AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP Election: ವಾರ್ಡ್ ಪುನರ್ವಿಂಗಡಣೆ ಅನಿವಾರ್ಯ, ಬಿಬಿಎಂಪಿ ಚುನಾವಣೆ ಮುಂದೂಡಿಕೆ ಖಚಿತ

ಕರ್ನಾಟಕ ಸರ್ಕಾರವು ಹೊಸದಾಗಿ ವಾರ್ಡ್ ಪುನರ್ವಿಂಗಡಣೆ ಅನಿವಾರ್ಯವೆಂದು ಅಭಿಪ್ರಾಯಪಟ್ಟಿರುವ ಹಿನ್ನೆಲೆ ಬಿಬಿಎಂಪಿ ಚುನಾವಣೆ ಮುಂದೂಡಿಕೆಯಾಗುವ ಸಾಧ್ಯತೆ ಹೆಚ್ಚು. ಬಿಬಿಎಂಪಿ ವಾರ್ಡ್ ಪುನರ್ವಿಂಗಡಣೆಯಲ್ಲಿ ಲೋಪಗಳಿವೆ ಅಂತಾ ಎಜೆ ಹೈಕೋರ್ಟ್​​ಗೆ ತಿಳಿಸಿದ್ದಾರೆ.

BBMP Election: ವಾರ್ಡ್ ಪುನರ್ವಿಂಗಡಣೆ ಅನಿವಾರ್ಯ, ಬಿಬಿಎಂಪಿ ಚುನಾವಣೆ ಮುಂದೂಡಿಕೆ ಖಚಿತ
ಹೈಕೋರ್ಟ್, ಬಿಬಿಎಂಪಿ
Rakesh Nayak Manchi
|

Updated on: Jun 19, 2023 | 5:44 PM

Share

ಬೆಂಗಳೂರು: ಬಿಬಿಎಂಪಿ (BBMP) ವಾರ್ಡ್ ಪುನರ್ವಿಂಗಡಣೆಯಲ್ಲಿ ಲೋಪಗಳಿರುವುದರಿಂದ ಹೊಸದಾಗಿ ವಾರ್ಡ್ ಪುನರ್ವಿಂಗಡಣೆ ಅನಿವಾರ್ಯ ಎಂಬ ನಿರ್ಧಾರಕ್ಕೆ ಕರ್ನಾಟಕ ಸರ್ಕಾರ ಬಂದಿದೆ. ಈ ಬಗ್ಗೆ ಸರ್ಕಾರದ ಪರ ಎಜೆ ಶಶಿಕಿರಣ್ ಶೆಟ್ಟಿ ಅವರು ಕರ್ನಾಟಕ ಹೈಕೋರ್ಟ್​ಗೆ (Karnataka High Court) ಹೇಳಿಕೆ ನೀಡಿದ್ದು, ಹೊಸದಾಗಿ ವಾರ್ಡ್ ಪುನರ್ವಿಂಗಡಿಸಲು ಕೋರ್ಟ್ 12 ವಾರಗಳ ಕಾಲಾವಕಾಶ ನೀಡಿದೆ. ಹೀಗಾಗಿ ಸದ್ಯಕ್ಕೆ ಬಿಬಿಎಂಪಿ ಚುನಾವಣೆ ನಡೆಯುವುದು ಅನುಮಾನ.

ಬಿಬಿಎಂಪಿ ವಾರ್ಡ್ ಪುನರ್ವಿಂಗಡಣೆಯಲ್ಲಿ ಲೋಪಗಳಿವೆ, ಲೋಪ ಸರಿಪಡಿಸಿ ಹೊಸದಾಗಿ ವಾರ್ಡ್ ಪುನರ್ವಿಂಗಡಣೆ ಮಾಡಬೇಕಿದೆ. ಹೀಗಾಗಿ ಹೊಸದಾಗಿ ವಾರ್ಡ್ ಪುನರ್ವಿಂಗಡಣೆಗೆ ಕಾಲಾವಕಾಶ ನೀಡುವಂತೆ ಎಜೆ ಶಶಿಕಿರಣ್ ಶೆಟ್ಟಿ ಕೋರಿದ್ದಾರೆ. ವಾದ ಆಲಿಸಿದ ಸಿಜೆ ಪ್ರಸನ್ನ ಬಿ ವರಾಳೆ, ನ್ಯಾ.ಎಂ.ಜಿ.ಎಸ್.ಕಮಲ್ ಅವರಿದ್ದ ವಿಭಾಗೀಯ ಪೀಠ, ವಾರ್ಡ್ ಪುನರ್​ವಿಂಗಡಣೆಗೆ 12 ವಾರಗಳ ಕಾಲಾವಕಾಶ ನೀಡಿದ ನೀಡಿ ಆದೇಶಿಸಿತು.

ಇದನ್ನೂ ಓದಿ: Land Encroachment: ಹೆಚ್‌ಡಿ ಕುಮಾರಸ್ವಾಮಿ, ಡಿ.ಸಿ.ತಮ್ಮಣ್ಣ ಭೂಕಬಳಿಕೆ ಕೇಸ್‌: ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್‌ ತಾಕೀತು

ಬಿಬಿಎಂಪಿ ಚುನಾವಣೆ ನಡೆದು 8 ವರ್ಷಗಳು ತುಂಬುತ್ತಿದೆ. ಬಿಜೆಪಿ ಸರ್ಕಾರವಿದ್ದಾಗ ಪಾಲಿಕೆ ಚುನಾವಣೆಯನ್ನೇ ಗಮನದಲ್ಲಿ ಇಟ್ಟುಕೊಂಡು ವಾರ್ಡ್ ವಿಂಗಡಣೆ ಮಾಡಿದ್ದರು. ಆದರೆ ಇದು ಕ್ರಮಬದ್ಧವಾಗಿಲ್ಲ ಅಂತ ಕಾಂಗ್ರೆಸ್​ ಶಾಸಕರು, ಮಾಜಿ ಕಾರ್ಪೊರೇಟರ್​ಗಳು ಆರೋಪಿಸುತ್ತಿದ್ದರು. ಇದೀಗ, ವಿಧಾನಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿ ರಾಜ್ಯದ ಚುಕ್ಕಾಣಿ ಹಿಡಿಯುತ್ತಿದ್ದಂತಯೇ ಕಾಂಗ್ರೆಸ್ ನಾಯಕರ ಕಣ್ಣು ಬಿಬಿಎಂಪಿ ಮೇಲೆ ಬಿದ್ದಿದೆ.

ಲೋಕಾಸಭಾ ಚುನಾವಣೆಗೂ ಮುನ್ನ ಪಾಲಿಕೆಯ ಚುನಾವಣೆ ನಡೆಸಿ ಅಧಿಕಾರ ಹಿಡಿಯಲು ಕೈ ನಾಯಕರು ಪ್ಲಾನ್ ಮಾಡಿದ್ದು ಬಿಜೆಪಿಗೆ ಪಾಲಿಕೆಯಲ್ಲಿ ಈ ಬಾರಿ ಠಕ್ಕರ್ ನೀಡಲು ರಣತಂತ್ರ ರೂಪಿಸುತ್ತಿದೆ. ವಾರ್ಡ್ ವಿಗಂಡಣೆ ಹಾಗೂ ಮೀಸಲಾತಿಗೆ ಅಂತ್ಯ ಹಾಡಿ ಅಧಿಕಾರಕ್ಕೇರುವ ಕನಸು ಕಾಣುತ್ತಿದೆ. ಐದು ಗ್ಯಾರಂಟಿಗಳ ಜಾರಿಗೆ ಹೆಜ್ಜೆ ಇಟ್ಟ ಕಾಂಗ್ರೆಸ್ ಸರ್ಕಾರದ ಮೇಲೆ ಜನರ ನಿರೀಕ್ಷೆ ಇದ್ದು, ಇದೇ ಅಲೆಯಲ್ಲಿ ಪಾಲಿಕೆಯನ್ನೂ ಗೆಲ್ಲಬಹುದು ಅಂತ ಕೈಕಲಿಗಳು ಯೋಚಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ