AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP Election: ಬೆಂಗಳೂರಿನ ಮತದಾರರ ಸಂಖ್ಯೆ 5 ಲಕ್ಷ ಹೆಚ್ಚಳ, ಬಿಬಿಎಂಪಿ ಚುನಾವಣೆಗೆ ಸಿದ್ಧತೆ ಆರಂಭ

ಬಿಬಿಎಂಪಿಯಲ್ಲಿ 243 ವಾರ್ಡ್​ಗಳಿದ್ದು,, ಪ್ರತಿ ವಾರ್ಡ್​ನಲ್ಲಿ ಸರಾಸರಿ 35ರಿಂದ 40 ಸಾವಿರ ಮತದಾರರಿದ್ದಾರೆ.

BBMP Election: ಬೆಂಗಳೂರಿನ ಮತದಾರರ ಸಂಖ್ಯೆ 5 ಲಕ್ಷ ಹೆಚ್ಚಳ, ಬಿಬಿಎಂಪಿ ಚುನಾವಣೆಗೆ ಸಿದ್ಧತೆ ಆರಂಭ
ಬಿಬಿಎಂಪಿ ಮತ್ತು ಕರ್ನಾಟಕ ಹೈಕೋರ್ಟ್​ (ಸಂಗ್ರಹ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Sep 29, 2022 | 1:43 PM

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (Bruhat Bengaluru Mahanagara Palike – BBMP) ಚುನಾವಣೆಗೆ ಸಿದ್ಧತೆಗಳು ಭರದಿಂದ ಸಾಗಿವೆ. ಚುನಾವಣಾ ಆಯೋಗವು ಸಿದ್ಧತೆ ಆರಂಭಿಸಿದ್ದು, ಮತದಾರರ ಸಂಖ್ಯೆಯನ್ನು ಬಹಿರಂಗಪಡಿಸಿದೆ. 2015ರಲ್ಲಿ ಕಳೆದ ಬಾರಿ ಚುನಾವಣೆ ನಡೆದಿದ್ದಾಗ ಬಿಬಿಎಂಪಿ ವ್ಯಾಪ್ತಿಯಲ್ಲಿ 73,88,256 (73.88 ಲಕ್ಷ) ಮತದಾರರು ಇದ್ದರು. ಈ ಬಾರಿಯ ಅಂದರೆ 2022ರ ಚುನಾವಣೆಯಲ್ಲಿ 79,19,563 (79.19 ಲಕ್ಷ) ಮಂದಿ ಮತದಾನದ ಅರ್ಹತೆ ಪಡೆದಿದ್ದಾರೆ. ಮತದಾರರ ಸಂಖ್ಯೆಯು 5,31,307 (5.31 ಲಕ್ಷ) ಹೆಚ್ಚಾಗಿದೆ. ಬಿಬಿಎಂಪಿಯಲ್ಲಿ 243 ವಾರ್ಡ್​ಗಳಿದ್ದು,, ಪ್ರತಿ ವಾರ್ಡ್​ನಲ್ಲಿ ಸರಾಸರಿ 35ರಿಂದ 40 ಸಾವಿರ ಮತದಾರರಿದ್ದಾರೆ. ಹೈಕೋರ್ಟ್ ಸೂಚನೆಯ ನಂತರ ದಿನಾಂಕ ಘೋಷಿಸಲು ಬಿಬಿಎಂಪಿ ಸಿದ್ಧತೆ ನಡೆಸಿದೆ. ಈಗಾಗಲೇ ಬೂತ್ ಮಟ್ಟದ ಅಧಿಕಾರಿಗಳ ನೇಮಕ, ಹೊಸ ಮತಗಟ್ಟೆಗಳ ಸೇರ್ಪಡೆ ಸೇರಿದಂತೆ ಹಲವು ಚಟುವಟಿಕೆಗಳು ಆರಂಭವಾಗಿವೆ.

ಸರ್ಕಾರದ ನಿಲುವು ಸ್ಪಷ್ಟಪಡಿಸಲು ಹೈಕೋರ್ಟ್ ಸೂಚನೆ

ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ಮೀಸಲಾತಿ ನಿಗದಿ ಹಾಗೂ ಇತರ ವಿಚಾರಗಳ ಬಗ್ಗೆ ಹೈಕೋರ್ಟ್​​ನಲ್ಲಿ ನಿನ್ನೆ (ಸೆ 28) ವಿಚಾರಣೆ ನಡೆಯಿತು. ಚುನಾವಣಾ ಆಯೋಗದ ಪರ ವಾದ ಮಂಡಿಸಿದ ಹಿರಿಯ ವಕೀಲ ಕೆ.ಎನ್‌.ಫಣೀಂದ್ರ, ‘ಬಿಬಿಎಂಪಿ ಅಧಿಕಾರವಧಿ ಪೂರ್ಣಗೊಂಡು ಎರಡು ವರ್ಷಗಳಾಗಿವೆ. ಆಡಳಿತಾಧಿಕಾರಿಯೇ ಆಡಳಿತ ನಿರ್ವಹಿಸುತ್ತಿದ್ದಾರೆ. ಸಂವಿಧಾನದ ಆಶಯದಂತೆ ಶೀಘ್ರ ಚುನಾವಣೆ ನಡೆಯಬೇಕಿದೆ. ಮೀಸಲಾತಿ ಪ್ರಶ್ನೆಯ ಕಾರಣಕ್ಕೆ ಚುನಾವಣೆ ವಿಳಂಬ ಮಾಡುವಂತಿಲ್ಲ. ಶೀಘ್ರ ಚುನಾವಣೆ ನಡೆಸಬೇಕು ಎನ್ನುವುದು ಸುಪ್ರೀಂಕೋರ್ಟ್​ನ ಅಭಿಪ್ರಾಯವೂ ಆಗಿದೆ’ ಎಂದು ಹೇಳಿದರು.

ಮೀಸಲಾತಿ ಮರುನಿಗದಿ ಕೋರಿರುವ ಅರ್ಜಿದಾರರ ಪರ ವಕೀಲರು, ‘ಒಬಿಸಿಗೆ ಸೂಕ್ತ ರೀತಿಯಲ್ಲಿ ಮೀಸಲು ಕಲ್ಪಿಸಿಲ್ಲ’ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು. ‘ಸುಪ್ರೀಂಕೋರ್ಟ್‌ ಆದೇಶದಂತೆ ಈ ವರ್ಷದೊಳಗೆ ಬಿಬಿಎಂಪಿ ಚುನಾವಣೆ ನಡೆಯಬೇಕು. ಹೊಸದಾಗಿ ಮೀಸಲು ನಿಗದಿ ಮಾಡಲು ಸಾಧ್ಯವೇ ಎಂಬ ಬಗ್ಗೆ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಬೇಕು’ ಎಂದು ಹೈಕೋರ್ಟ್​ ಸೂಚಿಸಿತು.

ವಿಚಾರಣೆಯನ್ನು ಶುಕ್ರವಾರಕ್ಕೆ (ಸೆ 30) ಮುಂದೂಡಿದ ಹೈಕೋರ್ಟ್, ‘ಮುಂದಿನ ವಿಚಾರಣೆವರೆಗೆ ಚುನಾವಣಾ ವೇಳಾಪಟ್ಟಿ ಪ್ರಕಟಿಸಬಾರದು’ ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿತು. ಸರ್ಕಾರದ ಪರವಾಗಿ ಹಾಜರಿದ್ದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಧ್ಯಾನ್‌ ಚಿನ್ನಪ್ಪ, ‘ಸರ್ಕಾರವು ಒಬಿಸಿಗೆ ಸೂಕ್ತ ಮೀಸಲಾತಿ ಕಲ್ಪಿಸಲು ಸಿದ್ಧವಿದೆ’ ಎಂದರು.

Published On - 1:43 pm, Thu, 29 September 22

ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ