AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ವೆಸ್ಟ್ ಕರ್ನಾಟಕ: ವೋಲ್ವೋ ಕಂಪನಿಯಿಂದ 1,400 ಕೋಟಿ ರೂ ಹೂಡಿಕೆ, ಸಿಎಂ ಸಮ್ಮುಖದಲ್ಲಿ ಒಡಂಬಡಿಕೆಗೆ ಸಹಿ

ವೋಲ್ವೋ ಕಂಪನಿಯು ಕರ್ನಾಟಕದ ಹೊಸಕೋಟೆಯಲ್ಲಿರುವ ತನ್ನ ತಯಾರಿಕಾ ಘಟಕವನ್ನು ವಿಸ್ತರಿಸಲು 1,400 ಕೋಟಿ ರೂಪಾಯಿಗಳನ್ನು ಹೂಡಿಕೆ ಮಾಡಲಿದೆ. ಈ ವಿಸ್ತರಣೆಯಿಂದ ವಾರ್ಷಿಕವಾಗಿ 20,000 ಬಸ್ ಮತ್ತು ಟ್ರಕ್‌ಗಳನ್ನು ಉತ್ಪಾದಿಸಲು ಸಾಧ್ಯವಾಗಲಿದೆ ಮತ್ತು ಹೆಚ್ಚಿನ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ. ಸಿಎಂ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.

ಇನ್ವೆಸ್ಟ್ ಕರ್ನಾಟಕ: ವೋಲ್ವೋ ಕಂಪನಿಯಿಂದ 1,400 ಕೋಟಿ ರೂ ಹೂಡಿಕೆ, ಸಿಎಂ ಸಮ್ಮುಖದಲ್ಲಿ ಒಡಂಬಡಿಕೆಗೆ ಸಹಿ
ಇನ್ವೆಸ್ಟ್ ಕರ್ನಾಟಕ: ವೋಲ್ವೋ ಕಂಪನಿಯಿಂದ 1,400 ಕೋಟಿ ರೂ ಹೂಡಿಕೆ, ಸಿಎಂ ಸಮ್ಮುಖದಲ್ಲಿ ಒಡಂಬಡಿಕೆಗೆ ಸಹಿ
Anil Kalkere
| Edited By: |

Updated on: Feb 13, 2025 | 3:55 PM

Share

ಬೆಂಗಳೂರು, ಫೆಬ್ರವರಿ 13: ರಾಜ್ಯಕ್ಕೆ ಬಂಡವಾಳ ಹರಿವು ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಇನ್ವೆಸ್ಟ್ ಕರ್ನಾಟಕ (Invest Karnataka) ಸಮಾವೇಶ ಆಯೋಜಿಸಿದೆ. ಈಗಾಗಲೇ ಉತ್ತಮ ಪ್ರತಿಕ್ರಿಯೆ ಕೂಡ ಲಭ್ಯವಾಗಿದೆ. ಸದ್ಯ ಇನ್ವೆಸ್ಟ್ ಕರ್ನಾಟಕಲ್ಲಿ ಬಸ್ ಮತ್ತು ಟ್ರಕ್ ತಯಾರಿಕೆಗೆ ಹೆಸರಾಗಿರುವ ಸ್ವೀಡನ್​​ ಮೂಲದ ವೋಲ್ವೋ ಕಂಪನಿ 1,400 ಕೋಟಿ ರೂ. ಬಂಡವಾಳ ಹೂಡಿಕೆ ಮಾಡುವುದಾಗಿ ಘೋಷಣೆ ಮಾಡಿದೆ.

ಹೊಸಕೋಟೆಯಲ್ಲಿರುವ ತನ್ನ ತಯಾರಿಕಾ ಸ್ಥಾವರವನ್ನು ವಿಸ್ತರಿಸಲು ತೀರ್ಮಾನ ಮಾಡಿದೆ. ಆ ನಿಟ್ಟಿನಲ್ಲಿ 1,400 ಕೋಟಿ ರೂ. ಹೂಡಿಕೆ ಮಾಡಿದ್ದು, ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಒಡಂಬಡಿಕೆಗೆ ಅಂಕಿತ ಹಾಕಿದೆ. ಈ ವೇಳೆ ಬೃಹತ್ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್, ಸಿಎಂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ ಅತೀಕ್ ಮತ್ತು ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

ಇದನ್ನೂ ಓದಿ: Invest Karnataka: ಜಿಂದಾಲ್ ಗ್ರೂಪ್​ಗೆ ‘ದಶಕದ ಹೂಡಿಕೆದಾರ’ ಪ್ರಶಸ್ತಿ ಕೊಟ್ಟ ಕರ್ನಾಟಕ ಸರ್ಕಾರ

ಒಡಂಬಡಿಕೆಗೆ ಸರ್ಕಾರ ಪರವಾಗಿ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ವೋಲ್ವೋ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಕಮಲ್ ಬಾಲಿ ಸಹಿ ಹಾಕಿದ್ದಾರೆ. ಇಲ್ಲಿನ ಅರಮನೆ ಆವರಣದಲ್ಲಿ ನಡೆಯತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ವೋಲ್ವೋ ಸಂಸ್ಥೆ ಸಕ್ರಿಯವಾಗಿದೆ. ಅದರ ಭಾಗವಾಗಿ ಈ ಪ್ರಮುಖ ಒಪ್ಪಂದಕ್ಕೆ ಸಹಿ ಹಾಕಿದೆ.

ವೋಲ್ವೋ ಕಂಪನಿ ಕನ್ನಡಿಗರಿಗೆ ಕೆಲಸ ಕೊಡಬೇಕು: ಸಿಎಂ

ಒಡಂಬಡಿಕೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ವೋಲ್ವೋ ಕಂಪನಿಯು 25 ವರ್ಷಗಳ ಹಿಂದೆಯೇ ರಾಜ್ಯಕ್ಕೆ ಬಂದು, ಬಂಡವಾಳ ಹೂಡಿ, ಬದಲಾವಣೆಗೆ ನಾಂದಿ ಹಾಡಿತ್ತು. ಈಗ ನಮ್ಮಲ್ಲಿ ವೋಲ್ವೋ ಎನ್ನುವುದು ಉತ್ಕೃಷ್ಟ ಗುಣಮಟ್ಟದ ಬಸ್ಸುಗಳಿಗೆ ಇನ್ನೊಂದು ಹೆಸರಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಮೆರಿಕದ ಚಿಪ್​ಟೂಲ್ ತಯಾರಿಸುವ ಲ್ಯಾಮ್ ರಿಸರ್ಚ್​ನಿಂದ 10,000 ಕೋಟಿ ರೂ ಹೂಡಿಕೆ; ಇನ್ವೆಸ್ಟ್ ಕರ್ನಾಟಕಕ್ಕೆ ಉದ್ಯಮವಲಯದಿಂದ ನಿರೀಕ್ಷೆಮೀರಿ ಸ್ಪಂದನೆ

ರಾಜ್ಯ ಸಾರಿಗೆ ನಿಗಮದ ಐಷಾರಾಮಿ ಬಸ್ಸುಗಳನ್ನು ಕೂಡ ಜನ ಇದೇ ಹೆಸರಿನಿಂದ ಕರೆಯುತ್ತಿದ್ದಾರೆ. ವೋಲ್ವೋ ಕಂಪನಿಗೆ ಸರಕಾರ ಅಗತ್ಯ ಸೌಲಭ್ಯ ಮತ್ತು ನೆರವು ಒದಗಿಸಲಿದೆ. ಕಂಪನಿಯು ತನ್ನಲ್ಲಿ ಹೆಚ್ಚಿನ ಕನ್ನಡಿಗರಿಗೆ ಕೆಲಸ ಕೊಡಬೇಕು. ಇದರಿಂದ ಸ್ಥಳೀಯರಿಗೆ ಭದ್ರತೆ ಮತ್ತು ಆರ್ಥಿಕ ಬೆಳವಣಿಗೆ ಎರಡನ್ನೂ ಸಾಧಿಸಬಹುದು ಎಂದಿದ್ದಾರೆ.

ವೋಲ್ವೋ ಸಿಇಒ ಹೇಳಿದ್ದಿಷ್ಟು

ವೋಲ್ವೋ ಸಿಇಒ ಮಾರ್ಟಿನ್ ಲುಂಡ್ಸ್ಟೆಡ್ ಮಾತನಾಡಿ, ಕರ್ನಾಟಕದಲ್ಲಿ ವೋಲ್ವೋ ಕಂಪನಿ ಪೀಣ್ಯ, ಹೊಸಕೋಟೆ ಮತ್ತು ಧಾರವಾಡ ಸಮೀಪದ ಪೀತಂಪುರದಲ್ಲಿ ತಯಾರಿಕಾ ಘಟಕಗಳನ್ನು ಹೊಂದಿದೆ. ಈಗ ನಾವು ವರ್ಷಕ್ಕೆ ಇಲ್ಲಿ 3,000 ಬಸ್, ಟ್ರಕ್ ತಯಾರಿಸುತ್ತಿದ್ದೇವೆ. ಹೊಸಕೋಟೆ ಸ್ಥಾವರದ ವಿಸ್ತರಣೆಯಿಂದ ನಾವು ವರ್ಷಕ್ಕೆ 20 ಸಾವಿರ ಬಸ್, ಟ್ರಕ್ ತಯಾರಿಸಬಹುದು. ಈ ಸಾಮರ್ಥ್ಯ ವೃದ್ಧಿಯಿಂದ ಉದ್ಯೋಗ ಸೃಷ್ಟಿಯೂ ಆಗಲಿದ್ದು, ಜಾಗತಿಕ ಪೂರೈಕೆ ಸರಪಳಿಯಲ್ಲಿ ಭಾರತ ಮತ್ತು ಕರ್ನಾಟಕದ ಸ್ಥಾನ ಮತ್ತಷ್ಟು ಸುಭದ್ರವಾಗಲಿದೆ. ಬೆಂಗಳೂರು ವೋಲ್ವೋ ಕಂಪನಿಯ ಪಾಲಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ 4ನೇ ಅತಿದೊಡ್ಡ ತಾಣವಾಗಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ