AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP Election: ವಾರ್ಡ್ ಪುನರ್ವಿಂಗಡಣೆ ಅನಿವಾರ್ಯ, ಬಿಬಿಎಂಪಿ ಚುನಾವಣೆ ಮುಂದೂಡಿಕೆ ಖಚಿತ

ಕರ್ನಾಟಕ ಸರ್ಕಾರವು ಹೊಸದಾಗಿ ವಾರ್ಡ್ ಪುನರ್ವಿಂಗಡಣೆ ಅನಿವಾರ್ಯವೆಂದು ಅಭಿಪ್ರಾಯಪಟ್ಟಿರುವ ಹಿನ್ನೆಲೆ ಬಿಬಿಎಂಪಿ ಚುನಾವಣೆ ಮುಂದೂಡಿಕೆಯಾಗುವ ಸಾಧ್ಯತೆ ಹೆಚ್ಚು. ಬಿಬಿಎಂಪಿ ವಾರ್ಡ್ ಪುನರ್ವಿಂಗಡಣೆಯಲ್ಲಿ ಲೋಪಗಳಿವೆ ಅಂತಾ ಎಜೆ ಹೈಕೋರ್ಟ್​​ಗೆ ತಿಳಿಸಿದ್ದಾರೆ.

BBMP Election: ವಾರ್ಡ್ ಪುನರ್ವಿಂಗಡಣೆ ಅನಿವಾರ್ಯ, ಬಿಬಿಎಂಪಿ ಚುನಾವಣೆ ಮುಂದೂಡಿಕೆ ಖಚಿತ
ಹೈಕೋರ್ಟ್, ಬಿಬಿಎಂಪಿ
Rakesh Nayak Manchi
|

Updated on: Jun 19, 2023 | 5:44 PM

Share

ಬೆಂಗಳೂರು: ಬಿಬಿಎಂಪಿ (BBMP) ವಾರ್ಡ್ ಪುನರ್ವಿಂಗಡಣೆಯಲ್ಲಿ ಲೋಪಗಳಿರುವುದರಿಂದ ಹೊಸದಾಗಿ ವಾರ್ಡ್ ಪುನರ್ವಿಂಗಡಣೆ ಅನಿವಾರ್ಯ ಎಂಬ ನಿರ್ಧಾರಕ್ಕೆ ಕರ್ನಾಟಕ ಸರ್ಕಾರ ಬಂದಿದೆ. ಈ ಬಗ್ಗೆ ಸರ್ಕಾರದ ಪರ ಎಜೆ ಶಶಿಕಿರಣ್ ಶೆಟ್ಟಿ ಅವರು ಕರ್ನಾಟಕ ಹೈಕೋರ್ಟ್​ಗೆ (Karnataka High Court) ಹೇಳಿಕೆ ನೀಡಿದ್ದು, ಹೊಸದಾಗಿ ವಾರ್ಡ್ ಪುನರ್ವಿಂಗಡಿಸಲು ಕೋರ್ಟ್ 12 ವಾರಗಳ ಕಾಲಾವಕಾಶ ನೀಡಿದೆ. ಹೀಗಾಗಿ ಸದ್ಯಕ್ಕೆ ಬಿಬಿಎಂಪಿ ಚುನಾವಣೆ ನಡೆಯುವುದು ಅನುಮಾನ.

ಬಿಬಿಎಂಪಿ ವಾರ್ಡ್ ಪುನರ್ವಿಂಗಡಣೆಯಲ್ಲಿ ಲೋಪಗಳಿವೆ, ಲೋಪ ಸರಿಪಡಿಸಿ ಹೊಸದಾಗಿ ವಾರ್ಡ್ ಪುನರ್ವಿಂಗಡಣೆ ಮಾಡಬೇಕಿದೆ. ಹೀಗಾಗಿ ಹೊಸದಾಗಿ ವಾರ್ಡ್ ಪುನರ್ವಿಂಗಡಣೆಗೆ ಕಾಲಾವಕಾಶ ನೀಡುವಂತೆ ಎಜೆ ಶಶಿಕಿರಣ್ ಶೆಟ್ಟಿ ಕೋರಿದ್ದಾರೆ. ವಾದ ಆಲಿಸಿದ ಸಿಜೆ ಪ್ರಸನ್ನ ಬಿ ವರಾಳೆ, ನ್ಯಾ.ಎಂ.ಜಿ.ಎಸ್.ಕಮಲ್ ಅವರಿದ್ದ ವಿಭಾಗೀಯ ಪೀಠ, ವಾರ್ಡ್ ಪುನರ್​ವಿಂಗಡಣೆಗೆ 12 ವಾರಗಳ ಕಾಲಾವಕಾಶ ನೀಡಿದ ನೀಡಿ ಆದೇಶಿಸಿತು.

ಇದನ್ನೂ ಓದಿ: Land Encroachment: ಹೆಚ್‌ಡಿ ಕುಮಾರಸ್ವಾಮಿ, ಡಿ.ಸಿ.ತಮ್ಮಣ್ಣ ಭೂಕಬಳಿಕೆ ಕೇಸ್‌: ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್‌ ತಾಕೀತು

ಬಿಬಿಎಂಪಿ ಚುನಾವಣೆ ನಡೆದು 8 ವರ್ಷಗಳು ತುಂಬುತ್ತಿದೆ. ಬಿಜೆಪಿ ಸರ್ಕಾರವಿದ್ದಾಗ ಪಾಲಿಕೆ ಚುನಾವಣೆಯನ್ನೇ ಗಮನದಲ್ಲಿ ಇಟ್ಟುಕೊಂಡು ವಾರ್ಡ್ ವಿಂಗಡಣೆ ಮಾಡಿದ್ದರು. ಆದರೆ ಇದು ಕ್ರಮಬದ್ಧವಾಗಿಲ್ಲ ಅಂತ ಕಾಂಗ್ರೆಸ್​ ಶಾಸಕರು, ಮಾಜಿ ಕಾರ್ಪೊರೇಟರ್​ಗಳು ಆರೋಪಿಸುತ್ತಿದ್ದರು. ಇದೀಗ, ವಿಧಾನಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿ ರಾಜ್ಯದ ಚುಕ್ಕಾಣಿ ಹಿಡಿಯುತ್ತಿದ್ದಂತಯೇ ಕಾಂಗ್ರೆಸ್ ನಾಯಕರ ಕಣ್ಣು ಬಿಬಿಎಂಪಿ ಮೇಲೆ ಬಿದ್ದಿದೆ.

ಲೋಕಾಸಭಾ ಚುನಾವಣೆಗೂ ಮುನ್ನ ಪಾಲಿಕೆಯ ಚುನಾವಣೆ ನಡೆಸಿ ಅಧಿಕಾರ ಹಿಡಿಯಲು ಕೈ ನಾಯಕರು ಪ್ಲಾನ್ ಮಾಡಿದ್ದು ಬಿಜೆಪಿಗೆ ಪಾಲಿಕೆಯಲ್ಲಿ ಈ ಬಾರಿ ಠಕ್ಕರ್ ನೀಡಲು ರಣತಂತ್ರ ರೂಪಿಸುತ್ತಿದೆ. ವಾರ್ಡ್ ವಿಗಂಡಣೆ ಹಾಗೂ ಮೀಸಲಾತಿಗೆ ಅಂತ್ಯ ಹಾಡಿ ಅಧಿಕಾರಕ್ಕೇರುವ ಕನಸು ಕಾಣುತ್ತಿದೆ. ಐದು ಗ್ಯಾರಂಟಿಗಳ ಜಾರಿಗೆ ಹೆಜ್ಜೆ ಇಟ್ಟ ಕಾಂಗ್ರೆಸ್ ಸರ್ಕಾರದ ಮೇಲೆ ಜನರ ನಿರೀಕ್ಷೆ ಇದ್ದು, ಇದೇ ಅಲೆಯಲ್ಲಿ ಪಾಲಿಕೆಯನ್ನೂ ಗೆಲ್ಲಬಹುದು ಅಂತ ಕೈಕಲಿಗಳು ಯೋಚಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!