Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪೇಗೌಡ ಪಾರ್ಕ್​ ಕೋಟೆ ಗೋಡೆ ಕುಸಿತ ಪ್ರಕರಣ: ಶಾಸಕ ಮಂಜುನಾಥ್ ಸಭೆ, ಸೂಕ್ತ ತನಿಖೆಗೆ ಆಗ್ರಹ

ಬೆಂಗಳೂರು: ಬೆಂಗಳೂರಿನ ವಾರ್ಡ್‌ ನಂಬರ್ 13 ರ ಮಲ್ಲಸಂದ್ರ ಗುಟ್ಟೆಯಲ್ಲಿ ಬಹುಕೋಟಿ ವೆಚ್ಚದ ಕೋಟೆಯ ಗೋಡೆ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಆರ್. ಮಂಜುನಾಥ್ ಸೂಕ್ತ ತನಿಖೆಗೆ ಆಗ್ರಹಿಸಿದ್ದಾರೆ. ಘಟನೆ ಕುರಿತು ದಾಸರಹಳ್ಳಿ ಬಿಬಿಎಂಪಿ ಕಚೇರಿಯಲ್ಲಿ ಶಾಸಕರು ಸಭೆ ನಡೆಸಿದ್ದು, ವಲಯ ಆಯುಕ್ತ ನರಸಿಂಹ ಮೂರ್ತಿ ಸೇರಿದಂತೆ ಎಂಜಿನಿಯರ್‌ಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಇನ್ನು ಶಾಸಕರು ಮಾಜಿ ಕಾರ್ಪೋರೇಟರ್, ಕೋಟೆ ನಿರ್ಮಾಣ ಮಾಡಿಸಿದ್ದ ಲೋಕೇಶ್ ವಿರುದ್ಧ ಪರೋಕ್ಷವಾಗಿ ಆರೋಪ ಮಾಡಿದ್ದು, ಟೆಂಡರ್ ಹಾಗೂ ವರ್ಕ್ ಆರ್ಡರ್ ಇಲ್ಲದೆ ಕಾಮಗಾರಿ […]

ಕೆಂಪೇಗೌಡ ಪಾರ್ಕ್​ ಕೋಟೆ ಗೋಡೆ ಕುಸಿತ ಪ್ರಕರಣ: ಶಾಸಕ ಮಂಜುನಾಥ್ ಸಭೆ, ಸೂಕ್ತ ತನಿಖೆಗೆ ಆಗ್ರಹ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Oct 19, 2021 | 11:30 AM

ಬೆಂಗಳೂರು: ಬೆಂಗಳೂರಿನ ವಾರ್ಡ್‌ ನಂಬರ್ 13 ರ ಮಲ್ಲಸಂದ್ರ ಗುಟ್ಟೆಯಲ್ಲಿ ಬಹುಕೋಟಿ ವೆಚ್ಚದ ಕೋಟೆಯ ಗೋಡೆ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಆರ್. ಮಂಜುನಾಥ್ ಸೂಕ್ತ ತನಿಖೆಗೆ ಆಗ್ರಹಿಸಿದ್ದಾರೆ. ಘಟನೆ ಕುರಿತು ದಾಸರಹಳ್ಳಿ ಬಿಬಿಎಂಪಿ ಕಚೇರಿಯಲ್ಲಿ ಶಾಸಕರು ಸಭೆ ನಡೆಸಿದ್ದು, ವಲಯ ಆಯುಕ್ತ ನರಸಿಂಹ ಮೂರ್ತಿ ಸೇರಿದಂತೆ ಎಂಜಿನಿಯರ್‌ಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಇನ್ನು ಶಾಸಕರು ಮಾಜಿ ಕಾರ್ಪೋರೇಟರ್, ಕೋಟೆ ನಿರ್ಮಾಣ ಮಾಡಿಸಿದ್ದ ಲೋಕೇಶ್ ವಿರುದ್ಧ ಪರೋಕ್ಷವಾಗಿ ಆರೋಪ ಮಾಡಿದ್ದು, ಟೆಂಡರ್ ಹಾಗೂ ವರ್ಕ್ ಆರ್ಡರ್ ಇಲ್ಲದೆ ಕಾಮಗಾರಿ ನಡೆಸಿರೋ ಆರೋಪ ಮಾಡಿದ್ದಾರೆ.

ಸಭೆಯಲ್ಲಿ ಕೋಟೆಯ ಯಾವ ಯಾವ ಭಾಗದಲ್ಲಿ ಕಳೆಪೆ ಕಾಮಗಾರಿ ನಡೆದಿದೆ. ಅಕ್ರಮ ಕಾಮಗಾರಿ ಎಲ್ಲಿ ನಡೆದಿದೆ ಅನ್ನೋದರ ಪತ್ತೆ ಕಾರ್ಯವನ್ನ ಅಧಿಕಾರಿಗಳಿಗೆ ವಹಿಸಲಾಗಿದೆ. ಅಲ್ಲದೆ ಅಕ್ರಮಗಳ ಬಗ್ಗೆ ಸರ್ಕಾರದ ಮಟ್ಟದಲ್ಲಿ ಕಾನೂನು ಹೋರಾಟ ಮಾಡಲಾಗುವುದು ಹಾಗೂ ತಪ್ಪಿತಸ್ಥರಿಗೆ ಶಿಕ್ಷೆ ಆಗೋವರೆಗೂ ಹೋರಾಟ ಮುಂದುವರೆಸಲಾಗುವುದು ಎಂದು ತಿಳಿಸಿದರು.

ಪ್ರಕರಣ: ಕೇವಲ ಎರಡು ವರ್ಷಗಳ‌ ಹಿಂದಷ್ಟೆ ನಿರ್ಮಾಣವಾಗಿದ್ದ ಕೋಟೆಯ ಗೋಡೆ ಕುಸಿತದಿಂದ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಗೊಡೆ ಕುಸಿತವಾಗಿರುವ ಪ್ರದೇಶದಲ್ಲಿ ಬಯಲು ರಂಗಮಂದಿರವಿದ್ದು, ಪ್ರತಿನಿದ ಮಕ್ಕಳು ಸೇರಿದಂತೆ ಸಾರ್ವಜನಿಕರು ವಾಯು ವಿಹಾರಕ್ಕೆ‌ ಈ ಪಾರ್ಕ್‌ಗೆ ಬರುತ್ತಿದ್ದು ಜನ ಇದ್ದ ಸಂದರ್ಭದಲ್ಲಿ ಗೋಡೆ ಕುಸಿತದಿಂದ ಅಪಾಯ ಸಂಭವಿಸಿದರೆ ಯಾರು ಹೊಣೆ ಎಂದು ಪ್ರಶ್ನಿಸುವಂತಾಗಿತ್ತು.

ಇನ್ನೂ 29-08-2020 ರಂದು ಸ್ಥಳೀಯ ಶಾಸಕರು ಕೋಟೆ ಅವ್ಯವಹಾರ ಕುರಿತು ಪ್ರತಿಭಟನೆ ನಡೆಸಿದರೂ ಸಹ ಅವರನ್ನ‌ ಲೆಕ್ಕಿಸದೆ, ಪೊಲೀಸರಿಂದ ಬಂಧನಕ್ಕೆ‌ ಒಳಪಡಿಸಿ ಈ ಪಾರ್ಕ್ ಉದ್ಘಾಟನೆಯನ್ನ‌ ಅಂದಿನ‌ ಕಾರ್ಪೊರೇಟರ್ ಲೋಕೇಶ್ ಹಾಗೂ ಸಂಸದ ಡಿವಿ ಸದಾನಂದ ಗೌಡ ನೆರೆವೇರಿಸಿದ್ದರು.

Also Read:

ಕೆಂಪೇಗೌಡ ಪಾರ್ಕ್‌ನಲ್ಲಿ ಮತ್ತೊಂದು ಅವಘಡ: ಕೋಟೆ ಗೋಡೆ ಕುಸಿತ; 3 ವರ್ಷ ಹಿಂದಷ್ಟೇ ಬಿಬಿಎಂಪಿ ನಿರ್ಮಿಸಿದ್ದ ಗೋಡೆ ಇದು

CM Bommai ಜೊತೆ ಅರ್ಧಗಂಟೆಗೂ ಹೆಚ್ಚು ಕಾಲ ರಮೇಶ್​ ಜಾರಕಿಹೊಳಿ ಮೀಟಿಂಗ್|Tv9kannada

(wall collapse in bbmp kempegowda park in dasarahalli mla meetng held )

Published On - 11:26 am, Tue, 19 October 21

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ