AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತದಾರರು ಕಾಂಗ್ರೆಸ್ ನಾಯಕರನ್ನು ಮನೆಗೆ ಹೋಗಿ ಎಂದಿದ್ದಾರೆ: ಸಚಿವ ಆರ್.ಅಶೋಕ್

ಮತದಾರರು ಸಿಎಂ ಬೊಮ್ಮಾಯಿ ಸರ್ಕಾರವನ್ನು ಒಪ್ಪಿದ್ದಾರೆ. ಕಾಂಗ್ರೆಸ್ ನಾಯಕರನ್ನು ಮನೆಗೆ ಹೋಗಿ ಎಂದಿದ್ದಾರೆ. ಕಾಂಗ್ರೆಸ್‌ಗೆ ಇದಕ್ಕಿಂತ ಹೀನಾಯ ಸೋಲು ಆಗಲಿದೆ. ವೀರಶೈವ ಲಿಂಗಾಯತ ಎಂದು ಒಡೆಯುವಂತಹ ಕೆಲಸಗಳನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಸಚಿವ ಆರ್.ಅಶೋಕ್ ಹೇಳಿಕೆ ನೀಡಿದ್ದಾರೆ.

ಮತದಾರರು ಕಾಂಗ್ರೆಸ್ ನಾಯಕರನ್ನು ಮನೆಗೆ ಹೋಗಿ ಎಂದಿದ್ದಾರೆ: ಸಚಿವ ಆರ್.ಅಶೋಕ್
ಸಚಿವ ಆರ್.ಅಶೋಕ್
TV9 Web
| Edited By: |

Updated on:Sep 06, 2021 | 1:40 PM

Share

ಬೆಂಗಳೂರು: ಮಹಾನಗರ ಪಾಲಿಕೆಗಳ ಫಲಿತಾಂಶಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಮಾಜಿ‌ ಸಿಎಂ ಯಡಿಯೂರಪ್ಪ ಹಾಕಿಕೊಟ್ಟ ಮಾರ್ಗದರ್ಶನ ಇದು. ಮತದಾರರು ಸಿಎಂ ಬೊಮ್ಮಾಯಿ ಸರ್ಕಾರವನ್ನು ಒಪ್ಪಿದ್ದಾರೆ. ಕಾಂಗ್ರೆಸ್ ನಾಯಕರನ್ನು ಮನೆಗೆ ಹೋಗಿ ಎಂದಿದ್ದಾರೆ. ಕಾಂಗ್ರೆಸ್‌ಗೆ ಇದಕ್ಕಿಂತ ಹೀನಾಯ ಸೋಲು ಆಗಲಿದೆ. ವೀರಶೈವ ಲಿಂಗಾಯತ ಎಂದು ಒಡೆಯುವಂತಹ ಕೆಲಸಗಳನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಹೇಳಿಕೆ ನೀಡಿದ್ದಾರೆ.

ಬಳಿಕ ಮಳೆಗಾಲದ ಅನಾಹುತಗಳನ್ನು ತಪ್ಪಿಸುವ ಕುರಿತ ಸಭೆ ವಿಚಾರವಾಗಿ ಮಾತನಾಡಿದ ಅವರು ರಸ್ತೆ ಸ್ಥಿತಿಗತಿ ಹಾಗೂ ಮುನ್ನಚ್ಚರಿಕೆಗಳ ಕುರಿತು ಸಭೆ ನಡೆಸಲಾಗುತ್ತದೆ. ಈ ಸಭೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಒಳ ಜಗಳ ಬಯಲಾಗಿದೆ:ಬಿಜೆಪಿ ರಾಜಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಹಾನಗರ ಪಾಲಿಕೆಗಳ ಫಲಿತಾಂಶಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಪಾಲಿಕೆ ಚುನಾವಣೆಯಲ್ಲಿ ಅತೀ ಹೆಚ್ಚು ಸ್ಥಾನ ಬಿಜೆಪಿ ಪಡೆದುಕೊಂಡಿದೆ. ಎಲ್ಲ ಮತದಾರರಿಗೂ ಬಿಜೆಪಿ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ. ಯಡಿಯೂರಪ್ಪ ಮಾರ್ಗದರ್ಶನ, ಬೊಮ್ಮಯಿ ನಾಯಕತ್ವದಲ್ಲಿ ನಾವು ಚುನಾವಣೆ ಎದುರಿಸಿದ್ದೇವೆ. ಬೆಳಗಾವಿಯಲ್ಲಿ ಬಿಜೆಪಿ ಅಭೂತಪೂರ್ವ ಜಯಭೇರಿ ಬಾರಿಸಿದೆ. ಬೆಳಗಾವಿಯಲ್ಲಿ ಚಿಹ್ನೆ ಅಡಿ ಮೊದಲ ಬಾರಿ ಚುನಾವಣೆ ಎದುರಿಸಿದ್ದೆವು. ಬಿಜೆಪಿಯ ಆಡಳಿತ ಮೆಚ್ಚಿ ಬೆಳಗಾವಿಯಲ್ಲಿ ಜನರು ಗೆಲ್ಲಿಸಿದ್ದಾರೆ ಎಂದು ಹೇಳಿದ್ದಾರೆ.

ಹುಬ್ಬಳ್ಳಿ- ಧಾರವಾಡದಲ್ಲಿ ಮೂರನೇ ಬಾರಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದೇವೆ. ಕಲಬುರಗಿಯಲ್ಲೂ ಉತ್ತಮ ಫಲಿತಾಂಶ ಬಂದಿದೆ. ಪ್ರಧಾನಿ ಮೋದಿಯವರ ಜನಪ್ರಿಯ ಕಾರ್ಯಕ್ರಮ, ಬೊಮ್ಮಾಯಿ ಅವರ ಆಡಳಿತವನ್ನು ಜನ ಮೆಚ್ಚಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಅಲೆ ಇದೆ ಅನ್ನೋದು ಮತ್ತೆ ಖಚಿತವಾಗಿದೆ. ಕಾಂಗ್ರೆಸ್ ಟೀಕೆ ಮಾಡುತ್ತಿದ್ದರು. ಆದರೆ, ಜನರು ಸ್ಪಷ್ಟವಾದ ಸಂದೇಶ ಕೊಟ್ಟಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸಿದ್ದರಾಮಯ್ಯ ಚುನಾವಣೆ ಕಣಕ್ಕೆ ಬರಲಿಲ್ಲ, ಡಿ ಕೆ ಶಿವಕುಮಾರ್ ವಿಫಲ ಅಧ್ಯಕ್ಷರು ಅಂತ ತೋರಿಸಲು ಬರಲಿಲ್ಲ. ಅವರು ಸಿಎಂ ಸ್ಥಾನಕ್ಕಾಗಿ ಕಿತ್ತಾಟ ನಡೆಸುತ್ತಿದ್ದಾರೆ. ಹೀಗಾಗಿ ಡಿ ಕೆ ಶಿವಕುಮಾರ್ ವಿಫಲ ರಾಜ್ಯಾಧ್ಯಕ್ಷ ಎಂದು ತೋರಿಸುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ. ಚುನಾವಣೆಯಲ್ಲಿ ಕಾಂಗ್ರೆಸ್ ಒಳ ಜಗಳ ಬಯಲಾಗಿದೆ ಎಂದು ನಳಿನ್ ಕುಮಾರ್ ಕಟೀಲ್ ವ್ಯಂಗ್ಯ ಮಾಡಿದ್ದಾರೆ.

ಇದನ್ನೂ ಓದಿ: ಬಿಜೆಪಿಯವರು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ; ಆದರೂ ಮಹಾನಗರ ಪಾಲಿಕೆ ಫಲಿತಾಂಶ ಸಮಾಧಾನ ತಂದಿದೆ: ಡಿ.ಕೆ.ಶಿವಕುಮಾರ್

ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಬಿಜೆಪಿಗೆ ಸಿಹಿ; ಕಲಬುರಗಿಯಲ್ಲಿ ಕಾಂಗ್ರೆಸ್​ಗೆ ಹೆಚ್ಚು ಖುಷಿ

Published On - 1:24 pm, Mon, 6 September 21

ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?