ಬೆಂಗಳೂರಿನಲ್ಲಿ ಕಮ್ಯುನಿಸ್ಟ್ ಕಚೇರಿಗೆ ಬೆಂಕಿ: ವಿಡಿಯೋ ಪತ್ತೆ

ಬೆಂಗಳೂರು: ಕಮ್ಯುನಿಸ್ಟ್ ಪಕ್ಷದ ಕಚೇರಿಗೆ ಹೆಲ್ಮೆಟ್ ಹಾಕಿರುವ ಇಬ್ಬರು ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ವಿಡಿಯೋ ಲಭಿಸಿದೆ. ನಿನ್ನೆ ರಾತ್ರಿ ಇಬ್ಬರು ದುಷ್ಕರ್ಮಿಗಳು ವೈಯಾಲಿಕಾವಲ್​ನಲ್ಲಿರುವ ಸಿಪಿಐ ಕಚೇರಿಯ ಬಾಗಿಲು ಹಾಗೂ ಮುಂದೆ ನಿಲ್ಲಿಸಿದ್ದ ಬೈಕ್​ಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಓಡಿಹೋಗಿದ್ದಾರೆ. ಕೇರಳದಲ್ಲಿ ಬಿಎಸ್ ಯಡಿಯೂರಪ್ಪನವರ ಕಾರನ್ನು ಅಡ್ಡಗಟ್ಟಿ ಪ್ರತಿಭಟನೆ ನಡೆಸಲಾಗಿತ್ತು.  ಕೇರಳದಲ್ಲಿ ನಡೆದ ಘಟನೆಗೆ ಪ್ರತಿಕಾರವಾಗಿ ದುಷ್ಕರ್ಮಿಗಳು ಈ ರೀತಿಯ ಕೃತ್ಯ ಎಸಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಬೆಳಗ್ಗೆ ಕೇಂದ್ರ ವಿಭಾಗ ಡಿಸಿಪಿ ಚೇತನ್ […]

ಬೆಂಗಳೂರಿನಲ್ಲಿ ಕಮ್ಯುನಿಸ್ಟ್ ಕಚೇರಿಗೆ ಬೆಂಕಿ: ವಿಡಿಯೋ ಪತ್ತೆ
ಸಾಧು ಶ್ರೀನಾಥ್​

Updated on: Dec 25, 2019 | 3:42 PM

ಬೆಂಗಳೂರು: ಕಮ್ಯುನಿಸ್ಟ್ ಪಕ್ಷದ ಕಚೇರಿಗೆ ಹೆಲ್ಮೆಟ್ ಹಾಕಿರುವ ಇಬ್ಬರು ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ವಿಡಿಯೋ ಲಭಿಸಿದೆ. ನಿನ್ನೆ ರಾತ್ರಿ ಇಬ್ಬರು ದುಷ್ಕರ್ಮಿಗಳು ವೈಯಾಲಿಕಾವಲ್​ನಲ್ಲಿರುವ ಸಿಪಿಐ ಕಚೇರಿಯ ಬಾಗಿಲು ಹಾಗೂ ಮುಂದೆ ನಿಲ್ಲಿಸಿದ್ದ ಬೈಕ್​ಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಓಡಿಹೋಗಿದ್ದಾರೆ. ಕೇರಳದಲ್ಲಿ ಬಿಎಸ್ ಯಡಿಯೂರಪ್ಪನವರ ಕಾರನ್ನು ಅಡ್ಡಗಟ್ಟಿ ಪ್ರತಿಭಟನೆ ನಡೆಸಲಾಗಿತ್ತು.  ಕೇರಳದಲ್ಲಿ ನಡೆದ ಘಟನೆಗೆ ಪ್ರತಿಕಾರವಾಗಿ ದುಷ್ಕರ್ಮಿಗಳು ಈ ರೀತಿಯ ಕೃತ್ಯ ಎಸಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ಬೆಳಗ್ಗೆ ಕೇಂದ್ರ ವಿಭಾಗ ಡಿಸಿಪಿ ಚೇತನ್ ಸಿಂಗ್ ರಾಥೋಡ್ ಸ್ಥಳಕ್ಕೆ ಆಗಮಿಸಿ ಸುಟ್ಟ ಬೈಕ್​ಗಳ ಪರಿಶೀಲನೆ ನಡೆಸಿದ್ದರು. ಘಟನೆಯಲ್ಲಿ 6 ಬೈಕ್​ಗಳು ಸುಟ್ಟಿದ್ದವು. ಈಗ ಕಚೇರಿ ಸುಡಲು ಯತ್ನಿಸಿದ ವಿಡಿಯೋ ಲಭ್ಯವಾಗಿದೆ. ವೈಯಾಲಿಕಾವಲ್ ಠಾಣೆ ಪೊಲೀಸರಿಂದ ಕೇಸ್​ನ ತನಿಖೆ ನಡೆಯುತ್ತಿದೆ. ನೂರಕ್ಕೂ ಹೆಚ್ಚು ಸಿಪಿಐ ಕಾರ್ಯಕರ್ತರಿಂದ ಆರೋಪಿಗಳನ್ನು ಬಂಧಿಸುವಂತೆ ಪ್ರತಿಭಟನೆ ನಡೆಯುತ್ತಿದೆ.

Published On - 3:33 pm, Wed, 25 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us