AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೋಟರ್​ ಐಡಿ ಹಗರಣ: ಮತದಾರರ ಮಾಹಿತಿ ಸಂಗ್ರಹಿಸಲು ಬಿಎಲ್​ಒಗಳಿಗೆ ಹಣ ನೀಡುತ್ತಿದ್ದ ಚಿಲುಮೆ ಸಂಸ್ಥೆ

ಚಿಲುಮೆ ಸಂಸ್ಥೆ ಸರ್ಕಾರಿ ಸಂಸ್ಥೆಗಳ ಬಿಎಲ್​ಒಗಳಿಗೂ ಹಣ ಪಾವತಿಸಿ, ಮತದಾರರ ಮಾಹಿತಿ ಸಂಗ್ರಹಿಸಿತ್ತು ಎಂಬ ಆರೋಪ ಕೇಳಿಬಂದಿದೆ.

ವೋಟರ್​ ಐಡಿ ಹಗರಣ: ಮತದಾರರ ಮಾಹಿತಿ ಸಂಗ್ರಹಿಸಲು ಬಿಎಲ್​ಒಗಳಿಗೆ ಹಣ ನೀಡುತ್ತಿದ್ದ ಚಿಲುಮೆ ಸಂಸ್ಥೆ
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on:Nov 22, 2022 | 9:37 AM

Share

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ವೋಟರ್​ ಐಡಿ ಪರಿಷ್ಕರಣೆಯಲ್ಲಿನ ಅಕ್ರಮ (Bengaluru Voter list refinement Scam) ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೋಟಕ ಮಾಹಿತಿಯೊಂದು ಬಹಿರಂಗಗೊಂಡಿದೆ. ಚಿಲುಮೆ ಸಂಸ್ಥೆ ಸರ್ಕಾರಿ ಸಂಸ್ಥೆಗಳ ಬಿಎಲ್​ಒ (BLO) ಗಳಿಗೂ ಹಣ ಪಾವತಿಸಿ, ಮತದಾರರ ಮಾಹಿತಿ ಸಂಗ್ರಹಿಸಿತ್ತು ಎಂಬ ಆರೋಪ ಕೇಳಿಬಂದಿದೆ. ಚಿಲುಮೆ ಸಂಸ್ಥೆಗೆ ಮತದಾರರಿಗೆ ಅರಿವು ಮೂಡಿಸಲು ಮಾತ್ರ ಅನುಮತಿ ನೀಡಲಾಗಿತ್ತು. ಈ ಕೆಲಸವನ್ನು ಉಚಿತವಾಗಿ ಮಾಡಿಕೊಡುವುದಾಗಿ ಒಪ್ಪಿಕೊಂಡಿತ್ತು.

ಆದರೆ ಇದೀಗ ಚಿಲುಮೆ ಸಂಸ್ಥೆ ಬಿಎಲ್​ಒಗಳಿಗೆ ಹಣ ನೀಡಿ ಮಾಹಿತಿ ಸಂಗ್ರಹಿಸಿತ್ತು ಎಂಬ ಆರೋಪ ಕೇಳಿಬಂದಿದೆ. ಮತದಾರರ ಮಾಹಿತಿ ಸಂಗ್ರಹಣೆಗೆ 1 ವೋಟರ್​ ಐಡಿಗೆ 25 ರೂ. ಹೊಸ ವೋಟರ್​ ಐಡಿ ಮಾಹಿತಿ ನೀಡಿದರೆ 13 ರೂಪಾಯಿ ನಿಗದಿ ಮಾಡಲಾಗಿತ್ತು ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಸರ್ಕಾರದಿಂದ ಬಿಎಲ್​ಒಗಳಿಗೆ ವಾರ್ಷಿಕ 6 ಸಾವಿರ ಗೌರವಧನ ನೀಡಲಾಗುತ್ತದೆ. ಹೀಗಾಗಿ ಇದರಿಂದ ಅಸಮಾಧಾನಗೊಂಡಿದ್ದರು. ಹಾಗೇ ಬಿಎಲ್​ಒಗಳು ಫೀಲ್ಡ್​ಗೆ ಬಾರದಂತೆ ಚಿಲುಮೆ ಸಂಸ್ಥೆ ಬಿಎಲ್​ಒಗಳಿಗೆ ಸೂಚಿಸಿತ್ತು.

ಇಷ್ಟೇ ಅಲ್ಲದೇ ಚಿಲುಮೆ ಬಿಎಲ್​​ಒಗಳ ಯೂಸರ್ ನೇಮ್, ಪಾಸ್​ವರ್ಡ್​ ಪಡೆದಿತ್ತು. ಇದರಿಂದ ಮತದಾರರ ಐಡಿ ಡಿಲೀಟ್​​, ಹೊಸ ಮತದಾರರನ್ನು ಸೇರ್ಪಡೆ ಮಾಡುತ್ತಿತ್ತು. ಚಿಲುಮೆ ಸಂಸ್ಥೆ ಮತದಾರನ ಹೆಸರು, ವೋಟರ್​ ಐಡಿ ನಂಬರ್​, ಮನೆ ನಂಬರ್​, ಬೂತ್​ ನಂಬರ್ ಸೇರಿ ಎಲ್ಲಾ ಮಾಹಿತಿ ಸಂಗ್ರಹಿಸುತ್ತಿತ್ತು.

ಕೊನೆಗೂ ಸಮೀಕ್ಷಾ ಆ್ಯಪ್​ ಓಪನ್ ಮಾಡಿದ ಟೆಕ್ನಿಕಲ್​ ಟೀಂ

ಮತದಾರರ ಮಾಹಿತಿ ಸಂಗ್ರಹಿಸಲು, ಬಳಸಾಲಾಗಿದ್ದ ಡಿಜಿಟಲ್ ಸಮೀಕ್ಷಾ ಆ್ಯಪ್​ನ್ನು ಸರ್ಕಾರಿ ಟೆಕ್ನಿಕಲ್​ ಟೀಂ ಓಪನ್​ ಮಾಡಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಆರೋಪಿಗಳು ಆ್ಯಪ್​ ಸರ್ವರ್ ​ಡೌನ್​ ಮಾಡಿದ್ದರು. ಸದ್ಯ ಆ್ಯಪ್​ ಓಪನ್ ಆಗಿದ್ದು, ಆ್ಯಪ್​ನಲ್ಲಿದ್ದ ಪ್ರತಿ ಅಂಶವನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ. ಇನ್ನು ಆ್ಯಪ್​ನಲ್ಲಿ ಹಲವು ಕ್ಷೇತ್ರಗಳ ಮತದಾರರ ಮಾಹಿತಿ ಇರುವುದು ಪತ್ತೆಯಾಗಿದೆ. ಸದ್ಯ ಪೊಲೀಸರು ಪ್ರಕರಣದ ರವಿಕುಮಾರ್​ನನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:34 am, Tue, 22 November 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ