AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP Election: ಬೆಂಗಳೂರಿನ ಮತದಾರರ ಸಂಖ್ಯೆ 5 ಲಕ್ಷ ಹೆಚ್ಚಳ, ಬಿಬಿಎಂಪಿ ಚುನಾವಣೆಗೆ ಸಿದ್ಧತೆ ಆರಂಭ

ಬಿಬಿಎಂಪಿಯಲ್ಲಿ 243 ವಾರ್ಡ್​ಗಳಿದ್ದು,, ಪ್ರತಿ ವಾರ್ಡ್​ನಲ್ಲಿ ಸರಾಸರಿ 35ರಿಂದ 40 ಸಾವಿರ ಮತದಾರರಿದ್ದಾರೆ.

BBMP Election: ಬೆಂಗಳೂರಿನ ಮತದಾರರ ಸಂಖ್ಯೆ 5 ಲಕ್ಷ ಹೆಚ್ಚಳ, ಬಿಬಿಎಂಪಿ ಚುನಾವಣೆಗೆ ಸಿದ್ಧತೆ ಆರಂಭ
ಬಿಬಿಎಂಪಿ ಮತ್ತು ಕರ್ನಾಟಕ ಹೈಕೋರ್ಟ್​ (ಸಂಗ್ರಹ ಚಿತ್ರ)
TV9 Web
| Edited By: |

Updated on:Sep 29, 2022 | 1:43 PM

Share

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (Bruhat Bengaluru Mahanagara Palike – BBMP) ಚುನಾವಣೆಗೆ ಸಿದ್ಧತೆಗಳು ಭರದಿಂದ ಸಾಗಿವೆ. ಚುನಾವಣಾ ಆಯೋಗವು ಸಿದ್ಧತೆ ಆರಂಭಿಸಿದ್ದು, ಮತದಾರರ ಸಂಖ್ಯೆಯನ್ನು ಬಹಿರಂಗಪಡಿಸಿದೆ. 2015ರಲ್ಲಿ ಕಳೆದ ಬಾರಿ ಚುನಾವಣೆ ನಡೆದಿದ್ದಾಗ ಬಿಬಿಎಂಪಿ ವ್ಯಾಪ್ತಿಯಲ್ಲಿ 73,88,256 (73.88 ಲಕ್ಷ) ಮತದಾರರು ಇದ್ದರು. ಈ ಬಾರಿಯ ಅಂದರೆ 2022ರ ಚುನಾವಣೆಯಲ್ಲಿ 79,19,563 (79.19 ಲಕ್ಷ) ಮಂದಿ ಮತದಾನದ ಅರ್ಹತೆ ಪಡೆದಿದ್ದಾರೆ. ಮತದಾರರ ಸಂಖ್ಯೆಯು 5,31,307 (5.31 ಲಕ್ಷ) ಹೆಚ್ಚಾಗಿದೆ. ಬಿಬಿಎಂಪಿಯಲ್ಲಿ 243 ವಾರ್ಡ್​ಗಳಿದ್ದು,, ಪ್ರತಿ ವಾರ್ಡ್​ನಲ್ಲಿ ಸರಾಸರಿ 35ರಿಂದ 40 ಸಾವಿರ ಮತದಾರರಿದ್ದಾರೆ. ಹೈಕೋರ್ಟ್ ಸೂಚನೆಯ ನಂತರ ದಿನಾಂಕ ಘೋಷಿಸಲು ಬಿಬಿಎಂಪಿ ಸಿದ್ಧತೆ ನಡೆಸಿದೆ. ಈಗಾಗಲೇ ಬೂತ್ ಮಟ್ಟದ ಅಧಿಕಾರಿಗಳ ನೇಮಕ, ಹೊಸ ಮತಗಟ್ಟೆಗಳ ಸೇರ್ಪಡೆ ಸೇರಿದಂತೆ ಹಲವು ಚಟುವಟಿಕೆಗಳು ಆರಂಭವಾಗಿವೆ.

ಸರ್ಕಾರದ ನಿಲುವು ಸ್ಪಷ್ಟಪಡಿಸಲು ಹೈಕೋರ್ಟ್ ಸೂಚನೆ

ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ಮೀಸಲಾತಿ ನಿಗದಿ ಹಾಗೂ ಇತರ ವಿಚಾರಗಳ ಬಗ್ಗೆ ಹೈಕೋರ್ಟ್​​ನಲ್ಲಿ ನಿನ್ನೆ (ಸೆ 28) ವಿಚಾರಣೆ ನಡೆಯಿತು. ಚುನಾವಣಾ ಆಯೋಗದ ಪರ ವಾದ ಮಂಡಿಸಿದ ಹಿರಿಯ ವಕೀಲ ಕೆ.ಎನ್‌.ಫಣೀಂದ್ರ, ‘ಬಿಬಿಎಂಪಿ ಅಧಿಕಾರವಧಿ ಪೂರ್ಣಗೊಂಡು ಎರಡು ವರ್ಷಗಳಾಗಿವೆ. ಆಡಳಿತಾಧಿಕಾರಿಯೇ ಆಡಳಿತ ನಿರ್ವಹಿಸುತ್ತಿದ್ದಾರೆ. ಸಂವಿಧಾನದ ಆಶಯದಂತೆ ಶೀಘ್ರ ಚುನಾವಣೆ ನಡೆಯಬೇಕಿದೆ. ಮೀಸಲಾತಿ ಪ್ರಶ್ನೆಯ ಕಾರಣಕ್ಕೆ ಚುನಾವಣೆ ವಿಳಂಬ ಮಾಡುವಂತಿಲ್ಲ. ಶೀಘ್ರ ಚುನಾವಣೆ ನಡೆಸಬೇಕು ಎನ್ನುವುದು ಸುಪ್ರೀಂಕೋರ್ಟ್​ನ ಅಭಿಪ್ರಾಯವೂ ಆಗಿದೆ’ ಎಂದು ಹೇಳಿದರು.

ಮೀಸಲಾತಿ ಮರುನಿಗದಿ ಕೋರಿರುವ ಅರ್ಜಿದಾರರ ಪರ ವಕೀಲರು, ‘ಒಬಿಸಿಗೆ ಸೂಕ್ತ ರೀತಿಯಲ್ಲಿ ಮೀಸಲು ಕಲ್ಪಿಸಿಲ್ಲ’ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು. ‘ಸುಪ್ರೀಂಕೋರ್ಟ್‌ ಆದೇಶದಂತೆ ಈ ವರ್ಷದೊಳಗೆ ಬಿಬಿಎಂಪಿ ಚುನಾವಣೆ ನಡೆಯಬೇಕು. ಹೊಸದಾಗಿ ಮೀಸಲು ನಿಗದಿ ಮಾಡಲು ಸಾಧ್ಯವೇ ಎಂಬ ಬಗ್ಗೆ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಬೇಕು’ ಎಂದು ಹೈಕೋರ್ಟ್​ ಸೂಚಿಸಿತು.

ವಿಚಾರಣೆಯನ್ನು ಶುಕ್ರವಾರಕ್ಕೆ (ಸೆ 30) ಮುಂದೂಡಿದ ಹೈಕೋರ್ಟ್, ‘ಮುಂದಿನ ವಿಚಾರಣೆವರೆಗೆ ಚುನಾವಣಾ ವೇಳಾಪಟ್ಟಿ ಪ್ರಕಟಿಸಬಾರದು’ ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿತು. ಸರ್ಕಾರದ ಪರವಾಗಿ ಹಾಜರಿದ್ದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಧ್ಯಾನ್‌ ಚಿನ್ನಪ್ಪ, ‘ಸರ್ಕಾರವು ಒಬಿಸಿಗೆ ಸೂಕ್ತ ಮೀಸಲಾತಿ ಕಲ್ಪಿಸಲು ಸಿದ್ಧವಿದೆ’ ಎಂದರು.

Published On - 1:43 pm, Thu, 29 September 22

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ