AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದ ಮತ್ತಲ್ಲಿ ಕೈದಿಗಳ ಡ್ಯಾನ್ಸ್​ ವಿಡಿಯೋ ವೈರಲ್​: ಯಾವ ಜೈಲಿನದ್ದು?

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಿರುವ ವಿಡಿಯೋಗಳು ನಿನ್ನೆಯಷ್ಟೇ ವೈರಲ್​ ಆಗಿದ್ದವು. ಆ ಬೆನ್ನಲ್ಲೇ ಇಂದು ಮತ್ತೊಂದಿಷ್ಟು ವಿಡಿಯೋಗಳು ಹೊರ ಬಂದಿವೆ. ಜೈಲಿನಲ್ಲೇ ಮದ್ಯ ಸೇವಿಸಿ ಕೈದಿಗಳು ಡ್ಯಾನ್ಸ್​ ಮಾಡಿರುವ ದೃಶ್ಯಗಳು ವಿಡಿಯೋದಲ್ಲಿದ್ದು, ಇದು ಕೂಡ ಪರಪ್ಪನ ಅಗ್ರಹಾರದ್ದಾ ಅಥವಾ ಬೇರೆ ಜೈಲಿನದ್ದಾ? ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

ಕುಡಿದ ಮತ್ತಲ್ಲಿ ಕೈದಿಗಳ ಡ್ಯಾನ್ಸ್​ ವಿಡಿಯೋ ವೈರಲ್​: ಯಾವ ಜೈಲಿನದ್ದು?
ಜೈಲಲ್ಲೇ ಕುಡಿದು ಕೈದಿಗಳಿಂದ ನೃತ್ಯ
ಪ್ರಸನ್ನ ಹೆಗಡೆ
|

Updated on:Nov 09, 2025 | 3:06 PM

Share

ಬೆಂಗಳೂರು, ನವೆಂಬರ್​ 09: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಬಿಂದಾಸ್​ ಲೈಫ್​ ಬಗ್ಗೆ ಮೇಲಿಂದ ಮೇಲೆ ವಿಡಿಯೋಗಳು ವೈರಲ್​ ಆಗುತ್ತಲೇ ಇವೆ. ನಿನ್ನೆಯಷ್ಟೇ ರೇಪಿಸ್ಟ್ ಉಮೇಶ್ ರೆಡ್ಡಿ, ತರುಣ್ ಕೊಂಡೂರು, ಶಂಕಿತ ಉಗ್ರ ಶಕೀಲ್​​ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಿರುವ ವಿಡಿಯೋಗಳು ವೈರಲ್ ಆಗಿದ್ದವು.  ಈ ನಡುವೆ ಕರ್ನಾಟಕದ ಜೈಲಿನ ಮತ್ತೊಂದು ವಿಡಿಯೋ ಹೊರ ಬಂದಿದ್ದು, ಮದ್ಯಸೇವಿಸಿ ಕೈದಿಗಳು ಡ್ಯಾನ್ಸ್ ಮಾಡೋ ವಿಡಿಯೋ ಭಾರಿ ಚರ್ಚೆ ಹುಟ್ಟುಹಾಕಿದೆ.  ಈ ವಿಡಿಯೋಗಳು ಪರಪ್ಪನ ಅಗ್ರಹಾರ ಜೈಲಿನದ್ದಾ ಅಥವಾ ಬೇರೆ ಜೈಲಿನದ್ದಾ ಎಂಬ ಆಯಾಮದಲ್ಲಿ ತನಿಖೆ ನಡೆಸಲಾಗುತ್ತಿದೆ.

ಕೈದಿಗಳ ಡ್ಯಾನ್ಸ್​

ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಿರುವ ವಿಡಿಯೋಗಳು ವೈರಲ್​ ಆಗಿರುವ ಬೆನ್ನಲ್ಲೇ ಹೊರಬಂದ ವಿಡಿಯೋಗಳು 2023ರದ್ದು ಎಂದು ಜೈಲಧಿಕಾರಿಗಳು ಮಾಹಿತಿ ನೀಡಿದ್ದರು. ಆದರೆ ಆ ಎಲ್ಲಾ ವಿಡಿಯೋಗಳು ಇದೇ ವರ್ಷದ್ದು ಎನ್ನಲಾಗಿದೆ. ಗೋಲ್ಡ್ ಸ್ಮಗ್ಲಿಂಗ್​ ಕೇಸಲ್ಲಿ ಬಂಧನ ಆಗಿರುವ ರನ್ಯಾ ಪ್ರಿಯಕರ ತರುಣ್ ಅರೆಸ್ಟ್​ ಆಗಿರೋದು ಕಳೆದ ಮಾರ್ಚ್​​ನಲ್ಲಿ. ವೈರಲ್​ ಆಗಿರುವ ವಿಡಿಯೋಗಳಲ್ಲಿ ತರುಣ್​ ಕೂಡ ಇದ್ದು, ಆರೋಪದಿಂದ ತಪ್ಪಿಸಿಕೊಳ್ಳಲು ಜೈಲಧಿಕಾರಿಗಳು ಇದು ಹಳೆಯ ವಿಡಿಯೋ ಎಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ತಪ್ಪು ಮಾಡಿದವರ ವಿರುದ್ಧ ಕ್ರಮ- ಸಿಎಂ

ಪರಪ್ಪನ ಅಗ್ರಹಾರದಲ್ಲಿ ಕಾನೂನು ಬಾಹಿರ ಚಟುವಟಿಕೆ ವಿಚಾರ ಸಂಬಂಧ ಪ್ರತಿಕ್ರಿಯಿಸಿರೋ ಸಿಎಂ ಸಿದ್ದರಾಮಯ್ಯ, ತಪ್ಪು ಮಾಡಿದವರ ವಿರುದ್ಧ ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದಿದ್ದಾರೆ. ವಿಜಯನಗರ ಜಿಲ್ಲೆ ಹರಪನಹಳ್ಳಿಯಲ್ಲಿ ಮಾತನಾಡಿದ ಅವರು, ಆ ರೀತಿ ಯಾರು ಮಾಡಿದ್ದಾರೋ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ವರದಿ: ವಿಕಾಸ್​​ ಟಿವಿ9, ಬೆಂಗಳೂರು

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:18 pm, Sun, 9 November 25

Follow Us
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​
ಸಿಎಂ ನಿವಾಸದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ
ಸಿಎಂ ನಿವಾಸದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ
ಕಾಂಗ್ರೆಸ್​​ ಸೇರ್ತಾರ ಜೆಡಿಎಸ್​​ ಶಾಸಕ ಜಿ.ಟಿ. ದೇವೇಗೌಡ?
ಕಾಂಗ್ರೆಸ್​​ ಸೇರ್ತಾರ ಜೆಡಿಎಸ್​​ ಶಾಸಕ ಜಿ.ಟಿ. ದೇವೇಗೌಡ?