AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿಯಿಂದ ಒಕ್ಕಲಿಗರ ಸಂಘದ ಜಾಗ ಒತ್ತುವರಿಗೆ ಯತ್ನ: ಸಂಘದಿಂದ ಉಗ್ರ ಹೋರಾಟದ ಎಚ್ಚರಿಕೆ

ರಾಜ್ಯ ಒಕ್ಕಲಿಗರ ಸಂಘಕ್ಕೆ ಮೀಸಲಿಟ್ಟ ಜಾಗವನ್ನು ಬಿಬಿಎಂಪಿಯಿಂದ ಒತ್ತುವರಿ ಯತ್ನಿಸಿದೆ ಎಂದು ಆರೋಪಿಸಿ ಒಕ್ಕಲಿಗರ ಸಂಘ ಬಿಬಿಎಂಪಿ ಅಧಿಕಾರಿಗಳ ವಿರುದ್ದ ಪ್ರತಿಭಟನೆ ಮಾಡುತ್ತಿದೆ.

ಬಿಬಿಎಂಪಿಯಿಂದ ಒಕ್ಕಲಿಗರ ಸಂಘದ ಜಾಗ ಒತ್ತುವರಿಗೆ ಯತ್ನ: ಸಂಘದಿಂದ ಉಗ್ರ ಹೋರಾಟದ ಎಚ್ಚರಿಕೆ
ಒತ್ತುವರಿ ಮಾಡಿಕೊಳ್ಳಲು ಯತ್ನಿಸಿದ ಜಾಗ
TV9 Web
| Edited By: ವಿವೇಕ ಬಿರಾದಾರ|

Updated on:Oct 03, 2022 | 5:16 PM

Share

ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘಕ್ಕೆ (vokkaligara sangha) ಮೀಸಲಿಟ್ಟ ಜಾಗವನ್ನು ಬಿಬಿಎಂಪಿಯಿಂದ (BBMP) ಒತ್ತುವರಿ ಯತ್ನಿಸಿದೆ ಎಂದು ಆರೋಪಿಸಿ ಒಕ್ಕಲಿಗರ ಸಂಘ ಬಿಬಿಎಂಪಿ ಅಧಿಕಾರಿಗಳ ವಿರುದ್ದ ಪ್ರತಿಭಟನೆ ಮಾಡುತ್ತಿದೆ. 2006 ರಲ್ಲಿ ಹೆಚ್​. ಡಿ ಕುಮಾರಸ್ವಾಮಿಯವರು ಒಕ್ಕಲಿಗರ ಸಂಘಕ್ಕೆ ಬನಶಂಕರಿಯ ಮೂರನೇ ಹಂತದಲ್ಲಿರುವ ಭವಾನಿ ಬಡಾವಣೆಯಲ್ಲಿರುವ 22 ಕುಂಟೆ ಜಾಗವನ್ನು ಗುತ್ತಿಗೆ ಆಧಾರದಲ್ಲಿ ನೀಡಿದ್ದರು. ಈ ಜಾಗದಲ್ಲಿ ಹೆಣ್ಣು ಮಕ್ಕಳಿಗೆ ಉಚಿತ ಹಾಸ್ಟೆಲ್ ಕಟ್ಟುವ ಸಲುವಾಗಿ ಜಾಗವನ್ನ ಮೀಸಲಿಟ್ಟಿದ್ದವಿ. ಆದರೆ ಈಗ ರಾತ್ರೋ ರಾತ್ರಿ ಬಿಬಿಎಂಪಿ ಅಧಿಕಾರಿಗಳು ಬಂದು ಒತ್ತುವರಿ ಮಾಡಿಕೊಳ್ಳುವ ಯತ್ನ ಮಾಡಿದ್ದಾರೆ ಎಂದು ರಾಜ್ಯ ಒಕ್ಕಲಿಗರ ಸಂಘದ ಕಾರ್ಯದರ್ಶಿ ಕೋನಪ್ಪ ರೆಡ್ಡಿ ಹೇಳಿದ್ದಾರೆ.

ರಾಜ್ಯ ಸರ್ಕಾರ ನಮ್ಮ ಜಾಗದ ವಿಚಾರಕ್ಕೆ ಬರಬಾರದು. ಇದನ್ನು ಇಲ್ಲಿಗೆ ನಿಲ್ಲಿಸ ಬೇಕು. ಹೀಗೆ ಸರ್ಕಾರ ಜಾಗವನ್ನ ಕಬಳಿಸೋ‌ ಕೆಲಸಕ್ಕೆ ಮುಂದಾದರೇ ಉಗ್ರ ಹೋರಾಟ ಮಾಡಬೇಕಾಗುತ್ತೆ. ವಿಧಾನಸೌಧದ ಮುಂದೆ ಪ್ರತಿಭಟನೆ ಮಾಡಬೇಕಾಗುತ್ತೆ. ಇದು ಸಂಘಕ್ಕೆ ಸೇರಿದ ಜಾಗ. ಈ‌ ಹಿಂದೆಯೂ ನಮ್ಮ ಶ್ರೀಗಂಧ ಕಾವಲು ಜಾಗವನ್ನು ಕಬಳಿಸಲು ಸರ್ಕಾರ ಮುಂದಾಗಿತ್ತು. ಆಗ ನಾವೂ ಹೋರಾಟ ಮಾಡಿ ಬಿಡಿಸಿಕೊಂಡಿದ್ದೇವೆ ಎಂದು ತಿಳಿಸಿದರು.

ಈಗ ಈ ಜಾಗಕ್ಕೆ‌ ಸರ್ಕಾರ ಕಣ್ಣು ಹಾಕಿದೆ. ಕೋರ್ಟ್​​ನಲ್ಲಿ ಕೇಸ್ ಹಾಕುತ್ತೇವೆ. ಸದ್ಯ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೋಲಿಸ್ ಠಾಣೆಗೆ ದೂರು ನೀಡಿದ್ದೇವೆ. ಅಧಿಕಾರಿಗಳ ವಿರುದ್ದ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಕೋನಪ್ಪ ರೆಡ್ಡಿ ಒತ್ತಾಯಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:14 pm, Mon, 3 October 22

Follow Us
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ