AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪೇಗೌಡ ಪಾರ್ಕ್​ ಕೋಟೆ ಗೋಡೆ ಕುಸಿತ ಪ್ರಕರಣ: ಶಾಸಕ ಮಂಜುನಾಥ್ ಸಭೆ, ಸೂಕ್ತ ತನಿಖೆಗೆ ಆಗ್ರಹ

ಬೆಂಗಳೂರು: ಬೆಂಗಳೂರಿನ ವಾರ್ಡ್‌ ನಂಬರ್ 13 ರ ಮಲ್ಲಸಂದ್ರ ಗುಟ್ಟೆಯಲ್ಲಿ ಬಹುಕೋಟಿ ವೆಚ್ಚದ ಕೋಟೆಯ ಗೋಡೆ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಆರ್. ಮಂಜುನಾಥ್ ಸೂಕ್ತ ತನಿಖೆಗೆ ಆಗ್ರಹಿಸಿದ್ದಾರೆ. ಘಟನೆ ಕುರಿತು ದಾಸರಹಳ್ಳಿ ಬಿಬಿಎಂಪಿ ಕಚೇರಿಯಲ್ಲಿ ಶಾಸಕರು ಸಭೆ ನಡೆಸಿದ್ದು, ವಲಯ ಆಯುಕ್ತ ನರಸಿಂಹ ಮೂರ್ತಿ ಸೇರಿದಂತೆ ಎಂಜಿನಿಯರ್‌ಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಇನ್ನು ಶಾಸಕರು ಮಾಜಿ ಕಾರ್ಪೋರೇಟರ್, ಕೋಟೆ ನಿರ್ಮಾಣ ಮಾಡಿಸಿದ್ದ ಲೋಕೇಶ್ ವಿರುದ್ಧ ಪರೋಕ್ಷವಾಗಿ ಆರೋಪ ಮಾಡಿದ್ದು, ಟೆಂಡರ್ ಹಾಗೂ ವರ್ಕ್ ಆರ್ಡರ್ ಇಲ್ಲದೆ ಕಾಮಗಾರಿ […]

ಕೆಂಪೇಗೌಡ ಪಾರ್ಕ್​ ಕೋಟೆ ಗೋಡೆ ಕುಸಿತ ಪ್ರಕರಣ: ಶಾಸಕ ಮಂಜುನಾಥ್ ಸಭೆ, ಸೂಕ್ತ ತನಿಖೆಗೆ ಆಗ್ರಹ
TV9 Web
| Updated By: ಸಾಧು ಶ್ರೀನಾಥ್​|

Updated on:Oct 19, 2021 | 11:30 AM

Share

ಬೆಂಗಳೂರು: ಬೆಂಗಳೂರಿನ ವಾರ್ಡ್‌ ನಂಬರ್ 13 ರ ಮಲ್ಲಸಂದ್ರ ಗುಟ್ಟೆಯಲ್ಲಿ ಬಹುಕೋಟಿ ವೆಚ್ಚದ ಕೋಟೆಯ ಗೋಡೆ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಆರ್. ಮಂಜುನಾಥ್ ಸೂಕ್ತ ತನಿಖೆಗೆ ಆಗ್ರಹಿಸಿದ್ದಾರೆ. ಘಟನೆ ಕುರಿತು ದಾಸರಹಳ್ಳಿ ಬಿಬಿಎಂಪಿ ಕಚೇರಿಯಲ್ಲಿ ಶಾಸಕರು ಸಭೆ ನಡೆಸಿದ್ದು, ವಲಯ ಆಯುಕ್ತ ನರಸಿಂಹ ಮೂರ್ತಿ ಸೇರಿದಂತೆ ಎಂಜಿನಿಯರ್‌ಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಇನ್ನು ಶಾಸಕರು ಮಾಜಿ ಕಾರ್ಪೋರೇಟರ್, ಕೋಟೆ ನಿರ್ಮಾಣ ಮಾಡಿಸಿದ್ದ ಲೋಕೇಶ್ ವಿರುದ್ಧ ಪರೋಕ್ಷವಾಗಿ ಆರೋಪ ಮಾಡಿದ್ದು, ಟೆಂಡರ್ ಹಾಗೂ ವರ್ಕ್ ಆರ್ಡರ್ ಇಲ್ಲದೆ ಕಾಮಗಾರಿ ನಡೆಸಿರೋ ಆರೋಪ ಮಾಡಿದ್ದಾರೆ.

ಸಭೆಯಲ್ಲಿ ಕೋಟೆಯ ಯಾವ ಯಾವ ಭಾಗದಲ್ಲಿ ಕಳೆಪೆ ಕಾಮಗಾರಿ ನಡೆದಿದೆ. ಅಕ್ರಮ ಕಾಮಗಾರಿ ಎಲ್ಲಿ ನಡೆದಿದೆ ಅನ್ನೋದರ ಪತ್ತೆ ಕಾರ್ಯವನ್ನ ಅಧಿಕಾರಿಗಳಿಗೆ ವಹಿಸಲಾಗಿದೆ. ಅಲ್ಲದೆ ಅಕ್ರಮಗಳ ಬಗ್ಗೆ ಸರ್ಕಾರದ ಮಟ್ಟದಲ್ಲಿ ಕಾನೂನು ಹೋರಾಟ ಮಾಡಲಾಗುವುದು ಹಾಗೂ ತಪ್ಪಿತಸ್ಥರಿಗೆ ಶಿಕ್ಷೆ ಆಗೋವರೆಗೂ ಹೋರಾಟ ಮುಂದುವರೆಸಲಾಗುವುದು ಎಂದು ತಿಳಿಸಿದರು.

ಪ್ರಕರಣ: ಕೇವಲ ಎರಡು ವರ್ಷಗಳ‌ ಹಿಂದಷ್ಟೆ ನಿರ್ಮಾಣವಾಗಿದ್ದ ಕೋಟೆಯ ಗೋಡೆ ಕುಸಿತದಿಂದ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಗೊಡೆ ಕುಸಿತವಾಗಿರುವ ಪ್ರದೇಶದಲ್ಲಿ ಬಯಲು ರಂಗಮಂದಿರವಿದ್ದು, ಪ್ರತಿನಿದ ಮಕ್ಕಳು ಸೇರಿದಂತೆ ಸಾರ್ವಜನಿಕರು ವಾಯು ವಿಹಾರಕ್ಕೆ‌ ಈ ಪಾರ್ಕ್‌ಗೆ ಬರುತ್ತಿದ್ದು ಜನ ಇದ್ದ ಸಂದರ್ಭದಲ್ಲಿ ಗೋಡೆ ಕುಸಿತದಿಂದ ಅಪಾಯ ಸಂಭವಿಸಿದರೆ ಯಾರು ಹೊಣೆ ಎಂದು ಪ್ರಶ್ನಿಸುವಂತಾಗಿತ್ತು.

ಇನ್ನೂ 29-08-2020 ರಂದು ಸ್ಥಳೀಯ ಶಾಸಕರು ಕೋಟೆ ಅವ್ಯವಹಾರ ಕುರಿತು ಪ್ರತಿಭಟನೆ ನಡೆಸಿದರೂ ಸಹ ಅವರನ್ನ‌ ಲೆಕ್ಕಿಸದೆ, ಪೊಲೀಸರಿಂದ ಬಂಧನಕ್ಕೆ‌ ಒಳಪಡಿಸಿ ಈ ಪಾರ್ಕ್ ಉದ್ಘಾಟನೆಯನ್ನ‌ ಅಂದಿನ‌ ಕಾರ್ಪೊರೇಟರ್ ಲೋಕೇಶ್ ಹಾಗೂ ಸಂಸದ ಡಿವಿ ಸದಾನಂದ ಗೌಡ ನೆರೆವೇರಿಸಿದ್ದರು.

Also Read:

ಕೆಂಪೇಗೌಡ ಪಾರ್ಕ್‌ನಲ್ಲಿ ಮತ್ತೊಂದು ಅವಘಡ: ಕೋಟೆ ಗೋಡೆ ಕುಸಿತ; 3 ವರ್ಷ ಹಿಂದಷ್ಟೇ ಬಿಬಿಎಂಪಿ ನಿರ್ಮಿಸಿದ್ದ ಗೋಡೆ ಇದು

CM Bommai ಜೊತೆ ಅರ್ಧಗಂಟೆಗೂ ಹೆಚ್ಚು ಕಾಲ ರಮೇಶ್​ ಜಾರಕಿಹೊಳಿ ಮೀಟಿಂಗ್|Tv9kannada

(wall collapse in bbmp kempegowda park in dasarahalli mla meetng held )

Published On - 11:26 am, Tue, 19 October 21

ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ