AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದ ಮತ್ತಲ್ಲಿ ಕೈದಿಗಳ ಡ್ಯಾನ್ಸ್​ ವಿಡಿಯೋ ವೈರಲ್​: ಯಾವ ಜೈಲಿನದ್ದು?

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಿರುವ ವಿಡಿಯೋಗಳು ನಿನ್ನೆಯಷ್ಟೇ ವೈರಲ್​ ಆಗಿದ್ದವು. ಆ ಬೆನ್ನಲ್ಲೇ ಇಂದು ಮತ್ತೊಂದಿಷ್ಟು ವಿಡಿಯೋಗಳು ಹೊರ ಬಂದಿವೆ. ಜೈಲಿನಲ್ಲೇ ಮದ್ಯ ಸೇವಿಸಿ ಕೈದಿಗಳು ಡ್ಯಾನ್ಸ್​ ಮಾಡಿರುವ ದೃಶ್ಯಗಳು ವಿಡಿಯೋದಲ್ಲಿದ್ದು, ಇದು ಕೂಡ ಪರಪ್ಪನ ಅಗ್ರಹಾರದ್ದಾ ಅಥವಾ ಬೇರೆ ಜೈಲಿನದ್ದಾ? ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

ಕುಡಿದ ಮತ್ತಲ್ಲಿ ಕೈದಿಗಳ ಡ್ಯಾನ್ಸ್​ ವಿಡಿಯೋ ವೈರಲ್​: ಯಾವ ಜೈಲಿನದ್ದು?
ಜೈಲಲ್ಲೇ ಕುಡಿದು ಕೈದಿಗಳಿಂದ ನೃತ್ಯ
ಪ್ರಸನ್ನ ಹೆಗಡೆ
|

Updated on:Nov 09, 2025 | 3:06 PM

Share

ಬೆಂಗಳೂರು, ನವೆಂಬರ್​ 09: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಬಿಂದಾಸ್​ ಲೈಫ್​ ಬಗ್ಗೆ ಮೇಲಿಂದ ಮೇಲೆ ವಿಡಿಯೋಗಳು ವೈರಲ್​ ಆಗುತ್ತಲೇ ಇವೆ. ನಿನ್ನೆಯಷ್ಟೇ ರೇಪಿಸ್ಟ್ ಉಮೇಶ್ ರೆಡ್ಡಿ, ತರುಣ್ ಕೊಂಡೂರು, ಶಂಕಿತ ಉಗ್ರ ಶಕೀಲ್​​ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಿರುವ ವಿಡಿಯೋಗಳು ವೈರಲ್ ಆಗಿದ್ದವು.  ಈ ನಡುವೆ ಕರ್ನಾಟಕದ ಜೈಲಿನ ಮತ್ತೊಂದು ವಿಡಿಯೋ ಹೊರ ಬಂದಿದ್ದು, ಮದ್ಯಸೇವಿಸಿ ಕೈದಿಗಳು ಡ್ಯಾನ್ಸ್ ಮಾಡೋ ವಿಡಿಯೋ ಭಾರಿ ಚರ್ಚೆ ಹುಟ್ಟುಹಾಕಿದೆ.  ಈ ವಿಡಿಯೋಗಳು ಪರಪ್ಪನ ಅಗ್ರಹಾರ ಜೈಲಿನದ್ದಾ ಅಥವಾ ಬೇರೆ ಜೈಲಿನದ್ದಾ ಎಂಬ ಆಯಾಮದಲ್ಲಿ ತನಿಖೆ ನಡೆಸಲಾಗುತ್ತಿದೆ.

ಕೈದಿಗಳ ಡ್ಯಾನ್ಸ್​

ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಿರುವ ವಿಡಿಯೋಗಳು ವೈರಲ್​ ಆಗಿರುವ ಬೆನ್ನಲ್ಲೇ ಹೊರಬಂದ ವಿಡಿಯೋಗಳು 2023ರದ್ದು ಎಂದು ಜೈಲಧಿಕಾರಿಗಳು ಮಾಹಿತಿ ನೀಡಿದ್ದರು. ಆದರೆ ಆ ಎಲ್ಲಾ ವಿಡಿಯೋಗಳು ಇದೇ ವರ್ಷದ್ದು ಎನ್ನಲಾಗಿದೆ. ಗೋಲ್ಡ್ ಸ್ಮಗ್ಲಿಂಗ್​ ಕೇಸಲ್ಲಿ ಬಂಧನ ಆಗಿರುವ ರನ್ಯಾ ಪ್ರಿಯಕರ ತರುಣ್ ಅರೆಸ್ಟ್​ ಆಗಿರೋದು ಕಳೆದ ಮಾರ್ಚ್​​ನಲ್ಲಿ. ವೈರಲ್​ ಆಗಿರುವ ವಿಡಿಯೋಗಳಲ್ಲಿ ತರುಣ್​ ಕೂಡ ಇದ್ದು, ಆರೋಪದಿಂದ ತಪ್ಪಿಸಿಕೊಳ್ಳಲು ಜೈಲಧಿಕಾರಿಗಳು ಇದು ಹಳೆಯ ವಿಡಿಯೋ ಎಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ತಪ್ಪು ಮಾಡಿದವರ ವಿರುದ್ಧ ಕ್ರಮ- ಸಿಎಂ

ಪರಪ್ಪನ ಅಗ್ರಹಾರದಲ್ಲಿ ಕಾನೂನು ಬಾಹಿರ ಚಟುವಟಿಕೆ ವಿಚಾರ ಸಂಬಂಧ ಪ್ರತಿಕ್ರಿಯಿಸಿರೋ ಸಿಎಂ ಸಿದ್ದರಾಮಯ್ಯ, ತಪ್ಪು ಮಾಡಿದವರ ವಿರುದ್ಧ ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದಿದ್ದಾರೆ. ವಿಜಯನಗರ ಜಿಲ್ಲೆ ಹರಪನಹಳ್ಳಿಯಲ್ಲಿ ಮಾತನಾಡಿದ ಅವರು, ಆ ರೀತಿ ಯಾರು ಮಾಡಿದ್ದಾರೋ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ವರದಿ: ವಿಕಾಸ್​​ ಟಿವಿ9, ಬೆಂಗಳೂರು

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:18 pm, Sun, 9 November 25

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ