ಎಡವದೆ ನಡೆದುಕೊಂಡು ಹೋಗಿ, ನನ್ನ ಹೆಸರು ಹೇಳದೆ ಭಾಷಣ ಮಾಡಿ: ಮಾಜಿ, ಹಾಲಿ ಸಿಎಂಗೆ ಸಿದ್ದರಾಮಯ್ಯ ಸವಾಲ್

| Updated By: ಗಂಗಾಧರ​ ಬ. ಸಾಬೋಜಿ

Updated on: Oct 12, 2022 | 5:28 PM

ಬಿಜೆಪಿ ನಾಯಕರ ವಿರುದ್ಧ ಸಿದ್ದರಾಮಯ್ಯ ಟ್ವೀಟ್​ ಸಮರ ಸಾರಿದ್ದು, ಜನಸಂಕಲ್ಪ ಯಾತ್ರೆಗೆ ಹೊರಟಿರುವ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹಾಗೂ ಹಾಲಿ ಸಿಎಂ ಬೊಮ್ಮಾಯಿಗೆ ಸವಾಲು ಹಾಕಿದ್ದಾರೆ.

ಎಡವದೆ ನಡೆದುಕೊಂಡು ಹೋಗಿ, ನನ್ನ ಹೆಸರು ಹೇಳದೆ ಭಾಷಣ ಮಾಡಿ: ಮಾಜಿ, ಹಾಲಿ ಸಿಎಂಗೆ ಸಿದ್ದರಾಮಯ್ಯ ಸವಾಲ್
ಬಿಎಸ್ ಯಡಿಯೂರಪ್ಪ, ಸಿದ್ಧರಾಮಯ್ಯ, ಬಸವರಾಜ ಬೊಮ್ಮಾಯಿ
Follow us on

ಬೆಂಗಳೂರು: ಬಿಜೆಪಿ ನಾಯಕರ ವಿರುದ್ಧ ಸಿದ್ದರಾಮಯ್ಯ ಟ್ವೀಟ್​ ಸಮರ ಸಾರಿದ್ದು, ಜನಸಂಕಲ್ಪ ಯಾತ್ರೆಗೆ ಹೊರಟಿರುವ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹಾಗೂ ಹಾಲಿ ಸಿಎಂ ಬೊಮ್ಮಾಯಿಗೆ ಎರಡೇ ಎರಡು ಸವಾಲು ಹಾಕಿದ್ದಾರೆ. ಕಾರು ಬಿಟ್ಟು ಎಡವದೆ 4 ಕಿ.ಮೀ. ನಡೆದುಕೊಂಡು ಹೋಗಿ. ಸಿದ್ದರಾಮಯ್ಯ ಎಂಬ ಹೆಸರೇಳದೆ 5 ನಿಮಿಷ ಭಾಷಣ ಮಾಡಿ ಎಂದು ಸವಾಲು ಹಾಕಿದ್ದಾರೆ. ಬೊಮ್ಮಾಯಿಗೆ ಏಕಾಂಗಿಯಾಗಿ ಯಾತ್ರೆಗೆ ಹೊರಡುವ ಧೈರ್ಯ ಇಲ್ಲ. ಸಿಎಂ ಬೊಮ್ಮಾಯಿಗೆ ಜನ ಕಲ್ಲು ಹೊಡೆಯುತ್ತಾರೆಂಬ ಭಯ ಇದೆ. ಅದಕ್ಕಾಗಿ ರಕ್ಷಣೆಗೆ ಜೊತೆಯಲ್ಲಿ BSY ಕರೆದುಕೊಂಡು ಬಂದಿದ್ದಾರೆ. #ಬಡಾಯಿ ಬೊಮ್ಮಾಯಿ. ಸಿಎಂ ಸ್ಥಾನವನ್ನು ಕಿತ್ತುಕೊಂಡಾಗ ಬಿಎಸ್​ವೈ ಕಣ್ಣೀರು ಹಾಕಿದ್ದರು. ಬಹಿರಂಗವಾಗಿ ಬಿಎಸ್​ವೈ ಕಣ್ಣೀರು ಹಾಕಿದ್ದನ್ನು ಜನ ನೋಡಿದ್ದಾರೆ ಎಂದು ಟ್ವೀಟ್​ ಮೂಲಕ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ಮಾಡಿದರು.

ಬೆನ್ನಿಗೆ ಇರಿದವರು ಯಾರು ಎನ್ನುವುದೂ ಜನರಿಗೆ ಗೊತ್ತು. ಯಡಿಯೂರಪ್ಪನವರನ್ನು ಕರೆದುಕೊಂಡು ಬಂದ ಕೂಡಲೇ ಜನ ನಿಮ್ಮ ದ್ರೋಹವನ್ನು ಮರೆಯಲಾರರು. ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಹೇಳುವಂತೆ @BSBommai ಅವರೊಬ್ಬ ‘ಎರಡುವರೆ ಸಾವಿರ ಕೋಟಿ ರೂಪಾಯಿಯ #PayCM’’ ಹೈಕಮಾಂಡ್​ಗೆ ಸರಿಯಾಗಿ ಕಂತು ಪಾವತಿಯಾದರೆ ಮಾತ್ರ ಅವರು ಸುರಕ್ಷಿತ. ತಪ್ಪಿದರೆ ಮನೆಗೆ ತಿರುಗೇಟು ನೀಡಿದ್ದಾರೆ.


ಪ್ರಧಾನಿ ಮೋದಿ ಪುಕ್ಕಲು ಗುರು: ಸಿದ್ಧರಾಮಯ್ಯ

ರಾಹುಲ್ ಗಾಂಧಿಯವರನ್ನು ಬಚ್ಚಾ ಎಂದು ಹೇಳುವ @BSYBJP ಅವರೇ, ನಿಮ್ಮ @narendramodi ಅವರು ವಿಶ್ವಗುರು ಅಲ್ಲ ಅವರೊಬ್ಬ ಪುಕ್ಕಲು ಗುರು. ಅವರು ನಮ್ಮನ್ನು ಎದುರಿಸುವುದು ಬೇಡ, ಧೈರ್ಯವಿದ್ದರೆ ಒಂದು ಪತ್ರಿಕಾಗೋಷ್ಠಿ ನಡೆಸಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲು ಹೇಳಿ. ಪಾಪ, @BSYBJP ಅವರು ಯಾರೋ ಬರೆದುಕೊಟ್ಟದ್ದನ್ನು ಓದಿ ನನ್ನ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಅವರು ಈ ರೀತಿ ಕಾಲ ವ್ಯರ್ಥ ಮಾಡುವುದರ ಬದಲಿಗೆ ಒಳ್ಳೆಯ ವಕೀಲರ ಜೊತೆ ಸಮಾಲೋಚಿಸಿ ಮತ್ತೊಮ್ಮೆ ಜೈಲು ಪಾಲಾಗದಂತೆ ನೋಡಿಕೊಳ್ಳುವುದು ಒಳ್ಳೆಯದು.


ಹಿಂದುಳಿದ ಜಾತಿಗಳಿಗೆ ಮೀಸಲಾತಿ ಕಲ್ಪಿಸಿದ ಮಂಡಲ್ ವರದಿಯಿಂದ ಹಿಡಿದು ಇಲ್ಲಿಯ ವರೆಗೆ ಮೀಸಲಾತಿಯನ್ನು ಅಡಿಯಿಂದ ಮುಡಿವರೆಗೆ ವಿರೋಧಿಸುತ್ತಾ ಬಂದಿರುವ @BJP4India ಯ ಡಿ.ಎನ್.ಎ ಯಲ್ಲಿಯೇ ಮೀಸಲಾತಿ ವಿರೋಧ ಇದೆ. ಈ ನಾಲ್ಕು ದಿನಗಳ ನಾಟಕದ ಮಾತುಗಳನ್ನು ನಂಬುವಷ್ಟು ಜನ ಮೂರ್ಖರಲ್ಲ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:25 pm, Wed, 12 October 22