AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರ ಮನಗೆದ್ದ ಹೃದಯಾಕಾರದ ಸಿಗ್ನಲ್; ಎಕ್ಸ್ ಪೋಸ್ಟ್ ವೈರಲ್

ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗಳ ಪರದಾಡುತ್ತಿರುವುದರ ನಡುವೆ, ಹೃದಯಾಕಾರದ ಟ್ರಾಫಿಕ್ ಸಿಗ್ನಲ್‌ನ ಫೋಟೋ ಎಕ್ಸ್‌ನಲ್ಲಿ ವೈರಲ್ ಆಗಿದೆ. ಈ ವಿಶಿಷ್ಟ ಸಿಗ್ನಲ್ ಪ್ರತಿದಿನ ಗಂಟೆಗಟ್ಟಲೆ ಕಾಲ ಟ್ರಾಫಿಕ್‌ನಲ್ಲಿಯೇ ಕಳೆಯುವ ಸಾಕಷ್ಟು ಪ್ರಯಾಣಿಕರನ್ನು ಆಕರ್ಷಿಸಿದೆ. ಸಿಗ್ನಲ್‌ನಲ್ಲಿ ಕಳೆಯುವ ಸಮಯದ ಬಗ್ಗೆ ಹಾಸ್ಯಭರಿತ ಪ್ರತಿಕ್ರಿಯೆಗಳನ್ನು ಗಳಿಸಿದೆ.

ಬೆಂಗಳೂರಿಗರ ಮನಗೆದ್ದ ಹೃದಯಾಕಾರದ ಸಿಗ್ನಲ್; ಎಕ್ಸ್ ಪೋಸ್ಟ್ ವೈರಲ್
ಬೆಂಗಳೂರಿಗರ ಮನ ಗೆದ್ದ ಹೃದಯಾಕಾರದ ಸಿಗ್ನಲ್
ಭಾವನಾ ಹೆಗಡೆ
|

Updated on:Nov 04, 2025 | 3:12 PM

Share

ಬೆಂಗಳೂರು, ನವೆಂಬರ್ 4: ಬೆಂಗಳೂರಿಗರಿಗೆ ಟ್ರಾಫಿಕ್ ಸಮಸ್ಯೆ ಹೊಸತೇನಲ್ಲ. ದಿನದ ಹಲವು ಗಂಟೆಗಳನ್ನೇ ಸಿಗ್ನಲ್​ನಲ್ಲಿ ಕಳೆಯುವ ಜನರು, ಆಗಾಗ್ಗೆ ಈ ಸಮಸ್ಯೆಯನ್ನು ಸಾಮಾಜಿಕ ಜಾಲತಾಣದಲ್ಲಿ ಎತ್ತಿ ಹಿಡಿಯುತ್ತಲೇ ಇದ್ದಾರೆ. ಇದರ ಮಧ್ಯೆ ಬೆಂಗಳೂರಿನ ನಿವಾಸಿಯೊಬ್ಬರು ಹೃದಯಾಕಾರದ ಕೆಂಪು ಸಿಗ್ನಲ್ ಫೋಟೋ ಒಂದನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, ಪೋಸ್ಟ್ ವೈರಲ್ ಆಗಿದೆ.

ವಿಶಿಷ್ಟ ಸಿಗ್ನಲ್‌ನ ಫೋಟೋವನ್ನು ಎಕ್ಸ್ನಲ್ಲಿ ಹಂಚಿಕೊಂಡಿರುವ ನಿವಾಸಿ,”ಬೆಂಗಳೂರಿನಲ್ಲಿ ಈ ಹೃದಯ ಆಕಾರದ ಸಿಗ್ನಲ್‌ಗಳನ್ನು ನೋಡಿದ್ದೀರಾ? ನಗರವನ್ನು ಇನ್ನಷ್ಟು ಜೀವಂತವಾಗಿಸಲು ಒಳ್ಳೆಯ ದಾರಿಯಾಗಿದೆ” ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಪ್ರತಿದಿನ ಗಂಟೆಗಟ್ಟಲೆ ಕಾಲ ಟ್ರಾಫಿಕ್‌ನಲ್ಲಿಯೇ ಕಳೆಯುವ ಸಾಕಷ್ಟು ಪ್ರಯಾಣಿಕರನ್ನು ಆಕರ್ಷಿಸಿದೆ. ಒಬ್ಬ ಬಳಕೆದಾರರು, “ದಿನದ ಬಹುಪಾಲು ಸಮಯ ಸಿಗ್ನಲ್‌ಗಳಲ್ಲಿಯೇ ಕಳೆಯುವುದರಿಂದ ಇದು ತುಂಬಾ ಅರ್ಥಪೂರ್ಣವಾಗಿದೆ” ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, “ಒಂದು ವರ್ಷದ ಹಿಂದೆ ನಾನು ಇದನ್ನು ಮೊದಲು ನೋಡಿದಾಗ, ನನಗೇ ಭ್ರಾಂತಿ ಎಂದು ಭಾವಿಸಿದ್ದೆ” ಎಂದು ವ್ಯಂಗ್ಯವಾಡಿದ್ದಾರೆ.

ವೈರಲ್ ಆಗಿರುವ ಎಕ್ಸ್ ಪೋಸ್ಟ್ ಇಲ್ಲಿದೆ

ಇದರೊಂದಿಗೆ ಬೆಂಗಳೂರು ಸದ್ದಿಲ್ಲದೆ ಸ್ಮಾರ್ಟ್ ಸಿಗ್ನಲ್ ವ್ಯವಸ್ಥೆಗಳನ್ನು ಹೊರತರುತ್ತಿದೆ. ಇದರಿಂದ ಸಂಚಾರವನ್ನು ಉತ್ತಮವಾಗಿ ನಿರ್ವಹಿಸುವುದಲ್ಲದೆ  ನೈಜ-ಸಮಯದ ಸಿಗ್ನಲ್ ಕೌಂಟ್‌ಡೌನ್‌ಗಳನ್ನು ಸಹ ನೋಡಲು ಅನುಕೂಲವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:12 pm, Tue, 4 November 25

Follow Us
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು