AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೋಟರ್​ ಐಡಿ ಹಗರಣ: ಮತದಾರರ ಮಾಹಿತಿ ಸಂಗ್ರಹಿಸಲು ಬಿಎಲ್​ಒಗಳಿಗೆ ಹಣ ನೀಡುತ್ತಿದ್ದ ಚಿಲುಮೆ ಸಂಸ್ಥೆ

ಚಿಲುಮೆ ಸಂಸ್ಥೆ ಸರ್ಕಾರಿ ಸಂಸ್ಥೆಗಳ ಬಿಎಲ್​ಒಗಳಿಗೂ ಹಣ ಪಾವತಿಸಿ, ಮತದಾರರ ಮಾಹಿತಿ ಸಂಗ್ರಹಿಸಿತ್ತು ಎಂಬ ಆರೋಪ ಕೇಳಿಬಂದಿದೆ.

ವೋಟರ್​ ಐಡಿ ಹಗರಣ: ಮತದಾರರ ಮಾಹಿತಿ ಸಂಗ್ರಹಿಸಲು ಬಿಎಲ್​ಒಗಳಿಗೆ ಹಣ ನೀಡುತ್ತಿದ್ದ ಚಿಲುಮೆ ಸಂಸ್ಥೆ
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on:Nov 22, 2022 | 9:37 AM

Share

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ವೋಟರ್​ ಐಡಿ ಪರಿಷ್ಕರಣೆಯಲ್ಲಿನ ಅಕ್ರಮ (Bengaluru Voter list refinement Scam) ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೋಟಕ ಮಾಹಿತಿಯೊಂದು ಬಹಿರಂಗಗೊಂಡಿದೆ. ಚಿಲುಮೆ ಸಂಸ್ಥೆ ಸರ್ಕಾರಿ ಸಂಸ್ಥೆಗಳ ಬಿಎಲ್​ಒ (BLO) ಗಳಿಗೂ ಹಣ ಪಾವತಿಸಿ, ಮತದಾರರ ಮಾಹಿತಿ ಸಂಗ್ರಹಿಸಿತ್ತು ಎಂಬ ಆರೋಪ ಕೇಳಿಬಂದಿದೆ. ಚಿಲುಮೆ ಸಂಸ್ಥೆಗೆ ಮತದಾರರಿಗೆ ಅರಿವು ಮೂಡಿಸಲು ಮಾತ್ರ ಅನುಮತಿ ನೀಡಲಾಗಿತ್ತು. ಈ ಕೆಲಸವನ್ನು ಉಚಿತವಾಗಿ ಮಾಡಿಕೊಡುವುದಾಗಿ ಒಪ್ಪಿಕೊಂಡಿತ್ತು.

ಆದರೆ ಇದೀಗ ಚಿಲುಮೆ ಸಂಸ್ಥೆ ಬಿಎಲ್​ಒಗಳಿಗೆ ಹಣ ನೀಡಿ ಮಾಹಿತಿ ಸಂಗ್ರಹಿಸಿತ್ತು ಎಂಬ ಆರೋಪ ಕೇಳಿಬಂದಿದೆ. ಮತದಾರರ ಮಾಹಿತಿ ಸಂಗ್ರಹಣೆಗೆ 1 ವೋಟರ್​ ಐಡಿಗೆ 25 ರೂ. ಹೊಸ ವೋಟರ್​ ಐಡಿ ಮಾಹಿತಿ ನೀಡಿದರೆ 13 ರೂಪಾಯಿ ನಿಗದಿ ಮಾಡಲಾಗಿತ್ತು ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಸರ್ಕಾರದಿಂದ ಬಿಎಲ್​ಒಗಳಿಗೆ ವಾರ್ಷಿಕ 6 ಸಾವಿರ ಗೌರವಧನ ನೀಡಲಾಗುತ್ತದೆ. ಹೀಗಾಗಿ ಇದರಿಂದ ಅಸಮಾಧಾನಗೊಂಡಿದ್ದರು. ಹಾಗೇ ಬಿಎಲ್​ಒಗಳು ಫೀಲ್ಡ್​ಗೆ ಬಾರದಂತೆ ಚಿಲುಮೆ ಸಂಸ್ಥೆ ಬಿಎಲ್​ಒಗಳಿಗೆ ಸೂಚಿಸಿತ್ತು.

ಇಷ್ಟೇ ಅಲ್ಲದೇ ಚಿಲುಮೆ ಬಿಎಲ್​​ಒಗಳ ಯೂಸರ್ ನೇಮ್, ಪಾಸ್​ವರ್ಡ್​ ಪಡೆದಿತ್ತು. ಇದರಿಂದ ಮತದಾರರ ಐಡಿ ಡಿಲೀಟ್​​, ಹೊಸ ಮತದಾರರನ್ನು ಸೇರ್ಪಡೆ ಮಾಡುತ್ತಿತ್ತು. ಚಿಲುಮೆ ಸಂಸ್ಥೆ ಮತದಾರನ ಹೆಸರು, ವೋಟರ್​ ಐಡಿ ನಂಬರ್​, ಮನೆ ನಂಬರ್​, ಬೂತ್​ ನಂಬರ್ ಸೇರಿ ಎಲ್ಲಾ ಮಾಹಿತಿ ಸಂಗ್ರಹಿಸುತ್ತಿತ್ತು.

ಕೊನೆಗೂ ಸಮೀಕ್ಷಾ ಆ್ಯಪ್​ ಓಪನ್ ಮಾಡಿದ ಟೆಕ್ನಿಕಲ್​ ಟೀಂ

ಮತದಾರರ ಮಾಹಿತಿ ಸಂಗ್ರಹಿಸಲು, ಬಳಸಾಲಾಗಿದ್ದ ಡಿಜಿಟಲ್ ಸಮೀಕ್ಷಾ ಆ್ಯಪ್​ನ್ನು ಸರ್ಕಾರಿ ಟೆಕ್ನಿಕಲ್​ ಟೀಂ ಓಪನ್​ ಮಾಡಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಆರೋಪಿಗಳು ಆ್ಯಪ್​ ಸರ್ವರ್ ​ಡೌನ್​ ಮಾಡಿದ್ದರು. ಸದ್ಯ ಆ್ಯಪ್​ ಓಪನ್ ಆಗಿದ್ದು, ಆ್ಯಪ್​ನಲ್ಲಿದ್ದ ಪ್ರತಿ ಅಂಶವನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ. ಇನ್ನು ಆ್ಯಪ್​ನಲ್ಲಿ ಹಲವು ಕ್ಷೇತ್ರಗಳ ಮತದಾರರ ಮಾಹಿತಿ ಇರುವುದು ಪತ್ತೆಯಾಗಿದೆ. ಸದ್ಯ ಪೊಲೀಸರು ಪ್ರಕರಣದ ರವಿಕುಮಾರ್​ನನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:34 am, Tue, 22 November 22

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು