AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP Election: ಬೆಂಗಳೂರಿನ ಮತದಾರರ ಸಂಖ್ಯೆ 5 ಲಕ್ಷ ಹೆಚ್ಚಳ, ಬಿಬಿಎಂಪಿ ಚುನಾವಣೆಗೆ ಸಿದ್ಧತೆ ಆರಂಭ

ಬಿಬಿಎಂಪಿಯಲ್ಲಿ 243 ವಾರ್ಡ್​ಗಳಿದ್ದು,, ಪ್ರತಿ ವಾರ್ಡ್​ನಲ್ಲಿ ಸರಾಸರಿ 35ರಿಂದ 40 ಸಾವಿರ ಮತದಾರರಿದ್ದಾರೆ.

BBMP Election: ಬೆಂಗಳೂರಿನ ಮತದಾರರ ಸಂಖ್ಯೆ 5 ಲಕ್ಷ ಹೆಚ್ಚಳ, ಬಿಬಿಎಂಪಿ ಚುನಾವಣೆಗೆ ಸಿದ್ಧತೆ ಆರಂಭ
ಬಿಬಿಎಂಪಿ ಮತ್ತು ಕರ್ನಾಟಕ ಹೈಕೋರ್ಟ್​ (ಸಂಗ್ರಹ ಚಿತ್ರ)
TV9 Web
| Edited By: |

Updated on:Sep 29, 2022 | 1:43 PM

Share

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (Bruhat Bengaluru Mahanagara Palike – BBMP) ಚುನಾವಣೆಗೆ ಸಿದ್ಧತೆಗಳು ಭರದಿಂದ ಸಾಗಿವೆ. ಚುನಾವಣಾ ಆಯೋಗವು ಸಿದ್ಧತೆ ಆರಂಭಿಸಿದ್ದು, ಮತದಾರರ ಸಂಖ್ಯೆಯನ್ನು ಬಹಿರಂಗಪಡಿಸಿದೆ. 2015ರಲ್ಲಿ ಕಳೆದ ಬಾರಿ ಚುನಾವಣೆ ನಡೆದಿದ್ದಾಗ ಬಿಬಿಎಂಪಿ ವ್ಯಾಪ್ತಿಯಲ್ಲಿ 73,88,256 (73.88 ಲಕ್ಷ) ಮತದಾರರು ಇದ್ದರು. ಈ ಬಾರಿಯ ಅಂದರೆ 2022ರ ಚುನಾವಣೆಯಲ್ಲಿ 79,19,563 (79.19 ಲಕ್ಷ) ಮಂದಿ ಮತದಾನದ ಅರ್ಹತೆ ಪಡೆದಿದ್ದಾರೆ. ಮತದಾರರ ಸಂಖ್ಯೆಯು 5,31,307 (5.31 ಲಕ್ಷ) ಹೆಚ್ಚಾಗಿದೆ. ಬಿಬಿಎಂಪಿಯಲ್ಲಿ 243 ವಾರ್ಡ್​ಗಳಿದ್ದು,, ಪ್ರತಿ ವಾರ್ಡ್​ನಲ್ಲಿ ಸರಾಸರಿ 35ರಿಂದ 40 ಸಾವಿರ ಮತದಾರರಿದ್ದಾರೆ. ಹೈಕೋರ್ಟ್ ಸೂಚನೆಯ ನಂತರ ದಿನಾಂಕ ಘೋಷಿಸಲು ಬಿಬಿಎಂಪಿ ಸಿದ್ಧತೆ ನಡೆಸಿದೆ. ಈಗಾಗಲೇ ಬೂತ್ ಮಟ್ಟದ ಅಧಿಕಾರಿಗಳ ನೇಮಕ, ಹೊಸ ಮತಗಟ್ಟೆಗಳ ಸೇರ್ಪಡೆ ಸೇರಿದಂತೆ ಹಲವು ಚಟುವಟಿಕೆಗಳು ಆರಂಭವಾಗಿವೆ.

ಸರ್ಕಾರದ ನಿಲುವು ಸ್ಪಷ್ಟಪಡಿಸಲು ಹೈಕೋರ್ಟ್ ಸೂಚನೆ

ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ಮೀಸಲಾತಿ ನಿಗದಿ ಹಾಗೂ ಇತರ ವಿಚಾರಗಳ ಬಗ್ಗೆ ಹೈಕೋರ್ಟ್​​ನಲ್ಲಿ ನಿನ್ನೆ (ಸೆ 28) ವಿಚಾರಣೆ ನಡೆಯಿತು. ಚುನಾವಣಾ ಆಯೋಗದ ಪರ ವಾದ ಮಂಡಿಸಿದ ಹಿರಿಯ ವಕೀಲ ಕೆ.ಎನ್‌.ಫಣೀಂದ್ರ, ‘ಬಿಬಿಎಂಪಿ ಅಧಿಕಾರವಧಿ ಪೂರ್ಣಗೊಂಡು ಎರಡು ವರ್ಷಗಳಾಗಿವೆ. ಆಡಳಿತಾಧಿಕಾರಿಯೇ ಆಡಳಿತ ನಿರ್ವಹಿಸುತ್ತಿದ್ದಾರೆ. ಸಂವಿಧಾನದ ಆಶಯದಂತೆ ಶೀಘ್ರ ಚುನಾವಣೆ ನಡೆಯಬೇಕಿದೆ. ಮೀಸಲಾತಿ ಪ್ರಶ್ನೆಯ ಕಾರಣಕ್ಕೆ ಚುನಾವಣೆ ವಿಳಂಬ ಮಾಡುವಂತಿಲ್ಲ. ಶೀಘ್ರ ಚುನಾವಣೆ ನಡೆಸಬೇಕು ಎನ್ನುವುದು ಸುಪ್ರೀಂಕೋರ್ಟ್​ನ ಅಭಿಪ್ರಾಯವೂ ಆಗಿದೆ’ ಎಂದು ಹೇಳಿದರು.

ಮೀಸಲಾತಿ ಮರುನಿಗದಿ ಕೋರಿರುವ ಅರ್ಜಿದಾರರ ಪರ ವಕೀಲರು, ‘ಒಬಿಸಿಗೆ ಸೂಕ್ತ ರೀತಿಯಲ್ಲಿ ಮೀಸಲು ಕಲ್ಪಿಸಿಲ್ಲ’ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು. ‘ಸುಪ್ರೀಂಕೋರ್ಟ್‌ ಆದೇಶದಂತೆ ಈ ವರ್ಷದೊಳಗೆ ಬಿಬಿಎಂಪಿ ಚುನಾವಣೆ ನಡೆಯಬೇಕು. ಹೊಸದಾಗಿ ಮೀಸಲು ನಿಗದಿ ಮಾಡಲು ಸಾಧ್ಯವೇ ಎಂಬ ಬಗ್ಗೆ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಬೇಕು’ ಎಂದು ಹೈಕೋರ್ಟ್​ ಸೂಚಿಸಿತು.

ವಿಚಾರಣೆಯನ್ನು ಶುಕ್ರವಾರಕ್ಕೆ (ಸೆ 30) ಮುಂದೂಡಿದ ಹೈಕೋರ್ಟ್, ‘ಮುಂದಿನ ವಿಚಾರಣೆವರೆಗೆ ಚುನಾವಣಾ ವೇಳಾಪಟ್ಟಿ ಪ್ರಕಟಿಸಬಾರದು’ ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿತು. ಸರ್ಕಾರದ ಪರವಾಗಿ ಹಾಜರಿದ್ದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಧ್ಯಾನ್‌ ಚಿನ್ನಪ್ಪ, ‘ಸರ್ಕಾರವು ಒಬಿಸಿಗೆ ಸೂಕ್ತ ಮೀಸಲಾತಿ ಕಲ್ಪಿಸಲು ಸಿದ್ಧವಿದೆ’ ಎಂದರು.

Published On - 1:43 pm, Thu, 29 September 22

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್