರ್ಟಿಗೆ ಬಜರಂಗದಳ ಕಾರ್ಯಕರ್ತರ ಅಡ್ಡಿ

ಇಂತಹ ಪೋಸ್ಟ್​ಗಳಿಂದ ಸ್ವಾಮಿಜಿಯವರ ತೇಜೋವಧೆ ಆಗಿದೆ. ಅವರ ಲಕ್ಷಾಂತರ ಭಕ್ತರ ಮನಸ್ಸಿಗೆ ಘಾಸಿಯುಂಟಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದು, ಸಮಾಜದಲ್ಲಿ ಅಶಾಂತಿಯನ್ನ ಸೃಷ್ಟಿಸಿ, ಸಮಾಜದ ಸ್ವಾಸ್ಥ್ಯ ಕದಡುವ ಕೆಲಸ ಮಾಡುತ್ತಿರುವ ಟ್ರೋಲಿಗರ ಮೇಲೆ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಬನಶಂಕರಿ ಪೊಲೀಸರಿಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Tiranga Rally 2022: ಶ್ರೀನಗರದಿಂದ ಲೇಹ್​ಗೆ ತಿರಂಗಾ ಯಾತ್ರೆ; ಇಂದು ಕಾರ್ಗಿಲ್​ನಲ್ಲಿ ತೇಜಸ್ವಿ ಸೂರ್ಯ  ಧ್ವಜಾರೋಹಣ

Published On - 9:43 am, Tue, 26 July 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ