AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೋಟರ್​ ಐಡಿ ಪರಿಷ್ಕರಣೆಯಲ್ಲಿ ಅಕ್ರಮ: ಬಿಬಿಎಂಪಿ ಮಾಜಿ ಕಾರ್ಪೊರೇಟರ್​ ತಾಯಿ ಹೆಸರೇ ಡಿಲೀಟ್​

ಮಹದೇವಪುರ ಕ್ಷೇತ್ರದ ಹಗದೂರು ವಾರ್ಡ್​​ನ ಮಾಜಿ ಕಾರ್ಪೋರೆಟರ್ ಉದಯ್ ಕುಮಾರ್ ಅವರ ತಾಯಿಯ ಹೆಸರು ವೋಟರ್ ಐಡಿ ಲಿಸ್ಟ್​​ನಿಂದ ತೆಗೆದು ಹಾಕಲಾಗಿದೆ.

ವೋಟರ್​ ಐಡಿ ಪರಿಷ್ಕರಣೆಯಲ್ಲಿ ಅಕ್ರಮ: ಬಿಬಿಎಂಪಿ ಮಾಜಿ ಕಾರ್ಪೊರೇಟರ್​ ತಾಯಿ ಹೆಸರೇ ಡಿಲೀಟ್​
ಸಾಂಧರ್ಬಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on: Dec 07, 2022 | 5:27 PM

ಬೆಂಗಳೂರು: ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ (Mahadevapura Assembly constituency) ವೋಟರ್​ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪ ಕೇಳಿಬಂದಿದೆ. ಇದಕ್ಕೆ ಪುಷ್ಠಿ ನೀಡುವಂತೆ ಮಹದೇವಪುರ ಕ್ಷೇತ್ರದ ಹಗದೂರು ವಾರ್ಡ್​​ನ ಮಾಜಿ ಕಾರ್ಪೋರೆಟರ್ ಉದಯ್ ಕುಮಾರ್ ಅವರ ತಾಯಿಯ ಹೆಸರು ವೋಟರ್ ಐಡಿ ಲಿಸ್ಟ್​​ನಿಂದ ತೆಗೆದು ಹಾಕಲಾಗಿದೆ. ವಿಮಲಾಕ್ಷಿ (72) ಅವರ ಹೆಸರು ಮತದಾರರ ಪಟ್ಟಿಯಿಂದ ಡಿಲೀಟ್​ ಆಗಿದೆ.

ತಮ್ಮ ತಾಯಿಯ ಹೆಸರು ಡಿಲೀಟ್ ಆಗಿರುವ ಬಗ್ಗೆ ಚುನಾವಣಾ ಆಯೋಗ ಮತ್ತು ಬಿಬಿಎಂಪಿಗೆ ಮಾಜಿ ಕಾರ್ಪೋರೆಟರ್ ಉದಯ್ ಕುಮಾರ್ ದೂರು ನೀಡಿದ್ದಾರೆ. ಮತ್ತೊಮ್ಮೆ ಅರ್ಜಿ‌ ಸಲ್ಲಿಸಿದರೆ ಸೇರ್ಪಡೆ ಮಾಡುವುದಾಗಿ ಬಿಬಿಎಂಪಿ ಉತ್ತರ ನೀಡಿದೆ.

ಇದನ್ನೂ ಓದಿ: ಆರ್​. ಆರ್​ ನಗರದಲ್ಲಿ ಕಾಂಗ್ರೆಸ್​ ಬೆಂಬಲಿತ, ಒಕ್ಕಲಿಗ ಮತದಾರರ ಹೆಸರು ಡಿಲೀಟ್: ಚುನಾವಣಾ ಆಯೋಗಕ್ಕೆ ಡಿಕೆ ಸುರೇಶ್ ದೂರು

ಪ್ರಕರಣದ ತನಿಖಾ ಪ್ರಗತಿ ವರದಿ ನಿಡುವಂತೆ ಸರ್ಕಾರಕ್ಕೆ ಹೈಕೋರ್ಟ್​ ಸೂಚನೆ

ನಗರದಲ್ಲಿ ನಡೆದ ಚಿಲುಮೆ ಸಂಸ್ಥೆಯಿಂದ‌ ಮತದಾರ ಮಾಹಿತಿ ಸಂಗ್ರಹ ಪ್ರಕರಣದಲ್ಲಿ (Voter ID Scam) ಭಾಗಿಯಾಗಿದ್ದಾರೆಂದು ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಯಾಗಿದ್ದ ನಗರದ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಅವರನ್ನು ಕೇಂದ್ರ ಚುನಾವಣೆ ಆಯೋಗ ಅಮಾನತು ಮಾಡಿತ್ತು. ಈ ಅಮಾನತನ್ನು ಪ್ರಶ್ನಿಸಿ ಕೆ. ಶ್ರೀನಿವಾಸ್ ಸಲ್ಲಿಸಿದ್ದ ಹೈಕೋರ್ಟ್​​ಗೆ (High court) ಅರ್ಜಿ ಸಲ್ಲಿಸಿದ್ದರು. ಇಂದು (ಡಿ.7) ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​ ವಿಭಾಗೀಯ ಪೀಠ​, ಸರ್ಕಾರಕ್ಕೆ ತನಿಖಾ ಪ್ರಗತಿ ಬಗ್ಗೆ ಮಾಹಿತಿ ನೀಡಲು ಸೂಚಿಸಿದೆ. ಜೊತೆಗೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಸ್ಥಾನಪಲ್ಲಟ ಮಾಡದಂತೆ ಎಚ್ಚರಿಸಿದೆ. ಪ್ರತ್ಯೇಕ ಎಡಿಇಒ ನೇಮಕಕ್ಕೆ ಚುನಾವಣಾ ಆಯೋಗಕ್ಕೆ ಸ್ವಾತಂತ್ಯ್ರವಿದೆ ಎಂದು ಅಭಿಪ್ರಾಯ ಪಟ್ಟು, ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ