AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಡವದೆ ನಡೆದುಕೊಂಡು ಹೋಗಿ, ನನ್ನ ಹೆಸರು ಹೇಳದೆ ಭಾಷಣ ಮಾಡಿ: ಮಾಜಿ, ಹಾಲಿ ಸಿಎಂಗೆ ಸಿದ್ದರಾಮಯ್ಯ ಸವಾಲ್

ಬಿಜೆಪಿ ನಾಯಕರ ವಿರುದ್ಧ ಸಿದ್ದರಾಮಯ್ಯ ಟ್ವೀಟ್​ ಸಮರ ಸಾರಿದ್ದು, ಜನಸಂಕಲ್ಪ ಯಾತ್ರೆಗೆ ಹೊರಟಿರುವ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹಾಗೂ ಹಾಲಿ ಸಿಎಂ ಬೊಮ್ಮಾಯಿಗೆ ಸವಾಲು ಹಾಕಿದ್ದಾರೆ.

ಎಡವದೆ ನಡೆದುಕೊಂಡು ಹೋಗಿ, ನನ್ನ ಹೆಸರು ಹೇಳದೆ ಭಾಷಣ ಮಾಡಿ: ಮಾಜಿ, ಹಾಲಿ ಸಿಎಂಗೆ ಸಿದ್ದರಾಮಯ್ಯ ಸವಾಲ್
ಬಿಎಸ್ ಯಡಿಯೂರಪ್ಪ, ಸಿದ್ಧರಾಮಯ್ಯ, ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Oct 12, 2022 | 5:28 PM

Share

ಬೆಂಗಳೂರು: ಬಿಜೆಪಿ ನಾಯಕರ ವಿರುದ್ಧ ಸಿದ್ದರಾಮಯ್ಯ ಟ್ವೀಟ್​ ಸಮರ ಸಾರಿದ್ದು, ಜನಸಂಕಲ್ಪ ಯಾತ್ರೆಗೆ ಹೊರಟಿರುವ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹಾಗೂ ಹಾಲಿ ಸಿಎಂ ಬೊಮ್ಮಾಯಿಗೆ ಎರಡೇ ಎರಡು ಸವಾಲು ಹಾಕಿದ್ದಾರೆ. ಕಾರು ಬಿಟ್ಟು ಎಡವದೆ 4 ಕಿ.ಮೀ. ನಡೆದುಕೊಂಡು ಹೋಗಿ. ಸಿದ್ದರಾಮಯ್ಯ ಎಂಬ ಹೆಸರೇಳದೆ 5 ನಿಮಿಷ ಭಾಷಣ ಮಾಡಿ ಎಂದು ಸವಾಲು ಹಾಕಿದ್ದಾರೆ. ಬೊಮ್ಮಾಯಿಗೆ ಏಕಾಂಗಿಯಾಗಿ ಯಾತ್ರೆಗೆ ಹೊರಡುವ ಧೈರ್ಯ ಇಲ್ಲ. ಸಿಎಂ ಬೊಮ್ಮಾಯಿಗೆ ಜನ ಕಲ್ಲು ಹೊಡೆಯುತ್ತಾರೆಂಬ ಭಯ ಇದೆ. ಅದಕ್ಕಾಗಿ ರಕ್ಷಣೆಗೆ ಜೊತೆಯಲ್ಲಿ BSY ಕರೆದುಕೊಂಡು ಬಂದಿದ್ದಾರೆ. #ಬಡಾಯಿ ಬೊಮ್ಮಾಯಿ. ಸಿಎಂ ಸ್ಥಾನವನ್ನು ಕಿತ್ತುಕೊಂಡಾಗ ಬಿಎಸ್​ವೈ ಕಣ್ಣೀರು ಹಾಕಿದ್ದರು. ಬಹಿರಂಗವಾಗಿ ಬಿಎಸ್​ವೈ ಕಣ್ಣೀರು ಹಾಕಿದ್ದನ್ನು ಜನ ನೋಡಿದ್ದಾರೆ ಎಂದು ಟ್ವೀಟ್​ ಮೂಲಕ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ಮಾಡಿದರು.

ಬೆನ್ನಿಗೆ ಇರಿದವರು ಯಾರು ಎನ್ನುವುದೂ ಜನರಿಗೆ ಗೊತ್ತು. ಯಡಿಯೂರಪ್ಪನವರನ್ನು ಕರೆದುಕೊಂಡು ಬಂದ ಕೂಡಲೇ ಜನ ನಿಮ್ಮ ದ್ರೋಹವನ್ನು ಮರೆಯಲಾರರು. ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಹೇಳುವಂತೆ @BSBommai ಅವರೊಬ್ಬ ‘ಎರಡುವರೆ ಸಾವಿರ ಕೋಟಿ ರೂಪಾಯಿಯ #PayCM’’ ಹೈಕಮಾಂಡ್​ಗೆ ಸರಿಯಾಗಿ ಕಂತು ಪಾವತಿಯಾದರೆ ಮಾತ್ರ ಅವರು ಸುರಕ್ಷಿತ. ತಪ್ಪಿದರೆ ಮನೆಗೆ ತಿರುಗೇಟು ನೀಡಿದ್ದಾರೆ.

ಪ್ರಧಾನಿ ಮೋದಿ ಪುಕ್ಕಲು ಗುರು: ಸಿದ್ಧರಾಮಯ್ಯ

ರಾಹುಲ್ ಗಾಂಧಿಯವರನ್ನು ಬಚ್ಚಾ ಎಂದು ಹೇಳುವ @BSYBJP ಅವರೇ, ನಿಮ್ಮ @narendramodi ಅವರು ವಿಶ್ವಗುರು ಅಲ್ಲ ಅವರೊಬ್ಬ ಪುಕ್ಕಲು ಗುರು. ಅವರು ನಮ್ಮನ್ನು ಎದುರಿಸುವುದು ಬೇಡ, ಧೈರ್ಯವಿದ್ದರೆ ಒಂದು ಪತ್ರಿಕಾಗೋಷ್ಠಿ ನಡೆಸಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲು ಹೇಳಿ. ಪಾಪ, @BSYBJP ಅವರು ಯಾರೋ ಬರೆದುಕೊಟ್ಟದ್ದನ್ನು ಓದಿ ನನ್ನ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಅವರು ಈ ರೀತಿ ಕಾಲ ವ್ಯರ್ಥ ಮಾಡುವುದರ ಬದಲಿಗೆ ಒಳ್ಳೆಯ ವಕೀಲರ ಜೊತೆ ಸಮಾಲೋಚಿಸಿ ಮತ್ತೊಮ್ಮೆ ಜೈಲು ಪಾಲಾಗದಂತೆ ನೋಡಿಕೊಳ್ಳುವುದು ಒಳ್ಳೆಯದು.

ಹಿಂದುಳಿದ ಜಾತಿಗಳಿಗೆ ಮೀಸಲಾತಿ ಕಲ್ಪಿಸಿದ ಮಂಡಲ್ ವರದಿಯಿಂದ ಹಿಡಿದು ಇಲ್ಲಿಯ ವರೆಗೆ ಮೀಸಲಾತಿಯನ್ನು ಅಡಿಯಿಂದ ಮುಡಿವರೆಗೆ ವಿರೋಧಿಸುತ್ತಾ ಬಂದಿರುವ @BJP4India ಯ ಡಿ.ಎನ್.ಎ ಯಲ್ಲಿಯೇ ಮೀಸಲಾತಿ ವಿರೋಧ ಇದೆ. ಈ ನಾಲ್ಕು ದಿನಗಳ ನಾಟಕದ ಮಾತುಗಳನ್ನು ನಂಬುವಷ್ಟು ಜನ ಮೂರ್ಖರಲ್ಲ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:25 pm, Wed, 12 October 22

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?