AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ದಾಖಲೆ ನೀಡಿದ ವಿದ್ಯಾರ್ಥಿಗಳ ಪ್ರವೇಶ ರದ್ದು ಮಾಡಿದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ

ನಕಲಿ ದಾಖಲೆ ನೀಡಿದ ಹಿನ್ನೆಲೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು 51 ವಿದ್ಯಾರ್ಥಿಗಳ ಪ್ರವೇಶವನ್ನು ರದ್ದುಮಾಡಿದೆ.

ನಕಲಿ ದಾಖಲೆ ನೀಡಿದ ವಿದ್ಯಾರ್ಥಿಗಳ ಪ್ರವೇಶ ರದ್ದು ಮಾಡಿದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ
ವಿವೇಕ ಬಿರಾದಾರ
|

Updated on: May 17, 2023 | 8:16 AM

Share

ಬೆಂಗಳೂರು: ನಕಲಿ ದಾಖಲೆ ನೀಡಿದ ಹಿನ್ನೆಲೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು (Visvesvaraya Technological University) 51 ವಿದ್ಯಾರ್ಥಿಗಳ (Students) ಪ್ರವೇಶವನ್ನು ರದ್ದುಮಾಡಿದೆ. ವಿದ್ಯಾರ್ಥಿಗಳು ಎಂಜಿನಿಯರಿಂಗ್ (Engineering) ಕೋರ್ಸ್‌ಗೆ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (NIOS) ಪ್ರಮಾಣಪತ್ರಗಳನ್ನು ನೀಡಿದ್ದಾರೆ. ಆದರೆ ಈ ದಾಖಲೆಗಳು ನಕಲಿ ಎಂದು ಕಂಡುಬಂದ ಹಿನ್ನೆಲೆ ವಿಶ್ವವಿದ್ಯಾಲಯ ಅವರ ಪ್ರವೇಶವನ್ನು ರದ್ದುಮಾಡಿದೆ.

ಆಘಾತಕಾರಿ ಸಂಗತಿಯೆಂದರೆ, ಪ್ರವೇಶ ಅನುಮೋದನೆ ಪ್ರಕ್ರಿಯೆಯಲ್ಲಿ ರಾಜ್ಯ ಸರ್ಕಾರ (ತಾಂತ್ರಿಕ ಶಿಕ್ಷಣ ಇಲಾಖೆ) ಈ ವಿದ್ಯಾರ್ಥಿಗಳ ಪ್ರವೇಶಕ್ಕೆ ಅನುಮೋದನೆ ನೀಡಿತ್ತು. ಆದರೆ ವಿಟಿಯು ವಿದ್ಯಾರ್ಥಿಗಳಿಗೆ ಕಾಲೇಜುವಾರು ಅನುಮೋದನೆ ನೀಡುವಾಗ ನಕಲಿ ಪ್ರಮಾಣ ಪತ್ರಗಳನ್ನು ಪತ್ತೆ ಮಾಡಿದೆ.  ಇದರ ಹಿಂದೆ ದೊಡ್ಡ ಹಗರಣ ನಡೆದಿದೆ ಎಂದು ಶಂಕಿಸಲಾಗಿದ್ದು, ಹಿಂದಿನ ದಾಖಲಾತಿಗಳ ಬಗ್ಗೆಯೂ ತನಿಖೆ ನಡೆಸುತ್ತೇವೆ ಎಂದು ವಿಟಿಯು ಉಪಕುಲಪತಿ ಎಸ್ ವಿದ್ಯಾಶಂಕರ್ ತಿಳಿಸಿದ್ದಾರೆ.

ಕಳೆದ ಐದು ವರ್ಷಗಳಲ್ಲಿ NIOS ಪ್ರಮಾಣಪತ್ರಗಳ ಆಧಾರದ ಮೇಲೆ ವಿಟಿಯು ಅನೇಕ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುತ್ತಿದ್ದು, ಈ ಅವರ ದಾಖಲೆಗಳನ್ನು ಮರುಪರಿಶೀಲಿಸಲಿದೆ. ಈ ಕುರಿತು ವಿಟಿಯು ರಾಜ್ಯ ಸರ್ಕಾರ ಮತ್ತು ಎನ್‌ಐಒಎಸ್‌ಗೂ ಪತ್ರ ಬರೆಯಲಿದೆ.

ಇದನ್ನೂ ಓದಿ:  94.8% ಪಡೆದ ಸೆರೆಬ್ರಲ್ ಪಾಲ್ಸಿ ಹೊಂದಿರುವ ವಸಂತ ವ್ಯಾಲಿ ಶಾಲೆಯ ವಿದ್ಯಾರ್ಥಿನಿ; ಇದೊಂದು ಸ್ಪೂರ್ತಿ ಕಥೆ!

ವಿಟಿಯು ಅಧಿಕಾರಿಗಳ ಪ್ರಕಾರ, ದಾಖಲೆಗಳ ಪರಿಶೀಲನೆ ಪ್ರಕ್ರಿಯೆ ವೇಳೆ ಎನ್​ಐಒಎಸ್​​ ನೀಡಿದ 12 ನೇ ತರಗತಿಯ ಮಾರ್ಕ್ಸ್​​ಕಾರ್ಡ್‌ಗಳನ್ನು QR ಕೋಡ್ ಮೂಲಕ ಸ್ಕ್ಯಾನ್ ಮಾಡಿದಾಗ, ವಿದ್ಯಾರ್ಥಿಗಳು ಎನ್​ಐಒಎಸ್​​​ನ ನಕಲಿ ವೆಬ್‌ಸೈಟ್‌ ಮೂಲಕ ಅಂಕಪಟ್ಟಿ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ವಿದ್ಯಾರ್ಥಿಗಳು ಮ್ಯಾನೇಜ್‌ಮೆಂಟ್ ಕೋಟಾದಡಿಯಲ್ಲಿ ಸೀಟುಗಳನ್ನು ಪಡೆದಿದ್ದು, ಅವರಲ್ಲಿ ಹೆಚ್ಚಿನವರು ತುಮಕೂರು ಮತ್ತು ಚಿಕ್ಕಬಳ್ಳಾಪುರದಲ್ಲಿ ಬೆಂಗಳೂರಿನ ಉನ್ನತ ಕಾಲೇಜುಗಳಿಗೆ ಪ್ರವೇಶ ಪಡೆದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್