AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೋಟರ್​ ಐಡಿ ಹಗರಣ: ಮತದಾರರ ಮಾಹಿತಿ ಸಂಗ್ರಹಿಸಲು ಬಿಎಲ್​ಒಗಳಿಗೆ ಹಣ ನೀಡುತ್ತಿದ್ದ ಚಿಲುಮೆ ಸಂಸ್ಥೆ

ಚಿಲುಮೆ ಸಂಸ್ಥೆ ಸರ್ಕಾರಿ ಸಂಸ್ಥೆಗಳ ಬಿಎಲ್​ಒಗಳಿಗೂ ಹಣ ಪಾವತಿಸಿ, ಮತದಾರರ ಮಾಹಿತಿ ಸಂಗ್ರಹಿಸಿತ್ತು ಎಂಬ ಆರೋಪ ಕೇಳಿಬಂದಿದೆ.

ವೋಟರ್​ ಐಡಿ ಹಗರಣ: ಮತದಾರರ ಮಾಹಿತಿ ಸಂಗ್ರಹಿಸಲು ಬಿಎಲ್​ಒಗಳಿಗೆ ಹಣ ನೀಡುತ್ತಿದ್ದ ಚಿಲುಮೆ ಸಂಸ್ಥೆ
ಸಾಂಧರ್ಬಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on:Nov 22, 2022 | 9:37 AM

Share

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ವೋಟರ್​ ಐಡಿ ಪರಿಷ್ಕರಣೆಯಲ್ಲಿನ ಅಕ್ರಮ (Bengaluru Voter list refinement Scam) ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೋಟಕ ಮಾಹಿತಿಯೊಂದು ಬಹಿರಂಗಗೊಂಡಿದೆ. ಚಿಲುಮೆ ಸಂಸ್ಥೆ ಸರ್ಕಾರಿ ಸಂಸ್ಥೆಗಳ ಬಿಎಲ್​ಒ (BLO) ಗಳಿಗೂ ಹಣ ಪಾವತಿಸಿ, ಮತದಾರರ ಮಾಹಿತಿ ಸಂಗ್ರಹಿಸಿತ್ತು ಎಂಬ ಆರೋಪ ಕೇಳಿಬಂದಿದೆ. ಚಿಲುಮೆ ಸಂಸ್ಥೆಗೆ ಮತದಾರರಿಗೆ ಅರಿವು ಮೂಡಿಸಲು ಮಾತ್ರ ಅನುಮತಿ ನೀಡಲಾಗಿತ್ತು. ಈ ಕೆಲಸವನ್ನು ಉಚಿತವಾಗಿ ಮಾಡಿಕೊಡುವುದಾಗಿ ಒಪ್ಪಿಕೊಂಡಿತ್ತು.

ಆದರೆ ಇದೀಗ ಚಿಲುಮೆ ಸಂಸ್ಥೆ ಬಿಎಲ್​ಒಗಳಿಗೆ ಹಣ ನೀಡಿ ಮಾಹಿತಿ ಸಂಗ್ರಹಿಸಿತ್ತು ಎಂಬ ಆರೋಪ ಕೇಳಿಬಂದಿದೆ. ಮತದಾರರ ಮಾಹಿತಿ ಸಂಗ್ರಹಣೆಗೆ 1 ವೋಟರ್​ ಐಡಿಗೆ 25 ರೂ. ಹೊಸ ವೋಟರ್​ ಐಡಿ ಮಾಹಿತಿ ನೀಡಿದರೆ 13 ರೂಪಾಯಿ ನಿಗದಿ ಮಾಡಲಾಗಿತ್ತು ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಸರ್ಕಾರದಿಂದ ಬಿಎಲ್​ಒಗಳಿಗೆ ವಾರ್ಷಿಕ 6 ಸಾವಿರ ಗೌರವಧನ ನೀಡಲಾಗುತ್ತದೆ. ಹೀಗಾಗಿ ಇದರಿಂದ ಅಸಮಾಧಾನಗೊಂಡಿದ್ದರು. ಹಾಗೇ ಬಿಎಲ್​ಒಗಳು ಫೀಲ್ಡ್​ಗೆ ಬಾರದಂತೆ ಚಿಲುಮೆ ಸಂಸ್ಥೆ ಬಿಎಲ್​ಒಗಳಿಗೆ ಸೂಚಿಸಿತ್ತು.

ಇಷ್ಟೇ ಅಲ್ಲದೇ ಚಿಲುಮೆ ಬಿಎಲ್​​ಒಗಳ ಯೂಸರ್ ನೇಮ್, ಪಾಸ್​ವರ್ಡ್​ ಪಡೆದಿತ್ತು. ಇದರಿಂದ ಮತದಾರರ ಐಡಿ ಡಿಲೀಟ್​​, ಹೊಸ ಮತದಾರರನ್ನು ಸೇರ್ಪಡೆ ಮಾಡುತ್ತಿತ್ತು. ಚಿಲುಮೆ ಸಂಸ್ಥೆ ಮತದಾರನ ಹೆಸರು, ವೋಟರ್​ ಐಡಿ ನಂಬರ್​, ಮನೆ ನಂಬರ್​, ಬೂತ್​ ನಂಬರ್ ಸೇರಿ ಎಲ್ಲಾ ಮಾಹಿತಿ ಸಂಗ್ರಹಿಸುತ್ತಿತ್ತು.

ಕೊನೆಗೂ ಸಮೀಕ್ಷಾ ಆ್ಯಪ್​ ಓಪನ್ ಮಾಡಿದ ಟೆಕ್ನಿಕಲ್​ ಟೀಂ

ಮತದಾರರ ಮಾಹಿತಿ ಸಂಗ್ರಹಿಸಲು, ಬಳಸಾಲಾಗಿದ್ದ ಡಿಜಿಟಲ್ ಸಮೀಕ್ಷಾ ಆ್ಯಪ್​ನ್ನು ಸರ್ಕಾರಿ ಟೆಕ್ನಿಕಲ್​ ಟೀಂ ಓಪನ್​ ಮಾಡಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಆರೋಪಿಗಳು ಆ್ಯಪ್​ ಸರ್ವರ್ ​ಡೌನ್​ ಮಾಡಿದ್ದರು. ಸದ್ಯ ಆ್ಯಪ್​ ಓಪನ್ ಆಗಿದ್ದು, ಆ್ಯಪ್​ನಲ್ಲಿದ್ದ ಪ್ರತಿ ಅಂಶವನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ. ಇನ್ನು ಆ್ಯಪ್​ನಲ್ಲಿ ಹಲವು ಕ್ಷೇತ್ರಗಳ ಮತದಾರರ ಮಾಹಿತಿ ಇರುವುದು ಪತ್ತೆಯಾಗಿದೆ. ಸದ್ಯ ಪೊಲೀಸರು ಪ್ರಕರಣದ ರವಿಕುಮಾರ್​ನನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:34 am, Tue, 22 November 22

Follow Us
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ