AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶದಲ್ಲಿ ಕೂತು ಖಾಸಗಿ ಫೈನಾನ್ಸ್​ ಅಕೌಂಟ್​ ಹ್ಯಾಕ್​: 2.5 ಗಂಟೆಯಲ್ಲಿ ದೋಚಿದ್ದು ಕೋಟಿ ಕೋಟಿ!

ವಿದೇಶದಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್​ ಕಂಪನಿಯ ಅಕೌಂಟ್​ ಹ್ಯಾಕ್​ ಮಾಡಿ ಖದೀಮರು ಕೋಟಿ ಕೋಟಿ ಹಣ ದೋಚಿರುವ ಆಘಾತಕಾರಿ ಘಟನೆ ನಡೆದಿದೆ. ವಿಪಿಎನ್ ನೆಟ್​ವರ್ಕ್ ಬಳಸಿ ಅಕೌಂಟ್ ಹ್ಯಾಕ್ ಮಾಡಿರೋದು ಗೊತ್ತಾಗಿತ್ತು, ದೋಚಿದ ಹಣವನ್ನ 653 ನಕಲಿ ಅಕೌಂಟ್​ಗೆ ಟ್ರಾನ್ಸ್​ಫರ್​ ಮಾಡಲಾಗಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳು ಲಾಕ್​ ಆಗಿದ್ದಾರೆ.

ವಿದೇಶದಲ್ಲಿ ಕೂತು ಖಾಸಗಿ ಫೈನಾನ್ಸ್​ ಅಕೌಂಟ್​ ಹ್ಯಾಕ್​: 2.5 ಗಂಟೆಯಲ್ಲಿ ದೋಚಿದ್ದು ಕೋಟಿ ಕೋಟಿ!
ಸಾಂದರ್ಭಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Oct 27, 2025 | 12:20 PM

Share

ಬೆಂಗಳೂರು, ಅಕ್ಟೋಬರ್​ 27: ವಿದೇಶದಲ್ಲಿ ಕುಳಿತು ಬೆಂಗಳೂರಿನ (Bengaluru) ಫೈನಾನ್ಸ್​ ಕಂಪನಿಯ ಅಕೌಂಟ್​ ಹ್ಯಾಕ್​ ಮಾಡಿ ಬರೋಬ್ಬರಿ 49 ಕೋಟಿ ರೂಪಾಯಿ ದೋಚಿರುವ ಆಘಾತಕಾರಿ ಘಟನೆ ನಡೆದಿದೆ. ವಿಪಿನ್ ನೆಟ್​ವರ್ಕ್​ ಬಳಸಿ ವಿಸ್ಡಮ್ ಫೈನಾನ್ಸ್ ಎಂಬ ಕಂಪನಿಯ ಹಣ ಎಗರಿಸಿದ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನ ಬಂಧಿಸಲಾಗಿದೆ. ಬೆಳಗಾವಿ ಮೂಲದ ಇಸ್ಮಾಯಿಲ್ ಅತ್ತರ್ ಮತ್ತು ಪಟೇಲ್ ಎಂಬವರನ್ನು ಬೆಂಗಳೂರು ಸೈಬರ್​ ಅಪರಾಧ ವಿಭಾಗದ ಪೊಲೀಸರು ಅರೆಸ್ಟ್​ ಮಾಡಿದ್ದಾರೆ.

ಆಗಸ್ಟ್ 7ರಂದು ಮಾರತಹಳ್ಳಿಯಲ್ಲಿನ ವಿಸ್ಡಮ್ ಫೈನಾನ್ಸ್ ಕಂಪನಿ ಅಕೌಂಟ್ ಹ್ಯಾಕ್ ಆಗಿದ್ದು, ಈ ಬಗ್ಗೆ ಆ. 9ರಂದು ಫೈನಾನ್ಸ್​ನ ಮ್ಯಾನೇಜರ್ ಪ್ರಕಾಶ್ ದೂರು ನೀಡಿದ್ದರು. ಈ ಆಧಾರದಲ್ಲಿ ಸಿಸಿಬಿ ಸೈಬರ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ರಾಜ್ಯ ಹಾಗೂ ಹೈದರಾಬಾದ್​ನಲ್ಲಿ ಆರೋಪಿಗಳಿಗೆ ಹುಡುಕಾಟ ನಡೆಸಿದ್ದರು. ತನಿಖೆ ವೇಳೆ ಆರೋಪಿಗಳು ವಿದೇಶದಲ್ಲಿ ಕುಳಿತು ವಿಪಿಎನ್ ನೆಟ್​ವರ್ಕ್ ಬಳಸಿ ಅಕೌಂಟ್ ಹ್ಯಾಕ್ ಮಾಡಿರೋದು ಗೊತ್ತಾಗಿತ್ತು. ದೋಚಿದ ಹಣವನ್ನ 653 ನಕಲಿ ಅಕೌಂಟ್​ಗೆ ಟ್ರಾನ್ಸ್​ಫರ್​ ಮಾಡಿದ್ದರು. ವಿಸ್ಡಮ್ ಫೈನಾನ್ಸ್​ನ ಎರಡು ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿರೋದು ತನಿಖೆ ವೇಳೆ ಪತ್ತೆಯಾಗಿತ್ತು.

ಇದನ್ನೂ ಓದಿ: ಕೋಟಿ ಕೋಟಿ ಲಪಟಾಯಿಸಿದ ಹಾಸನದ ಟೈಲರಮ್ಮನ ಕಥೆ: 16 ಲಕ್ಷದ ಕಾರು, ಕೋಟಿ ಬೆಲೆ ಬಾಳುವ ಮನೆ! ಇಷ್ಟೆಲ್ಲ ಸಂಪಾದಿಸಿದ್ದೇಗೆ!?

ಆರೋಪಿಗಳ ಪ್ಲ್ಯಾನ್​ ಹೇಗಿತ್ತು?

ವಿಸ್ಡಮ್ ಫೈನಾನ್ಸ್ ಅವರದ್ದು ಮನಿವೀವ್ ಎಂಬ ಆ್ಯಪ್​ ಇದ್ದು, ಇದರ ಮೂಲಕವೇ ಸಾರ್ವಜನಿಕರಿಗೆ ಲೋನ್​ ನೀಡಲಾಗುತ್ತಿತ್ತು. ಖದೀಮರು ಹಾಂಕಾಂಗ್ ಮತ್ತು ಫಿಲಿಫೈನ್ಸ್​ನಲ್ಲಿ ಕುಳಿತು ಫ್ರಾನ್ಸ್ ಐಪಿ ಅಡ್ರೆಸ್​ ಬಳಸಿ ಇದೇ ಆ್ಯಪ್​ನ ಕೀಯನ್ನು ಹ್ಯಾಕ್​ ಮಾಡಿದ್ದಾರೆ. ಆಮೂಲಕ ಫೈನಾನ್ಸ್​ನ ಎರಡು ಅಕೌಂಟ್​ಗಳನ್ನ ತಮ್ಮ ಹಿಡಿತಕ್ಕೆ ಪಡೆದುಕೊಂಡಿದ್ದರು. ಬಳಿಕ ಅಲ್ಲಿಂದ ಎಪಿಐ ಕೀ ಹ್ಯಾಕ್​ ಮಾಡಿ 653 ಅಕೌಂಟ್ ಗೆ 49 ಕೋಟಿ ರೂ. ವರ್ಗಾವಣೆ ಮಾಡಿದ್ದಾರೆ. ಇಲ್ಲೂ ಆರೋಪಿಗಳು ಚಾಣಾಕ್ಷತೆ ಪ್ರದರ್ಶಿಸಿದ್ದು, ಕದ್ದ ಹಣದ ಒಂದು ಭಾಗವನ್ನ ಸಾರ್ವಜನಿಕರ ಅಕೌಂಟ್​ಗಳಿಗೂ ವರ್ಗಾಯಿಸಿದ್ದಾರೆ. ಪೊಲೀಸರ ತನಿಖೆ ದಿಕ್ಕು ತಪ್ಪಿಸುವ ಉದ್ದೇಶ ಇವರದ್ದಾಗಿತ್ತು ಎನ್ನಲಾಗಿದೆ.

ಬಂಧಿತ ಪೈಕಿ ಇಸ್ಮಾಯಿಲ್​ ದುಬೈನಲ್ಲಿ ಕುಳಿತು ಹ್ಯಾಕ್ ಮಾಡುವ ತಂಡದ ಜೊತೆಗೆ ಸಂಬಂಧ ಹೊಂದಿದ್ದ. ಇನ್ನು ಬಂಧಿತ ಮತ್ತೋರ್ವ ಆರೋಪಿ ಪಟೇಲ್​ ಅಕೌಂಟ್​ಗೆ 27,39,000 ರೂ, ಹಣ ವರ್ಗಾವಣೆ ಆಗಿತ್ತು. ಜೊತೆಗೆ ಹೈದರಾಬಾದ್​ನ Echelon Science Tech Pvt. Ltd. ಕಂಪನಿ ಖಾತೆಗೆ 5.5 ಕೋಟಿ ರೂ. ಹಣ ವರ್ಗಾವಣೆ ಆಗಿರುವುದೂ ಪತ್ತೆಯಾಗಿದೆ. ಕೇವಲ ಎರಡೂವರೆ ಗಂಟೆಗಳಲ್ಲಿ 49 ಕೋಟಿ ಹಣವನ್ನ ಗ್ಯಾಂಗ್​ ದೋಚಿದ್ದು, ಒಟ್ಟು 1,782 ಟ್ರಾನ್ಸಾಕ್ಷನ್ ನಡೆಸಲಾಗಿತ್ತು. ಬಂಧಿತ ಆರೋಪಿಗಳಿಂದ ಲ್ಯಾಪ್​ಟಾಪ್ , ಪೆನ್ ಡ್ರೈವ್ ವಶಕ್ಕೆ ಪಡೆಯಲಾಗಿದೆ. ನಾಪತ್ತೆಯಾಗಿರುವ ಉಳಿದ 5 ಆರೋಪಿಗಳಿಗೆ ಹುಡುಕಾಟ ಮುಂದುವರಿದಿದೆ. ಮಾಹಿತಿ ಪ್ರಕಾರ ಮೂವರು ದುಬೈನಲ್ಲಿದ್ದಾರೆ. ಇನ್ನು ಇಬ್ಬರು ಹಾಂಕಾಂಗ್​ನಲ್ಲಿ ಇದ್ದಾರೆ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಫುಟ್​ಪಾತ್ ತೆರವು ವೇಳೆ ಜಿಬಿಎ ಸಿಬ್ಬಂದಿ ಮೇಲೆ ಪೆಪ್ಪರ್ ಸ್ಪ್ರೇ, ಹಲ್ಲೆ
ಫುಟ್​ಪಾತ್ ತೆರವು ವೇಳೆ ಜಿಬಿಎ ಸಿಬ್ಬಂದಿ ಮೇಲೆ ಪೆಪ್ಪರ್ ಸ್ಪ್ರೇ, ಹಲ್ಲೆ
ಚೆನ್ನಮ್ಮ ಸಮಾಧಿ ಬಳಿ ವಿಷ್ಣು ಸಹಸ್ರನಾಮ ಪಠಣ ವೇಳೆ ಗರುಡ ಪ್ರತ್ಯಕ್ಷ
ಚೆನ್ನಮ್ಮ ಸಮಾಧಿ ಬಳಿ ವಿಷ್ಣು ಸಹಸ್ರನಾಮ ಪಠಣ ವೇಳೆ ಗರುಡ ಪ್ರತ್ಯಕ್ಷ
ರಾಜಕಾಲುವೆ ಒತ್ತುವರಿದಾರರಿಗೂ ಶಾಕ್​​ ಕೊಡಲು ಮುಂದಾದ ಜಿಬಿಎ
ರಾಜಕಾಲುವೆ ಒತ್ತುವರಿದಾರರಿಗೂ ಶಾಕ್​​ ಕೊಡಲು ಮುಂದಾದ ಜಿಬಿಎ
5 ವರ್ಷ ಲವರ್​ನನ್ನು ಸಾಕಿ ಮದುವೆಯಾದಳು! ಆದ್ರೆ ಆತ ಬೇರೊಬ್ಬಳೊಂದಿಗೆ ಪರಾರಿ
5 ವರ್ಷ ಲವರ್​ನನ್ನು ಸಾಕಿ ಮದುವೆಯಾದಳು! ಆದ್ರೆ ಆತ ಬೇರೊಬ್ಬಳೊಂದಿಗೆ ಪರಾರಿ