AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದ ಮತ್ತಲ್ಲಿ ಕೈದಿಗಳ ಡ್ಯಾನ್ಸ್​ ವಿಡಿಯೋ ವೈರಲ್​: ಯಾವ ಜೈಲಿನದ್ದು?

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಿರುವ ವಿಡಿಯೋಗಳು ನಿನ್ನೆಯಷ್ಟೇ ವೈರಲ್​ ಆಗಿದ್ದವು. ಆ ಬೆನ್ನಲ್ಲೇ ಇಂದು ಮತ್ತೊಂದಿಷ್ಟು ವಿಡಿಯೋಗಳು ಹೊರ ಬಂದಿವೆ. ಜೈಲಿನಲ್ಲೇ ಮದ್ಯ ಸೇವಿಸಿ ಕೈದಿಗಳು ಡ್ಯಾನ್ಸ್​ ಮಾಡಿರುವ ದೃಶ್ಯಗಳು ವಿಡಿಯೋದಲ್ಲಿದ್ದು, ಇದು ಕೂಡ ಪರಪ್ಪನ ಅಗ್ರಹಾರದ್ದಾ ಅಥವಾ ಬೇರೆ ಜೈಲಿನದ್ದಾ? ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

ಕುಡಿದ ಮತ್ತಲ್ಲಿ ಕೈದಿಗಳ ಡ್ಯಾನ್ಸ್​ ವಿಡಿಯೋ ವೈರಲ್​: ಯಾವ ಜೈಲಿನದ್ದು?
ಜೈಲಲ್ಲೇ ಕುಡಿದು ಕೈದಿಗಳಿಂದ ನೃತ್ಯ
ಪ್ರಸನ್ನ ಹೆಗಡೆ
|

Updated on:Nov 09, 2025 | 3:06 PM

Share

ಬೆಂಗಳೂರು, ನವೆಂಬರ್​ 09: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಬಿಂದಾಸ್​ ಲೈಫ್​ ಬಗ್ಗೆ ಮೇಲಿಂದ ಮೇಲೆ ವಿಡಿಯೋಗಳು ವೈರಲ್​ ಆಗುತ್ತಲೇ ಇವೆ. ನಿನ್ನೆಯಷ್ಟೇ ರೇಪಿಸ್ಟ್ ಉಮೇಶ್ ರೆಡ್ಡಿ, ತರುಣ್ ಕೊಂಡೂರು, ಶಂಕಿತ ಉಗ್ರ ಶಕೀಲ್​​ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಿರುವ ವಿಡಿಯೋಗಳು ವೈರಲ್ ಆಗಿದ್ದವು.  ಈ ನಡುವೆ ಕರ್ನಾಟಕದ ಜೈಲಿನ ಮತ್ತೊಂದು ವಿಡಿಯೋ ಹೊರ ಬಂದಿದ್ದು, ಮದ್ಯಸೇವಿಸಿ ಕೈದಿಗಳು ಡ್ಯಾನ್ಸ್ ಮಾಡೋ ವಿಡಿಯೋ ಭಾರಿ ಚರ್ಚೆ ಹುಟ್ಟುಹಾಕಿದೆ.  ಈ ವಿಡಿಯೋಗಳು ಪರಪ್ಪನ ಅಗ್ರಹಾರ ಜೈಲಿನದ್ದಾ ಅಥವಾ ಬೇರೆ ಜೈಲಿನದ್ದಾ ಎಂಬ ಆಯಾಮದಲ್ಲಿ ತನಿಖೆ ನಡೆಸಲಾಗುತ್ತಿದೆ.

ಕೈದಿಗಳ ಡ್ಯಾನ್ಸ್​

ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಿರುವ ವಿಡಿಯೋಗಳು ವೈರಲ್​ ಆಗಿರುವ ಬೆನ್ನಲ್ಲೇ ಹೊರಬಂದ ವಿಡಿಯೋಗಳು 2023ರದ್ದು ಎಂದು ಜೈಲಧಿಕಾರಿಗಳು ಮಾಹಿತಿ ನೀಡಿದ್ದರು. ಆದರೆ ಆ ಎಲ್ಲಾ ವಿಡಿಯೋಗಳು ಇದೇ ವರ್ಷದ್ದು ಎನ್ನಲಾಗಿದೆ. ಗೋಲ್ಡ್ ಸ್ಮಗ್ಲಿಂಗ್​ ಕೇಸಲ್ಲಿ ಬಂಧನ ಆಗಿರುವ ರನ್ಯಾ ಪ್ರಿಯಕರ ತರುಣ್ ಅರೆಸ್ಟ್​ ಆಗಿರೋದು ಕಳೆದ ಮಾರ್ಚ್​​ನಲ್ಲಿ. ವೈರಲ್​ ಆಗಿರುವ ವಿಡಿಯೋಗಳಲ್ಲಿ ತರುಣ್​ ಕೂಡ ಇದ್ದು, ಆರೋಪದಿಂದ ತಪ್ಪಿಸಿಕೊಳ್ಳಲು ಜೈಲಧಿಕಾರಿಗಳು ಇದು ಹಳೆಯ ವಿಡಿಯೋ ಎಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ತಪ್ಪು ಮಾಡಿದವರ ವಿರುದ್ಧ ಕ್ರಮ- ಸಿಎಂ

ಪರಪ್ಪನ ಅಗ್ರಹಾರದಲ್ಲಿ ಕಾನೂನು ಬಾಹಿರ ಚಟುವಟಿಕೆ ವಿಚಾರ ಸಂಬಂಧ ಪ್ರತಿಕ್ರಿಯಿಸಿರೋ ಸಿಎಂ ಸಿದ್ದರಾಮಯ್ಯ, ತಪ್ಪು ಮಾಡಿದವರ ವಿರುದ್ಧ ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದಿದ್ದಾರೆ. ವಿಜಯನಗರ ಜಿಲ್ಲೆ ಹರಪನಹಳ್ಳಿಯಲ್ಲಿ ಮಾತನಾಡಿದ ಅವರು, ಆ ರೀತಿ ಯಾರು ಮಾಡಿದ್ದಾರೋ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ವರದಿ: ವಿಕಾಸ್​​ ಟಿವಿ9, ಬೆಂಗಳೂರು

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:18 pm, Sun, 9 November 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್