AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಿಂದ ಕಾಯ್ದೆ ಉಲ್ಲಂಘನೆ, ತನಿಖಾ ಸಮಿತಿ ವರದಿಯಲ್ಲಿ ಬಟಾಬಯಲು

Kspcb ಯ ಹಿಂದಿನ ಸದಸ್ಯ ಕಾರ್ಯದರ್ಶಿ ಸೂರಿ ಪಾಯಲ್ ಈ ಸಂಬಂಧ ಸರ್ಕಾರಕ್ಕೆ ದೂರು ನೀಡಿದ್ದರು. ದೂರಿನನ್ವಯ ಸರ್ಕಾರ ಸಮಿತಿ ರಚನೆ ಮಾಡಿ ತನಿಖೆಗೆ ಸೂಚಿಸಿತ್ತು. ಇದೀಗ ತನಿಖೆಯ ವರದಿಯಲ್ಲಿ ಶಾಂತಾ ಎ ತಿಮ್ಮಯ್ಯ ಅಕ್ರಮ ಎಸಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಿಂದ ಕಾಯ್ದೆ ಉಲ್ಲಂಘನೆ, ತನಿಖಾ ಸಮಿತಿ ವರದಿಯಲ್ಲಿ ಬಟಾಬಯಲು
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ
Shivaraj
| Updated By: ಆಯೇಷಾ ಬಾನು|

Updated on: Aug 17, 2023 | 12:44 PM

Share

ಬೆಂಗಳೂರು, ಆ.17: ಜಾಗೃತಿ ಕಾರ್ಯಕ್ರಮಗಳ ಹೆಸರಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಶಾಂತಾ ಎ ತಿಮ್ಮಯ್ಯ(Shanth A Thimmaiah) ಅವರು ಕಾಯ್ದೆಗಳ ಉಲ್ಲಂಘನೆ ಮಾಡುತ್ತಿದ್ದಾರೆ ಎಂದು ರಾಜ್ಯ ಸರ್ಕಾರ(State Government) ನೇಮಿಸಿದ ತನಿಖಾ ಸಮಿತಿ ವರದಿಯಲ್ಲಿ ಬಟಾಬಯಲಾಗಿದೆ. ಜಲ ಮಾಲಿನ್ಯ ಕಾಯ್ದೆ 1974 ಹಾಗೂ ವಾಯು ಮಾಲಿನ್ಯ ಕಾಯ್ದೆ 1981ರ ಪ್ರಕಾರ ಮಂಡಳಿ ಅಧ್ಯಕ್ಷರಿಗೆ ಯಾವುದೇ ಸಮಿತಿಯನ್ನು ರಚಿಸುವ ಅಧಿಕಾರ ಇಲ್ಲ. ಆದರೆ ಅಧ್ಯಕ್ಷ ಶಾಂತಾ ಎ ತಿಮ್ಮಯ್ಯ ಅವರು ಕಾಯ್ದೆಯನ್ನು ಉಲ್ಲಂಘಿಸಿ ಏಕ ಸಮಿತಿಯನ್ನು ರಚಿಸಿದ್ದಾರೆ ಎಂದು ತನಿಖಾ ಸಮಿತಿ ವರದಿಯಲ್ಲಿ ನಮೂದಿಸಲಾಗಿದೆ.

ಮಂಡಳಿಯ ಪ್ರಚಾರ ಜಾಹೀರಾತು ನೀಡುವ ಹೆಸರಿನಲ್ಲಿ ಅಕ್ರಮ ಎಸಗಿದ್ದಾರೆ ಅನ್ನೋ ಆರೋಪ ಶಾಂತಾ ಎ ತಿಮ್ಮಯ್ಯ ಅವರ ಮೇಲಿತ್ತು. Kspcb ಯ ಹಿಂದಿನ ಸದಸ್ಯ ಕಾರ್ಯದರ್ಶಿ ಸೂರಿ ಪಾಯಲ್ ಈ ಸಂಬಂಧ ಸರ್ಕಾರಕ್ಕೆ ದೂರು ನೀಡಿದ್ದರು. ದೂರಿನನ್ವಯ ಸರ್ಕಾರ ಸಮಿತಿ ರಚನೆ ಮಾಡಿ ತನಿಖೆಗೆ ಸೂಚಿಸಿತ್ತು. ಇದೀಗ ತನಿಖೆಯ ವರದಿಯಲ್ಲಿ ಶಾಂತಾ ಎ ತಿಮ್ಮಯ್ಯ ಅಕ್ರಮ ಎಸಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ.

ಇದನ್ನೂ ಓದಿ: ಭಾರತೀಯ ಸೇನೆಗಾಗಿ E-ಮಾದರಿ ಅಪಾಚೆಗಳ ಉತ್ಪಾದನೆಯನ್ನು ಪ್ರಾರಂಭಿಸಲಿದೆ ಬೋಯಿಂಗ್ ಸಂಸ್ಥೆ

Ktpp ಕಾಯ್ದೆಯನ್ನ ಉಲ್ಲಂಘಸಿ ಏಕಸ್ವಾಮ್ಯ ನಿರ್ಧಾರ ಮಾಡಿದ್ದಾರೆ. 25 ಸಾವಿರ ಮೇಲ್ಪಟ್ಟ ಕೆಲಸಗಳಿಗೆ ಟೆಂಡರ್ ಆಹ್ವಾನಿಸಬೇಕು. ಆದರೆ ಮಂಡಳಿ ಅಧ್ಯಕ್ಷರು ಬರೋಬ್ಬರಿ 19.92 ಕೋಟಿ ಯಷ್ಟು ಟೆಂಡರ್ ಕರೆಯದೇ ನೀಡಿದ್ದಾರೆ. ಏಕ ಮೂಲ ಸಂಸ್ಥೆಯನ್ನು ಆಯ್ಕೆ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ. 35 ದಿನಗಳ ಅಲ್ಪಾವಧಿ ಟೆಂಡರ್ ಕರೆಯಬಹುದಿತ್ತು. ಮೊದಲೇ ನಿರ್ಧರಿಸಿದ ಸಂಸ್ಥೆಗಳಿಗೆ ಅವಕಾಶ ಕಲ್ಪಿಸಲು ಸ್ಪರ್ಧಾತ್ಮಕತೆ ನಿಯಂತ್ರಿಸಿದ್ದಾರೆ. ಪರಿಸರ ಜಾಗೃತಿ ಕಾರ್ಯಕ್ರಮಗಳು ಹೆಚ್ಚು ಜನರಿಗೆ ತಲುಪುತ್ತವೆಯೇ ಅನ್ನೋ ಮುನ್ನೋಟವಿಲ್ಲ. ಹೀಗಾಗಿ ಪೂರ್ವ ನಿಯೋಜಿತ ಸಂಸ್ಥೆಗಳಿಗೆ ಗುತ್ತಿಗೆ ನೀಡಲು ಮಂಡಲಿ ಅಧ್ಯಕ್ಷ ಶಾಂತಾ ಎ ತಿಮ್ಮಯ್ಯ ಕಾಯ್ದೆ ಉಲ್ಲಂಘನೆ ಮಾಡಿದ್ದಾರೆ ಅಂತ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಶಾಂತಾ ಎ ತಿಮ್ಮಯ್ಯ ಯೋಜಿತ ಸಂಸ್ಥೆಗಳಿಗೆ ಗುತ್ತಿಗೆ ನೀಡುವ ಉದ್ದೇಶದಿಂದಲೇ ಏಕ ಮೂಲ ಸಂಸ್ಥೆಯನ್ನು ಆಯ್ಕೆ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ. ಶಾಂತಾ ಎ ತಿಮ್ಮಯ್ಯ ಅವರು ಸ್ವಯಂ ಘೋಷಿತವಾಗಿ ಏಕ ಮೂಲ ಸಂಸ್ಥೆಯ ಅಧ್ಯಕ್ಷರನ್ನು ನೇಮಕ ಮಾಡಿಕೊಂಡಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ. ಸದ್ಯ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕ ಪತ್ರ ಇಲಾಖೆ ಹೆಚ್ಚುವರಿ ನಿರ್ದೇಶಕ ಮಹಾದೇವ ರಿಂದ ತನಿಖಾ ವರದಿ ಸರ್ಕಾರಕ್ಕೆ ನೀಡಲಾಗಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು